ಬೆಂಗಳೂರು : ದತ್ತಿ ಇಲಾಖೆಯ ದೇವಸ್ಥಾನಗಳ ಕಾಣಿಕೆ ಡಬ್ಬಿಗೆ ಹಾಕಿದ ಹಣ ಅನ್ಯ ಧರ್ಮದ ಪ್ರಾರ್ಥನಾ ಕೇಂದ್ರಗಳ ಪಾಲಾಗುತ್ತಿದೆ ಅನ್ನುವ ಆರೋಪ ಹಲವು ವರ್ಷಗಳಿಂದ ಇದೆ. ಆದರೆ ಈ ಬಗ್ಗೆ ಯಾರೊಬ್ಬರೂ ಸ್ಪಷ್ಟನೆಯನ್ನೂ ಕೊಟ್ಟಿರಲಿಲ್ಲ. ಆದರೆ ಕೊರೋನಾ ವೇಳೆ ದೇವಸ್ಥಾನದ ಅರ್ಚಕರಿಗೆ ( ತಸ್ತಿಕ್) ಸರ್ಕಾರ ಹಣ ಬಿಡುಗಡೆ ಮಾಡಿದ ಸಂದರ್ಭದಲ್ಲಿ, ಆ ಪಟ್ಟಿಯಲ್ಲಿ ಮುಸ್ಲಿಂ ಧಾರ್ಮಿಕ ಕೇಂದ್ರಗಳ ಹೆಸರಿತ್ತು.
ಯಾವಾಗ ಈ ಆದೇಶ ವೈರಲ್ ಆಯ್ತೋ ತಕ್ಷಣ ಎಚ್ಚೆತ್ತುಕೊಂಡ ಧಾರ್ಮಿಕ ಇಲಾಖೆ ಆದೇಶವನ್ನು ಹಿಂದಕ್ಕೆ ಪಡೆಯಿತು. ಆಗ ಹಿಂದೂ ಧಾರ್ಮಿಕ ಕೇಂದ್ರಗಳ ಹಣ ಅನ್ಯ ಧರ್ಮದ ಪಾಲಾಗುತ್ತಿರುವುದನ್ನು ತಡೆಯಿರಿ ಅನ್ನುವ ಹೋರಾಟಕ್ಕೆ ಮತ್ತೆ ಚಾಲನೆ ಸಿಕ್ತು.
ಇದನ್ನೂ ಓದಿ : ಬಿಜೆಪಿ ದ್ವಂದ ನೀತಿಗೆ ಸಾಕ್ಷಿ ಬೇಕಾ..? ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಹಣ ಮಸೀದಿ ಮದರಸದ ಮೌಲ್ವಿಗಳಿಗೆ…!
ಇದೀಗ ಪ್ರತಿಭಟನೆಗೆ ಮಣಿದಿರುವ ಸರ್ಕಾರ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಸೂಚನೆಯಂತೆ. ಹಿಂದೂ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನದ ಹಣ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ಬಳಸುವಂತಿಲ್ಲ ಅನ್ನುವ ಆದೇಶ ಹೊರಡಿಸಿದೆ. ರಾಜ್ಯದ 757 ಪ್ರಾರ್ಥನ ಕೇಂದ್ರಗಳಿಗೆ ಹಾಗೂ 111 ವರ್ಷಾಸನ ಪಡೆಯುತ್ತಿರುವ ಪ್ರಾರ್ಥನಾ ಕೇಂದ್ರಗಳಿಗೆ ಸರ್ಕಾರ ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ನೀಡುತ್ತಿದ್ದ ಅನುದಾನ ತಡೆ ಹಿಡಿದಿದ್ದು, ಇಂದು ಅಧಿಕೃತ ಆದೇಶ ಹೊರಡಿಸಿದೆ.
ಇನಾಂ ರದ್ದತಿ ಕಾಯ್ದೆ 1977 ರ ಪರಿಹಾರಾರ್ಥವಾಗಿ ನೀಡುತ್ತಿರುವ ತಸ್ತಿಕ್ ಮತ್ತು ವರ್ಷಾಸನವನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮತ್ತು ದೇವಸ್ಥಾನಗಳಿಂದ ನೀಡುವ ಬದಲು, ಇನ್ನು ಮುಂದೆ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಗಳಿಂದ ನೀಡಲು ಅನುದಾನ ಬಿಡುಗಡೆ ಮಾಡಬೇಕು ಎಂದು ಆದೇಶಸಲಾಗಿದೆ.
Discussion about this post