ಬೆಂಗಳೂರು : ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ ನಡೆದಿದೆ ಎನ್ನಲಾದ ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಇದೀಗ ಮರುಜೀವ ಬಂದಿದೆ. ಕುಮಾರಸ್ವಾಮಿ ಸಿಎಂ ಆಗಿದ್ದ ಸಂದರ್ಭದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಅಲೋಕ್ ಕುಮಾರ್ ಕೆಲ ಅಧಿಕಾರಿಗಳ, ರಾಜಕಾರಣಿಗಳ, ಸ್ವಾಮೀಜಿಗಳ ಫೋನ್ ಕದ್ದಾಲಿಕೆ ಮಾಡಿದ್ದಾರೆ ಅನ್ನುವ ಆರೋಪ ಕೇಳಿ ಬಂದಿತ್ತು. ಇದರಲ್ಲಿ ಐಪಿಎಸ್ ಅಧಿಕಾರಿ ಭಾಸ್ಕರರಾವ್ ಕೂಡಾ ಓರ್ವ ಆರೋಪಿ ಜೊತೆಗೆ ಮಾತನಾಡಿರುವುದನ್ನು ಅಲೋಕ್ ಕುಮಾರ್ ಆಲಿಸಿದ್ದಾರೆ ಎನ್ನಲಾಗಿತ್ತು.
ಈ ಸಂಬಂಧ ಕೋರ್ಟ್ ಮೆಟ್ಟಿಲೇರಿದ್ದ ಭಾಸ್ಕರಾವ್ ತನಿಖೆಗೆ ಮನವಿ ಮಾಡಿದ್ದರು. ಬಳಿಕ ಪ್ರಕರಣ ಸಿಬಿಐಗೆ ವರ್ಗಾವಣೆಯಾಗಿತ್ತು. ಈ ಸಂದರ್ಭದಲ್ಲಿ ತನಿಖೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿತ್ತು. ಸಿಬಿಐ ತನಿಖೆ ಕುರಿತಂತೆ ಅಸಮಾಧಾನ ವ್ಯಕ್ತಪಡಿಸಿದ್ದ ಭಾಸ್ಕರರಾವ್, ಬಿ ರಿಪೋರ್ಟ್ ತಿರಸ್ಕರಿಸಿ ಮತ್ತೊಂದು ತನಿಖಾ ಸಂಸ್ಥೆಯಿಂದ ಮರು ತನಿಖೆ ನಡೆಸಲು ಆದೇಶಿಸುವಂತೆ ಮನವಿ ಮಾಡಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಬಿ ರಿಪೋರ್ಟ್ ಅನ್ನು ತಿರಸ್ಕರಿಸಿದ್ದು ಮುಂದಿನ ತನಿಖೆ ನಡೆಸಿ ಸಮರ್ಪಕವಾದ ವರದಿ ಸಲ್ಲಿಸುವಂತೆ ಸೂಚಿಸಿದೆ.
additional Director General of Police (Railways) Bhaskar Rao on Tuesday filed a protest petition in the CBI special court against the closure report by the CBI in the phone tapping case
Discussion about this post