ಮಂಗಳೂರು : ಸಾಕಷ್ಟು ನಿರೀಕ್ಷೆಯಿಂದ ಮಾರುಕಟ್ಟೆಗೆ ಬಂದಿದ್ದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಎಲ್ಲಾ ನಿರೀಕ್ಷೆಗಳನ್ನು ನುಚ್ಚುನೂರು ಮಾಡಿದೆ. ದೇಶದ ಅನೇಕ ಭಾಗಗಳಲ್ಲಿ ಈ ವಾಹನಗಳಿಗೆ ಬೆಂಕಿ ಬೀಳಲಾರಂಭಿಸಿದ್ದು, ಪರಿಸರ ಸ್ನೇಹಿಯಾಗುವ ಕನಸಿನಿಂದ ಬಂಡವಾಳ ಸುರಿದವರು ಕೈ ಸುಟ್ಟುಕೊಂಡಿದ್ದಾರೆ.
ಹೀಗೆ ಮಂಗಳೂರಿನಲ್ಲಿ ಜಾರ್ಜ್ ಗೆ ಇಟ್ಟಿದ್ದ ಎಲೆಕ್ಟ್ರಿಕ್ ಸ್ಕೂಟರ್ ಬೆಂಕಿಗೆ ಆಹುತಿಯಾಗಿದೆ. ಭಾನುವಾರ ಸಂಜೆ ಈ ಘಟನೆ ನಗರದ ಬೊಂದೇಲ್ ನ ಕೆ.ಎಚ್. ಕಾಲೋನಿಯಲ್ಲಿ ನಡೆದಿದೆ. ಘಟನೆಯಲ್ಲಿ ದ್ವಿಚಕ್ರ ವಾಹನ ಸುಟ್ಟು ಕರಕಲಾಗಿದೆ.
ಜಾರ್ಜ್ ಗೆ ಹಾಕಿದ ಕೆಲವೇ ಕ್ಷಣಗಳಲ್ಲಿ ಬೆಂಕಿ ಹತ್ತಿಕೊಂಡಿದೆ. ಕೆಲವೇ ಕ್ಷಣದಲ್ಲಿ ಸ್ಕೂಟರ್ ಸ್ಫೋಟಗೊಂಡಿದೆ. ಇನ್ನು ವಿಷಯ ತಿಳಿದ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದೆ.
Discussion about this post