ಮಂಗನಕಾಯಿಲೆ ಇದೀಗ ದೊಡ್ಡ ತಲೆನೋವಾಗಿ ಪರಿಣಮಿಸಿದೆ
ಮಲೆನಾಡು ಭಾಗದಲ್ಲಿ ಕಾಟ ಕೊಡುತ್ತಿದ್ದ ಮಂಗನಕಾಯಿಲೆ (Kyasanur Forest Disease) ಇದೀಗ ಉತ್ತರ ಕನ್ನಡ (Uttara Kannada) ಜಿಲ್ಲೆಯ ಎದೆ ಬಡಿತ ಹೆಚ್ಚಿಸಿದೆ. ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಪ್ರಕರಣ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ 10 ದಿನಗಳಲ್ಲಿ 21 ಜನರಿಗೆ ಸೋಂಕು ತಗುಲಿದೆ.
ಬಿಸಿಲ ಪ್ರಭಾವ ಹೆಚ್ಚಾಗುತ್ತಿದ್ದಂತೆ ಕಾಯಿಲೆ ಹೆಚ್ಚಾಗುವ ಆತಂಕವೂ ಜನರಲ್ಲಿದ್ದು, ಸೋಂಕು ಹರಡದಂತೆ ತಡೆಯಲು ಯಾವುದೇ ರೋಗ ನಿರೋಧಕ ಲಭ್ಯವಿಲ್ಲ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವೊಂದೇ ಪರಿಹಾರ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ನೀರಜ್ ತಿಳಿಸಿದ್ದಾರೆ.
ಇದನ್ನು ಓದಿ : ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ
. ಒಟ್ಟು 21 ಜನರ ಪೈಕಿ 8 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಬ್ಬರು ಮಂಗಳೂರಿನಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಳಿದ ಆರು ಜನ ಸಿದ್ದಾಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದ 13 ಜನ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಾ. ನೀರಜ್ ವಿವರ ಕೊಟ್ಟಿದ್ದಾರೆ.
ಇದರೊಂದಿಗೆ ಮಂಗನ ಕಾಯಿಲೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸ ಜಾರಿಯಲ್ಲಿದ್ದು, ಅರಣ್ಯಕ್ಕೆ ತೆರಳದಂತೆ ಸೂಚಿಸಲಾಗಿದೆ. ಅನಿವಾರ್ಯವಾದರೆ ಹೋಗುವುದನ್ನು ಕಡಿಮೆ ಮಾಡಿ ಎಂದು ಮನವಿ ಮಾಡಲಾಗಿದೆ. ಈ ವ್ಯಾಪ್ತಿಯಲ್ಲಿ ಯಾರಿಗಾದ್ರೂ ಜ್ವರ, ಕೆಮ್ಮು ಲಕ್ಷಣ ಕಂಡು ಬಂದಲ್ಲಿ ತಕ್ಷಣ ವೈದ್ಯಕೀಯ ಚಿಕಿತ್ಸೆ ಪಡೆಯಲು ಜಿಲ್ಲಾ ಆರೋಗ್ಯ ಇಲಾಖೆ ಸೂಚಿಸಿದೆ.
ಕಳೆದ ವರ್ಷ ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿರಲಿಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ಏಕಾಏಕಿ ಸೋಂಕು ಏರಲಾರಂಭಿಸಿದೆ. ಜೋಯಿಡಾ, ಕುಂಬಾರವಾಡ ಸೇರಿ ಸುತ್ತಮುತ್ತಲಿನ ಸ್ಥಳಗಳಲ್ಲಿ ಎಚ್ಚರಿಕೆ ವಹಿಸಲಾಗಿದೆ. ಸೋಂಕಿತರ ಮೇಲೆ ನಿಗಾ ಇಡುವಂತ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ.
Discussion about this post