ಜೆಡಿಎಸ್ನಿಂದ ಶಿಕ್ಷಕರ ಕ್ಷೇತ್ರದಲ್ಲಿ ಗೆದ್ದು ವಿಧಾನಪರಿಷತ್ ಸದಸ್ಯರಾಗಿರುವ ಪುಟ್ಟಣ್ಣ ಅವರನ್ನು ಚನ್ನಪಟ್ಟಣದಲ್ಲಿ ಪೊಲೀಸರು ಚಡ್ಡಿಯಲ್ಲಿ ನಿಲ್ಲಿಸಿದ್ದರು ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ವಾಗ್ದಾಳಿ ನಡೆಸಿದ್ದಾರೆ.
ಪುಟ್ಟಣ್ಣ ಅವರನ್ನು ಪೊಲೀಸರು ಠಾಣೆಗೆ ಕರೆಸಿ ಕೇವಲ ಚಡ್ಡಿಯಲ್ಲಿ ನಿಲ್ಲಿಸಿದ್ದರು. ಇಂತವರನ್ನು ದೇವೇಗೌಡರು ಕರೆ ತಂದು ಎಂಎಲ್ಸಿ ಮಾಡಿದ್ದರು. ನಂತರ ನಮ್ಮ ಶಾಸಕರು ಅವರನ್ನು ವಿಧಾನ ಪರಿಷತ್ ಉಪ ಸಭಾಪತಿಯನ್ನಾಗಿ ಮಾಡಿದ್ದರು. ಪಕ್ಷದಿಂದ ಅಧಿಕಾರ ಅನುಭವಿಸಿ ಈಗ ಪಕ್ಷದ ವಿರುದ್ಧ ಮಾತನಾಡುತ್ತಿದ್ದಾರೆ. 4 ವರ್ಷಗಳಿಂದ ಪಕ್ಷ ವಿರೋಧಿ ಕೆಲಸ ಮಾಡುತ್ತಿದ್ದಾರೆ. ಅವರು ಪಕ್ಷ ಬಿಟ್ಟರೆ ನಷ್ಟ ಇಲ್ಲ ತಾಕತ್ತು ಇದ್ದರೆ ಅವರು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿ ಎಂದು ಇದೇ ವೇಳೆ ರೇವಣ್ಣ ಸವಾಲು ಹಾಕಿದ್ದಾರೆ.
Discussion about this post