ಬೆಂಗಳೂರು : BBMP ಚುನಾವಣೆ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷ ಮತದಾರರನ್ನು ತಲುಪಲು ಹೊಸ ಹೊಸ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಬಿಬಿಎಂಪಿ ಚುನಾವಣೆ ಗೆಲ್ಲಲು ಯೋಚಿಸಿರುವ ಆಪ್ ಗೊರಕೆ ಸಾಕು – ಪೊರಕೆ ಬೇಕು ಅನ್ನುವ ಅಭಿಯಾನಕ್ಕೆ ಚಾಲನೆ ನೀಡಿದೆ.
ಈ ಆಂದೋಲನ ಕುರಿತಂತೆ ಮಾಹಿತಿ ನೀಡಿರುವ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ, ಬೆಂಗಳೂರಿಗರು ಮೂರು ಪಕ್ಷಗಳ ಆಡಳಿತದಿಂದ ಬೇಸತ್ತು ಹೋಗಿದ್ದಾರೆ.
ಬಿಜೆಪಿ ಸರ್ಕಾರ ಹಾಗೂ ಬಿಬಿಎಂಪಿಯ ಆಡಳಿತ ವೈಫಲ್ಯಗಳನ್ನು ಮನೆ ಮನೆಗೂ ತಲುಪಿಸಲು ಹಮ್ಮಿಕೊಂಡ ಕಾರ್ಯಕ್ರಮವೇ ಗೊರಕೆ ಸಾಕು….ಪೊರಕೆ ಬೇಕು.. ಅಂದಿದ್ದಾರೆ.
Discussion about this post