ಅಭಿಷೇಕ್ ಮತ್ತು ನಿಖಿಲ್ ಇಬ್ಬರು ಉತ್ತಮ ಗೆಳೆಯರು. ಚುನಾವಣೆಯ ಪ್ರಯುಕ್ತ ಇಬ್ಬರು ಮುಖಾಮುಖಿಯಾದರು. ಸಂಬಂಧ ಅವರಿಬ್ಬರ ನಡುವೆ ಹಳಸಿತೋ ಇಲ್ಲವೋ ಗೊತ್ತಿಲ್ಲ.ಮಾಧ್ಯಮಗಳಲ್ಲಿ ಇವರಿಬ್ಬರ ನಡುವಿನ ಗೆಳೆತನಕ್ಕೆ ಎಳ್ಳು ನೀರು ಎಂದು ಸುದ್ದಿಯಾಯ್ತು.
ಇಬ್ಬರ ಗೆಳೆತನಕ್ಕೆ ಚುನಾವಣೆ ಮುಳುವಾಯಿತು ಎಂದು ಹೇಳಲಾಯ್ತು. ಇದೀಗ ಗೆಳೆಯರಿಬ್ಬರು ಸಾಮಾಜಿಕ ಜಾಲತಾಣದಲ್ಲಿ ಮಾತುಕತೆ ನಡೆಸುವ ಮೂಲಕ ಹಳೆಯದೆಲ್ಲವನ್ನು ಮರೆತು ಒಟ್ಟಿಗೆ ಸಾಗೋಣ ಎಂದಿದ್ದಾರೆ.
ಅಭಿಷೇಕ್ ಜೊತೆ ಮತ್ತೆ ಸ್ನೇಹಕ್ಕೆ ಹಸ್ತ ಚಾಚಿದ ನಿಖಿಲ್ ಕುಮಾರಸ್ವಾಮಿ
ಗೆಳೆಯ ನಿಖಿಲ್ ಶುಭಾಶಯದಿಂದ ಸಂತಸಗೊಂಡ ಅಭಿಷೇಕ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.
“ನಿನ್ನ ಈ ಬೆಂಬಲಕ್ಕೆ ತುಂಬಾ ಧನ್ಯವಾದಗಳು ಸಹೋದರ. ನನಗೆ ಗೊತ್ತು ಮೊದಲ ಚಿತ್ರ ರಿಲೀಸ್ ಗೂ ಮೊದಲು ಎಷ್ಟು ಒತ್ತಡ ಇರುತ್ತೆ ಎನ್ನುವುದು. ನಿನ್ನ ಈ ಮಾತುಗಳು ಚಿತ್ರರಂಗದಲ್ಲಿ ಒಗ್ಗಟ್ಟಿನಿಂದ ಮತ್ತು ಪ್ರೀತಿಯಿಂದ ಮತ್ತದೆ ಹುಮ್ಮಸ್ಸಿನ ಜೊತೆಗೆ ಮುಂದುವರೆಯಲು ಸಹಾಯಕವಾಗಲಿದೆ. ಈ ಮಾತುಗಳನ್ನು ಹೇಳಿದ್ದಕ್ಕೆ ಧನ್ಯವಾದಗಳು”
“ಒಬ್ಬ ಸ್ನೇಹಿತನಾಗಿ ಯಾವಾಗಲು ನಿನ್ನ ಯಶಸ್ಸನ್ನು ಬಯಸುತ್ತೇನೆ. ಇದು ನಿನ್ನ ಹಿನ್ನಡೆ ಎಂದು ತಿಳಿದುಕೊಳ್ಳಬೇಡ. ನಿನಗೂ ಗೊತ್ತು ಈ ಇದೆಲ್ಲ ಜೀವನದ ಒಂದು ಭಾಗ ಅಷ್ಟೆ ಎಂದು. ಮಂಡ್ಯದ ಜಿಲ್ಲೆಗೆ ನಿನ್ನ ಈ ಮಾತುಗಳು ಪ್ರೋತ್ಸಾಹದಾಯಕವಾಗಿರಲಿದೆ. ಮತ್ತು ಮಂಡ್ಯ ಜಿಲ್ಲೆಯ ಉತ್ತಮ ಅಭಿವೃದ್ಧಿಗೆ ಒಟ್ಟಿಗೆ ಕೆಲಸ ಮಾಡೋಣ”
“ನಿನ್ನ ಈ ಮಾತುಗಳಿಂದ ಕೇವಲ ಮಂಡ್ಯ ಮಾತ್ರವಲ್ಲ, ಇಡೀ ಕರ್ನಾಟಕ ನಿನ್ನ ಈ ಒಳ್ಳೆತನವನ್ನು ಪ್ರಶಂಸೆ ಮಾಡುತ್ತದೆ. ಒಳ್ಳೆಯದಾಗಲಿ ನಿನಗೆ. ನೀನು ಯಾವಾಗಲು ನನ್ನ ಸ್ನೇಹಿತ” ಎಂದು ನಿಖಿಲ್ ಮಾತಿಗೆ ಗೆಳೆಯ ಅಭಿಷೇಕ್ ಪ್ರತಿಕ್ರಿಯೆ ನೀಡಿದ್ದಾರೆ.
Discussion about this post