Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮೈ ಜೊತೆ ಮನಸ್ಸೂ ಒದ್ದೆ – ಭಾವನೆ ಮೀಟುವ ‘ಅಂದವಾದ’ ಪ್ರೇಮ ಕಥೆ

Radhakrishna Anegundi by Radhakrishna Anegundi
October 28, 2019
in ಗಾಂಧಿ ಕ್ಲಾಸ್
Share on FacebookShare on TwitterWhatsAppTelegram

ಚಂದನವನದ ಸಿನಿಮಾಗಳಲ್ಲಿ ಲವ್ ಸ್ಟೋರಿಗಳಿಗೇನು ಕಡಿಮೆಯಿಲ್ಲ. ಆದರೆ ಈ ವಿಷಯವನ್ನು ತಮ್ಮ ಕಥೆಯ ತಿರುಳನ್ನಾಗಿಸಿ ಸಮಾಜವನ್ನು ಕಾಡುತ್ತಿರುವ ವೈದ್ಯಕೀಯ ಕ್ಷೇತ್ರದ ಅಜಾಗರೂಕತೆ ಬಗ್ಗೆ ಅರಿವು ಮೂಡಿಸುವ ಸಿನಿಮಾಗಳ ಸಾಲಿಗೆ ‘ಅಂದವಾದ’ ಸೇರುತ್ತದೆ.

ಒಂದು ಉತ್ತಮ ಸಂದೇಶದ ಸುತ್ತ ನವಿರಾದ ಪ್ರೇಮ ಕಥಾಹಂದರ, ಸಹಜ ತುಂಟಾಟ, ಮಲೆನಾಡಿನ ಮಳೆಯೊಂದಿಗೆ ಮನಸ್ಸಿಗೆ ಮುದ ನೀಡುವ ಚುಮು ಚುಮು ಚಳಿ, ಕಚಗುಳಿ ಇಡುವ ಸಂಭಾಷಣೆ, ಕಾಡುವ ಸಸ್ಪೆನ್ಸ್, ಹೀಗೆ ನಿರ್ದೇಶಕ ಚಲ ಪ್ರೇಕ್ಷಕ ಮಹಾಪ್ರಭುವಿಗೆ ಹಬ್ಬದ ಸವಿ ಉಣಬಡಿಸುತ್ತಾ ಹೋಗಿದ್ದಾರೆ.

ಮೊದಲಾರ್ಧದಲ್ಲಿ ಚಿತ್ರದ ದೃಶ್ಯಗಳು ತೆವಳಿದಂತೆ ಕಂಡುಬಂದರೂ ಹೊಸಪ್ರತಿಭೆಗಳ ಸಹಜ ನಟನೆ ಚಿತ್ರದ ಪ್ಲಸ್ ಪಾಯಿಂಟ್ ಎನಿಸುತ್ತದೆ. ಇದು ಕೊನೆಯವರೆಗು ಪ್ರೇಕ್ಷಕನನ್ನು ಹಿಡಿದಿಡುತ್ತದೆ.

ಚಿತ್ರಕಥೆಯಲ್ಲಿ ಬರುವ ಬಿಡಿ ಬಿಡಿ ಭಾಗಗಳು ಕೆಲವೊಮ್ಮೆ ಕಥೆಯಲ್ಲಿ ದ್ವಂದ್ವ ಭಾವವನ್ನು ಮೂಡಿಸಿದರೂ ಚಿತ್ರ ಅನಾವರಣಗೊಳ್ಳುತ್ತಿದ್ದಂತೆ ಎಲ್ಲವೂ ಅರ್ಥವಾಗುತ್ತಾ ಹೋಗುತ್ತದೆ.

ಚಿತ್ರದ ನಾಯಕಿ ಅರ್ಥ (ಅನುಷಾ ರಂಗನಾಥ್) ಚಿಕ್ಕಂದಿನಲ್ಲಿ ಮಾಡಿದ ಒಂದು ಸಣ್ಣ ತಪ್ಪಿಗೆ ತನ್ನ ತಂದೆ ತಾಯಿಯನ್ನು ಕಳೆದುಕೊಳ್ಳುತ್ತಾಳೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬದುಕುಳಿದರು ಆಕೆಯ ಬಾಲ್ಯದಲ್ಲಿ ದುರಂತವೊಂದು ಘಟಿಸಿಹೋಗುತ್ತದೆ. ಆಶ್ರಮದಲ್ಲಿ ಬೆಳೆಯುತ್ತಾ ತಾನು ಏಲಿಯನ್ ಎಂದು ತನ್ನ ಬದುಕನ್ನ ಪುಟ್ಟ ಪುಟ್ಟ ಸುಳ್ಳುಗಳೊಂದಿಗೆ ಕಟ್ಟಿಕೊಳ್ಳುತ್ತಾ ಹೋಗುತ್ತಾಳೆ. ಅಮ್ಮು ಎಂಬ ಹೆಸರಿನೊಂದಿಗೆ ಮೋಹನ (ಜೈ)ನ ಪರಿಚಯ ಬಾಲ್ಯದಲ್ಲೆ ಆದರೂ ಚಿತ್ರ ತೆರೆದುಕೊಳ್ಳುವುದು ಮೋಹನ ಬೆಳದು ನಿಂತ ಬಳಿಕವೆ.
ಸುಳ್ಳುಗಳನ್ನ ನಂಬುತ್ತಾ ಹೋಗುವ ಮುಗ್ದ ಕಂಗಳ ನಾಯಕ ನಾಯಕಿಯನ್ನು ಆರಾಧಿಸಲು ಆರಂಭಿಸುತ್ತಾನೆ.

ಇವರಿಬ್ಬರ ಪ್ರೀತಿ ಚಿಗುರಿ ಮೊಳಕೆಯೊಡೆಯುವಷ್ಟರಲ್ಲಿ ಅರ್ಥ ಯಾರು? ಯಾಕೆ ಅವಳು ವಿಭಿನ್ನ ಎಂಬುದು ತಿಳಿಯುತ್ತದೆ. ಇದರಲ್ಲಿ ಸ್ಪೇಸ್ ಶಿಪ್ ದೃಶ್ಯವೊಂದು ಸೇರಿ ನಾಯಕಿಯು ಬೇರೆಯಂದು ಪ್ರಪಂಚಕ್ಕೆ ಸೇರಿದವಳಾ ಎಂಬಂತೆಯೂ ಕಲಾತ್ಮಕವಾಗಿ ಬಿಂಬಿಸಲಾಗುತ್ತೆ.

andavada 01

ಅರ್ಥ ಪಡೆಯಲು ನಾಯಕ ಪಡುವ ಫಜೀತಿ ಹಾಸ್ಯಮಯವಾಗಿದ್ದರು ಕಥೆಯ ಮೊದಲ ಭಾಗ ಕಂಡು ನಿರೂಪಣೆಯಲ್ಲಿ ಇನ್ನಷ್ಟು ಶ್ರಮವಹಿಸಬಹುದಿತ್ತು ಎನಿಸುತ್ತದೆ. ತುಸು ಬಾಲಿಶವಾಗಿ ಕಂಡರು ಮೊದಲ ಪ್ರಯತ್ನದಲ್ಲೆ ನಾಯಕ ಜೈ ಹಾಗು ನಾಯಕಿ ಅನುಷಾ ನಟನೆ ಹೃದಯಸ್ಪರ್ಶಿಯಾಗಿದೆ. ಹರೀಶ್ ರೈ ಮತ್ತು ಕೆ ಎಸ್ ಶ್ರೀಧರ್ ಪೋಷಕ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಹೃದಯ ಶಿವ ಅವರ ಹಾಡುಗಳ ರಚನೆ, ವಿಕ್ರಮ್ ವರ್ಮನ್ ಸಂಗೀತ ಸಂಯೋಜನೆ ಹಾಗೂ ಗುರುಕಿರಣ್ ಹಿನ್ನೆಲೆ ಸಂಗೀತ ಚಿತ್ರಕ್ಕೆ ಜೀವತುಂಬಿದೆ.

ಹರೀಶ್ ಎನ್ ಸೊಂಡೇಕೊಪ್ಪ ಛಾಯಾಗ್ರಹಣ ಮಲೆನಾಡಿನ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿದೆ.

ShareTweetSendShare

Discussion about this post

Related News

Kantara Box Office 300 crore Kantara Box Office 300 crore

Kantara Box Office 300 crore : 30 ದಿನದಲ್ಲಿ 300 ಕೋಟಿ : ದಾಖಲೆ ಮೇಲೆ ದಾಖಲೆ ಬರೆದ ಕಾಂತಾರ

dhruva-sarja-and-prerana-expecting-their-first-child

Dhruva sarjaa : ಗುಡ್ ನ್ಯೂಸ್ ಕೊಟ್ಟ ಧ್ರುವ ಪ್ರೇರಣಾ ದಂಪತಿ

Dhamaka : ಧಮಾಕ ಟ್ರೇಲರ್ ರಿಲೀಸ್…ಇದು ಕಾಮಿಡಿ ಜೋಡಿಯ ನಗುವಿನ ಟಾನಿಕ್

Darshan NikitaThukral: ದರ್ಶನ್ ಮತ್ತು ನನ್ನ ಸಂಬಂಧ ಹಾಳು ಮಾಡಿದ್ದು ನಿಖಿತಾ : ಓಂಪ್ರಕಾಶ್ ರಾವ್ ಸ್ಫೋಟಕ ಹೇಳಿಕೆ

Malashree daughter Radhana Ram :ದರ್ಶನ್ ಗೆ ನಾಯಕಿಯಾಗಲು ಹೆಸರು ಬದಲಾಯಿಸಿಕೊಂಡ ಮಾಲಾಶ್ರೀ ಮಗಳು

Gaalipata2 : ಗಾಳಿಪಟ 2 ವಿತರಿಸುವ ಹಕ್ಕು ಪಡೆದ ಕೆವಿಎನ್ ಸಂಸ್ಥೆ

biggboss shashi : ಹಸೆಮಣೆ ಏರಲು ಸಜ್ಜಾದ ಬಿಗ್ ಬಾಸ್ ಮನೆಯ ಮಾರ್ಡನ್ ರೈತ ಶಶಿಕುಮಾರ್

vikranth rona :13 ವರ್ಷಗಳ ಬಳಿಕ ದೆಹಲಿಗೆ ಭೇಟಿ : ವಿಕ್ರಾಂತ್ ರೋಣ ಬಿಡುಗಡೆಗೂ ಮುನ್ನ ಬಿಜೆಪಿ ಸಚಿವರ ಮನೆಗೆ ದೌಡು

ಶಿರಡಿಯಲ್ಲಿ ಶರ್ಮಿಳಾ ಮಾಂಡ್ರೆ : ಗುರುವಾರ ಬಾಬಾನಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ

ಚಂದನವನದ ವಜ್ರೇಶ್ವರಿಯಾಗ್ತಾರ ಅಶ್ವಿನಿ : ಅತ್ತೆಯ ಫೋಟೋದೊಂದಿಗೆ ಸೊಸೆ

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್