Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Araga Jnanendra :  ಹರ್ಷ ಹಂತಕರಿಗೆ ರಾಜಾಥಿತ್ಯ : ಪರಪ್ಪನ ಆಗ್ರಹಾರಕ್ಕೆ ದಿಢೀರ್ ದೌಡಾಯಿಸಿದ ಅರಗ ಜ್ಞಾನೇಂದ್ರ

ಎಲ್ಲವೂ ಹರ್ಷನ ಅಕ್ಕನ ಆಕ್ರೋಶದ ಎಫೆಕ್ಟ್

Radhakrishna Anegundi by Radhakrishna Anegundi
July 12, 2022
in ರಾಜ್ಯ
Araga Jnanendra royal-hospitality-in-jail-to-harsha-killers-home-minister-araga-jnanendra-parappana agrahara-prison-and-questioned-the-accused
Share on FacebookShare on TwitterWhatsAppTelegram

ಪರಪ್ಪನ ಆಗ್ರಹಾರದಲ್ಲಿರುವ ಖೈದಿಗಳು ಬಿಂದಾಸ್ ಆಗಿದ್ದಾರೆ. ಆರೋಪಿಗಳು, ಅಪರಾಧಿಗಳ ಜೊತೆಗೆ ಕೈ ಜೋಡಿಸಿರುವ ಜೈಲು ಸಿಬ್ಬಂದಿ ( parappana agrahara ) ಅಕ್ರಮ ಎಸಗುತ್ತಿದ್ದಾರೆ ಅನ್ನುವುದು ಎಲ್ಲರಿಗೂ ಗೊತ್ತಿರುವ ಸತ್ಯ . ಆದರೆ ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ಆರೋಪಿಗಳು ಕೂಡಾ ಜೈಲಿನಲ್ಲಿ ಸಂಭ್ರಮಿಸಿರುವ ವಿಷಯ ಬಿಜೆಪಿ ಸರ್ಕಾರದ ( Araga Jnanendra ) ಬುಡಕ್ಕೆ ಬಿಸಿ ಮುಟ್ಟಿಸಿದೆ

ಬೆಂಗಳೂರು : ಹಿಂದೂ ಕಾರ್ಯಕರ್ತ ಶಿವಮೊಗ್ಗ ಹರ್ಷ ( shivamogga harsha ) ಕೊಲೆ ಪ್ರಕರಣದ ಆರೋಪಿಗಳು ಮೊಬೈಲ್ ಬಳಕೆ ಮಾಡಿ ಕುಟುಂಬಸ್ಥರೊಂದಿಗೆ ಮಾತನಾಡಿರುವ ವಿಚಾರ ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. ಅದರಲ್ಲೂ ಈ ಬೆಳವಣಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ( Araga Jnanendra ) ಅವರ ದಕ್ಷತೆಯನ್ನೇ ಪ್ರಶ್ನೆ ಮಾಡಿತ್ತು. ಗೃಹ ಸಚಿವರು ತಮ್ಮ ಇಲಾಖೆಯನ್ನು ( parappana agrahara ) ಹಿಡಿತದಲ್ಲಿ ಇಟ್ಟುಕೊಂಡಿದ್ರೆ ಹೀಗೆ ನಡೆಯಲು ಸಾಧ್ಯವೇ ಅನ್ನುವ ಪ್ರಶ್ನೆ ಎದ್ದಿತ್ತು. ಅಷ್ಟು ಮಾತ್ರವಲ್ಲದೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧವೇ ಅಸಮಾಧಾನವನ್ನೂ ಹೊರ ಹಾಕಿದ್ದರು. ಚುನಾವಣೆ ಬಂದಾಗ ದುಡಿಯಲು ನಾವು ಬೇಕು, ಗೆದ್ದ ಮೇಲೆ ನಮಗೆ ಇಷ್ಟೇ ಬೆಲೆ ಅನ್ನುವ ನೋವು ಕೂಡಾ ಇತ್ತು.

ಚುನಾವಣೆಯ ಹೊಸ್ತಿಲಲ್ಲಿ ಈ ಆಕ್ರೋಶ ಸಹಜವಾಗಿಯೇ ಬಿಜೆಪಿ ಸರ್ಕಾರಕ್ಕೆ ( BJP govt ) ಬಿಸಿ ಮುಟ್ಟಿಸಿದೆ. ಈ ನಡುವೆ ಹರ್ಷನ ಅಕ್ಕನ ಜೊತೆ ಗೃಹ ಸಚಿವರು ಸರಿಯಾಗಿ ನಡೆದುಕೊಂಡಿಲ್ಲ ಅನ್ನುವ ಎಡಿಟೆಡ್ ವಿಡಿಯೋ ಹರಿದಾಡಿ ಬಿಜೆಪಿ ಪಕ್ಷವೂ ಮುಜುಗರಕ್ಕೆ ಗುರಿಯಾಗಿತ್ತು. ( ಆದರೆ ಆ ಪೂರ್ತಿ ವಿಡಿಯೋದಲ್ಲಿ ಗೃಹ ಸಚಿವರು ಸರಿಯಾಗಿಯೇ, ಗೌರವಯುತವಾಗಿ ಹರ್ಷನ ಅಕ್ಕನನ್ನು ನಡೆಸಿಕೊಂಡಿದ್ದಾರೆ. ತಮ್ಮ ಇತಿಮಿತಿಯನ್ನು ಕೈಗೊಂಡ ಹಾಗೂ ಕೈಗೊಳ್ಳಬಹುದಾದ ಕ್ರಮಗಳನ್ನು ತಾಳ್ಮೆಯಿಂದಲೇ ಗೃಹ ಸಚಿವರು ವಿವರಿಸಿದ್ದರು )

ಇದನ್ನೂ ಓದಿ : PSI Exam Scam Amrut Paul : ಹರ್ಷನ ಕೊಲೆ ಆರೋಪಿಗಳಿಗೆ ಮೊಬೈಲ್ ಸಿಗುತ್ತದೆ… ಅಮೃತ ಪಾಲ್ ಗೆ ಎಣ್ಣೆ ಸಿಗಲ್ವ….

ಈ ನಡುವೆ ಮಂಗಳವಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ಕೊಟ್ಟಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಜೈಲು ಸಿಬ್ಬಂದಿಗೆ ಬಿಸಿ ಮುಟ್ಟಿಸಿದ್ದಾರೆ. ಹರ್ಷನನ್ನು ಕೊಂದ ಕೊಲೆ ಆರೋಪಿಗಳು ಮೊಬೈಲ್ ಬಳಕೆ ಮಾಡಿದ ಹಿನ್ನಲೆಯಲ್ಲಿ ತಾವೇ ವಸ್ತು ಸ್ಥಿತಿ ಅರಿಯಲು ಕೇಂದ್ರ ಕಾರಾಗೃಹಕ್ಕೆ ಸಚಿವರು ಭೇಟಿ ಕೊಟ್ಟಿದ್ದಾರೆ. ಈ ವೇಳೆ ಆರೋಪಿಗಳ ಬ್ಯಾರೆಕ್ ಪರಿಶೀಲನೆ ನಡೆಸಿದ ಅವರು, ಮೊಬೈಲ್ ಸಿಕ್ಕಿದ್ದು ಹೇಗೆ ಎಂದು ಆರೋಪಿಗಳನ್ನು ನೇರವಾಗಿ ಪ್ರಶ್ನಿಸಿದ್ದಾರೆ.

ಭೇಟಿ ಸಂದರ್ಭದಲ್ಲಿ ಹೈ ಸೆಕ್ಯೂರಿಟಿ ಬ್ಯಾರಕ್ ಪರಿಶೀಲನೆ ನಡೆಸಿದ ಗೃಹ ಸಚಿವರು, ಮೊಬೈಲ್ ಸೇರಿದಂತೆ ನಿಷೇಧಿತ ವಸ್ತುಗಳು ಜೈಲಿನೊಳಗೆ ಹೇಗೆ ಬರುತ್ತದೆ ಅನ್ನುವ ಕುರಿತು ತಪಾಸಣೆಯನ್ನೂ ನಡೆಸಿದರು.

ಹಾಗಾದ್ರೆ ಗೃಹ ಸಚಿವರ ಈ ದಿಢೀರ್ ಭೇಟಿಗೆ ಕಾರಣ ಏನು ಅನ್ನುವ ಪ್ರಶ್ನೆ ಎದ್ದಿದೆ. ಹರ್ಷನ ಕೊಲೆ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸುದ್ದಿ ಮಾಡಿತ್ತು. ಇದೀಗ ಕೊಲೆ ಆರೋಪಿಗಳ ಜೊತೆಗೆ ಜೈಲು ಸಿಬ್ಬಂದಿ ಕೈ ಜೋಡಿಸಿರುವುದು ದೊಡ್ಡ ಸುದ್ದಿಯಾಗಿದೆ. ಇದರ ಬೆನ್ನಲ್ಲೇ ಹರ್ಷನ ಅಕ್ಕನ ವಿಚಾರ ಕೂಡಾ ವೈರಲ್ ಆಗಿದೆ. ಈ ಎಲ್ಲಾ ಘಟನೆಗಳ ಹಿನ್ನಲೆಯಲ್ಲಿ ಡ್ಯಾಮೇಜ್ ಕಂಟ್ರೋಲ್ ಮಾಡಲು ಗೃಹ ಸಚಿವರಿಗೆ ಸೂಚನೆ ಬಂದಿದೆ ಅನ್ನಲಾಗಿದೆ. ಜೊತೆಗೆ ಮುಖ್ಯಮಂತ್ರಿಗಲು ಕೂಡಾ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರು.

ಬೈತಡ್ಕ ಕಾರು ಅಪಘಾತ ಪ್ರಕರಣ : ಎರಡು ಮೃತದೇಹಗಳು ಪತ್ತೆ ಹಿನ್ನಲೆ ಕಾರ್ಯಾಚರಣೆ ಅಂತ್ಯಗೊಳಿಸಿದ ರಕ್ಷಣಾ ತಂಡ

ಕಾಣಿಯೂರು ಸಮೀಪದ ಬೈತಡ್ಕ ಸೇತುವೆ ತಡೆಗೋಡೆ ಮುರಿದು ಹೊಳೆಗೆ ಕಾರು ಬಿದ್ದ ಪ್ರಕರಣ ಸಂಬಂಧ ರಕ್ಷಣಾ ಕಾರ್ಯಾಚರಣೆಯನ್ನು ಅಂತ್ಯಗೊಳಿಸಲಾಗಿದೆ. ಇಂದು ಎರಡು ಮೃತ ದೇಹಗಳು ಪತ್ತೆಯಾಗುವುದರೊಂದಿಗೆ ನಾಪತ್ತೆಯಾದವರು ಬದುಕಿ ಬರಬಹುದು ಅನ್ನುವ ಕೊನೆಯ ಆಸೆಯೂ ಬತ್ತಿ ಹೋಗಿದೆ

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರು ಬೈತಡ್ಕ ಮಸೀದಿ ಬಳಿ ಹೊಳೆಗೆ ಕಾರು ಬಿದ್ದ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಇಬ್ಬರು ಯುವಕರ ಮೃತ ದೇಹ ಪತ್ತೆಯಾಗಿದೆ. ಇಂದು ಹೊಳೆಯ ನೀರಿನ ಹರಿವು ಇಳಿಯುತ್ತಿದ್ದಂತೆ ಮರದ ದಿಮ್ಮಿಗೆ ದೇಹ ಸಿಕ್ಕಿ ಹಾಕಿಕೊಂಡಿರುವುದು ಗೊತ್ತಾಗಿದೆ.

ಇನ್ನು ಕಳೆದ ಎರಡು ದಿನಗಳ ಕಾರ್ಯಾಚರಣೆ ನಡೆಸುತ್ತಿದ್ದ SDRF ತಂಡ ಇಂದು ಮುಂಜಾನೆಯೇ ನಾಪತ್ತೆಯಾದವರಿಗಾಗಿ ಹುಡುಕಾಟ ಪ್ರಾರಂಭಿಸಿತ್ತು. ಈ ನಡುವೆ ಜಿಲ್ಲೆಯಲ್ಲಿ ಮಳೆಯ ಅಬ್ಬರ ಕಡಿಮೆಯಾಗುತ್ತಿದ್ದಂತೆ ಮೊದಲು ಒಂದು ಮೃತ ದೇಹ ಪತ್ತೆಯಾಯ್ತು. ಆದಾದ ಕೆಲವೇ ಗಂಟೆಗಳಲ್ಲಿ ಮತ್ತೊಂದು ಮೃತ ದೇಹ ಸ್ಥಳೀಯರಿಗೆ ಗೋಚರಿಸಿದೆ. ಹೀಗಾಗಿ ಎಸ್. ಡಿ .ಆರ್ ಎಫ್ ಅಲ್ಲಿಗೋ ದೌಡಾಯಿಸಿ ಮೃತದೇಹವನ್ನು ಹೊರ ತೆಗೆಯಲಾಗಿದೆ. ಇನ್ನು ಮೃತ ದೇಹ ಪೋಸ್ಟ್ ಮಾರ್ಟಮ್ ನಡೆಯಬೇಕಾಗಿತ್ತು. ಪೊಲೀಸರ ಕಾನೂನು ಪ್ರಕ್ರಿಯೆಗಳು ಮುಕ್ತಾಯಗೊಂಡ ಬಳಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು.

ಶನಿವಾರ ತಡರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಈ ವೇಳೆ ವಿಟ್ಲ ಮುಡ್ನೂರು ಶಾಂತಿಯಡ್ಕ ನಿವಾಸಿ ಧನುಷ್ ( 25 ) ಹಾಗೂ ಕನ್ಯಾನ ಕೋನಾಲೆ ನಿವಾಸಿ ಧನಂಜಯ ( 26 ) ನಾಪತ್ತೆಯಾಗಿದ್ದರು. ಭಾನುವಾರ ಮುಂಜಾನೆಯಿಂದಲೇ ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿ, SDRF ತಂಡ ಹುಡುಕಾಟದಲ್ಲಿ ತೊಡಗಿತ್ತು.

ಭಾನುವಾರ ಮಧ್ಯಾಹ್ನ ಹೊತ್ತಿಗೆ ಕಾರು ಪತ್ತೆಯಾದರೂ, ನಾಪತ್ತೆಯಾದವರ ಸುಳಿವು ಇರಲಿಲ್ಲ. ಇದೀಗ ಇಬ್ಬರ ಮೃತದೇಹಗಳು ಪತ್ತೆಯಾಗುವುದರೊಂದಿಗೆ ಮಕ್ಕಳು ಜೀವಂತ ಬರುತ್ತಾರೆ ಅನ್ನುವ ಹೆತ್ತವರ ಕನಸು ನನಸಾಗಲಿಲ್ಲ. ಆದರೆ ಈ ಪ್ರಕರಣ ಹಲವು ಅನುಮಾನಗಳನ್ನು ಹುಟ್ಟಿಹಾಕಿದ್ದು, ಸಾವಿನ ನಿಖರ ಕಾರಣವನ್ನು ಪೊಲೀಸರು ಪತ್ತೆ ಹಚ್ಚಲಿದ್ದಾರೆ.

Tags: MAIN
ShareTweetSendShare

Discussion about this post

Related News

nikhil kumaraswamy Karnataka polls Nikhil to contest from Ramanagara

Nikhil kumaraswamy:ಮಂಡ್ಯಕ್ಕೆ ಕೈ ಕೊಟ್ಟ ನಿಖಿಲ್ : ರಾಮನಗರದಿಂದ ಕುಮಾರಸ್ವಾಮಿ ಪುತ್ರ ಕಣಕ್ಕೆ

zika virus First case detected in Karnataka Health Minister

Zika Virus  : ಕರ್ನಾಟಕದಲ್ಲಿ ಮೊದಲ ಝೀಕಾ ವೈರಸ್‌ ಪತ್ತೆ : ಖಚಿತಪಡಿಸಿದ ಸಚಿವ : ರಾಜ್ಯದಲ್ಲಿ ಆತಂಕ

Shashi Kumar BJP  : ಚಿತ್ರನಟ ಶಶಿಕುಮಾರ್ ಬಿಜೆಪಿಗೆ :  ಸೋಲಿನ ಭೀತಿಯ ಪಕ್ಷಕ್ಕೆ ಪಕ್ಷಾಂತರಿ ಎಕ್ಸ್ ಪರ್ಟ್

lokayukta : ಮೊದಲು ಎಸಿಬಿ ಈಗ ಲೋಕಾಯುಕ್ತ : ಬೆಸ್ಕಾಂ ಎಇ ತಿಂದು ತೇಗಿದೆಷ್ಟು..?

praveen nettar : ನೆಟ್ಟಾರು ಪತ್ನಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ : ಆಕ್ರೋಶ ಶಮನಕ್ಕೆ ಕಣ್ಣೊರೆಸುವ ತಂತ್ರ

Karnataka Politics : ಕಟೀಲ್ ವಿದೂಷಕ : ಸಿದ್ದರಾಮಯ್ಯ ನರಹಂತಕ : ಪಾವನವಾಯ್ತು ಕರ್ನಾಟಕ

BJP Meeting : ಕಾಂಗ್ರೆಸ್ ಗೆ ತನಿಖೆ ಬೆದರಿಕೆ : ಕೈ ನಾಯಕರ ಬಾಯಿ ಮುಚ್ಚಿಸಲು ಬಿಜೆಪಿ ಹೊಸ ನಾಟಕ

Murugha Shree Arrest : ಕೊನೆಗೂ 6 ದಿನಗಳ ಬಳಿಕ ಮುರುಘಾ ಶ್ರೀಗಳನ್ನು ವಶಕ್ಕೆ ಪಡೆದ ಪೊಲೀಸರು

Muddahanume gowda : ಇದಪ್ಪ ರಾಜೀನಾಮೆ ಅಂದ್ರೆ : ಗೌರವಯುತವಾಗಿ ಕಾಂಗ್ರೆಸ್ ನಿಂದ ಹೊರ ಬರಲು ನಿರ್ಧರಿಸಿದ ಮುದ್ದಹನುಮೇ ಗೌಡ

Pramod muthalik :ಎಡಿಜಿಪಿ ಅಲೋಕ್ ಕುಮಾರ್ ಅವರೇ ಕ್ಷಮೆ ಕೇಳಿ : ಮುತಾಲಿಕ್ ಆಗ್ರಹದ ಕಾರಣ ಗೊತ್ತಾ…?

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್