Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Radhakrishna Anegundi by Radhakrishna Anegundi
April 14, 2023
in ಟಾಪ್ ನ್ಯೂಸ್
arun kumar puthila puttur assembly constituency independent candidate
Share on FacebookShare on TwitterWhatsAppTelegram

ಅರುಣ್ ಕುಮಾರ್ ಪುತ್ತಿಲ ( Arun kumar puthila )ಸ್ಪರ್ಧೆಯಿಂದ, ಸುಲಭ ಜಯದ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿಗೆ ಆತಂಕ ಎದುರಾಗಿದೆ. ಈಗಾಗಲೇ ಪುತ್ತಿಲ ಗೆಲುವಿಗೆ ಪುತ್ತೂರಿನ ಬಿಜೆಪಿ ಕಾರ್ಯಕರ್ತರೇ ಮುಂದಾಗಿದ್ದಾರೆ

ಪುತ್ತೂರು : 2023ರ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ( Arun kumar puthila) ಪಕ್ಷೇತರರಾಗಿ ಕಣಕ್ಕಿಳಿಯಲಿದ್ದಾರೆ. ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಪುತ್ತೂರಿನಲ್ಲಿ ಬುಧವಾರ ಬೆಂಬಲಿಗರ ಸಭೆ ನಡೆಸಿದ್ದ ಅರುಣ್ ಕುಮಾರ್ ಪುತ್ತಿಲ ಅಭಿಪ್ರಾಯ ಸಂಗ್ರಹಿಸಿದ್ದರು. ಈ ವೇಳೆ ಪಕ್ಷೇತರರಾಗಿ ಸ್ಪರ್ಧಿಸುವಂತೆ ಒತ್ತಾಯ ಕೇಳಿ ಬಂದಿತ್ತು. ಅಪಾರ ಅಭಿಮಾನಿಗಳು ತಮ್ಮ ಅಭಿಪ್ರಾಯ ಸ್ಪಷ್ಟ ಪಡಿಸುವಂತೆ ಒತ್ತಾಯಿಸಿದ್ರು ಪುತ್ತಿಲ ತಮ್ಮ ನಿರ್ಧಾರ ಪ್ರಕಟಿಸಿರಲಿಲ್ಲ.

ಗುರುವಾರ ಅನೇಕ ಹಿರಿಯರೊಂದಿಗೆ ಸೋಲು ಗೆಲುವಿನ ಲೆಕ್ಕಚಾರದ ಬಗ್ಗೆ ಮಾತುಕತೆ ನಡೆಸಿದ ಅರುಣ್ ಪುತ್ತಿಲ, ತಡ ರಾತ್ರಿ ಪಕ್ಷೇತರರಾಗಿ ಸ್ಪರ್ಧಿಸುವ ಘೋಷಣೆ ಮಾಡಿದ್ದಾರೆ.( Arun kumar puthila)

ಈ ಬಗ್ಗೆ ಅಭಿಮಾನಿಗಳಿಗೆ ಸಂದೇಶ ಕಳುಹಿಸಿರುವ ಅವರು , ಪುತ್ತೂರಿನ ನನ್ನ ಆತ್ಮೀಯ ಬಂಧುಗಳೇ,  ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಇದೇ ಬರುವ ಏಪ್ರಿಲ್ 17 ಸೋಮವಾರದಂದು ಪಕ್ಷೇತರ ಅಭ್ಯರ್ಥಿಯಾಗಿ ನಿಮ್ಮೆಲ್ಲರ ಆಶೀರ್ವಾದದಿಂದ ನಾಮಪತ್ರವನ್ನು ಸಲ್ಲಿಸುತ್ತಿದ್ದೇನೆ.ನಾಮಪತ್ರ ಸಲ್ಲಿಕೆಗೆ ಪೂರ್ವದಲ್ಲಿ 9 ಗಂಟೆಗೆ ಸರಿಯಾಗಿ ಪುತ್ತೂರು ಮಹಾತೋಭಾರ ದೇವಸ್ಥಾನದಲ್ಲಿ ವಿಶೇಷ ಪ್ರಾಥ೯ನೆಯನ್ನ ಸಲ್ಲಿಸಿ 10 ಗಂಟೆಗೆ ಪುತ್ತೂರಿನ ಧಬೆ೯ ವ್ರತ್ತದಿಂದ ಪುತ್ತೂರು ತಾಲೂಕು ಆಡಳಿತ ಸೌಧದವರೆಗೆ ಬೃಹತ್ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದು, ಈ ಅಭೂತಪೂರ್ವ ಕಾರ್ಯಕ್ರಮಕ್ಕೆ ತಾಲೂಕಿನ ನನ್ನೆಲ್ಲಾ ಬಂಧುಗಳು ಆಗಮಿಸಿ ನನ್ನನ್ನು ಆಶೀರ್ವದಿಸಬೇಕಾಗಿ ವಿನಂತಿಸುತ್ತಿದ್ದೇನೆ. ಅಂದಿದ್ದಾರೆ.

ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆಯಿಂದ ಪುತ್ತೂರು ಚುನಾವಣಾ ಕಣದಲ್ಲಿ ಸಂಚಲನ ಮೂಡುವುದು ಖಂಡಿತಾ. ಪುತ್ತೂರು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಆಶಾ ತಿಮ್ಮಪ್ಪಗೌಡ ಅವರ ಹೆಸರು ಪ್ರಕಟಗೊಂಡ ವೇಳೆ ಕಾಂಗ್ರೆಸ್ ಅಭ್ಯರ್ಥಿ ಇಲ್ಲಿ ಸುಲಭವಾಗಿ ಜಯ ಸಾಧಿಸುತ್ತಾರೆ ಎಂದು ನಿರೀಕ್ಷೆ ಮಾಡಲಾಗಿತ್ತು. ಪುತ್ತೂರಿನಂತ ಕ್ಷೇತ್ರಕ್ಕೆ ಖಡಕ್ಕ್ ಅಭ್ಯರ್ಥಿ ಬೇಕಾಗಿತ್ತು. ಹೊಸ ಮುಖವಾದರೂ ಯುವ ಅಭ್ಯರ್ಥಿಗೆ ಟಿಕೆಟ್ ಕೊಡುತ್ತಿದ್ರೆ ಕಾರ್ಯಕರ್ತರಲ್ಲಿ ಹುರುಪು ತರಬಹುದಿತ್ತು. ಆದರೆ ಆಶಾ ತಿಮ್ಮಪ್ಪಗೌಡ ಅವರ ಹೆಸರು ಪ್ರಕಟಗೊಳ್ಳುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ನೋಟಾಗೆ ನಮ್ಮ ವೋಟು ಅಂದಿದ್ದರು. ಇದರಿಂದ ಕಾಂಗ್ರೆಸ್ ಪಾಳಯದಲ್ಲಿ ಗೆಲುವಿನ ಹುಮ್ಮಸ್ಸು ವ್ಯಕ್ತವಾಗಿತ್ತು.

puthila 01

ಆದರೆ ಈಗ ಅರುಣ್ ಕುಮಾರ್ ಪುತ್ತಿಲ ಅವರ ರಂಗಪ್ರವೇಶದಿಂದ ಚುನಾವಣಾ ಕಣಕ್ಕೆ ರಂಗು ಬಂದಿದೆ. ಈಗಾಗಲೇ ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಬಿಜೆಪಿಯಿಂದ ಹೊರದಬ್ಬಲ್ಪಟ್ಟ ಕಾರ್ಯಕರ್ತರು ಪುತ್ತಿಲ ಪರ ಕೆಲಸ ಮಾಡುವುದಾಗಿ ಹೇಳಿದ್ದಾರೆ. ಪ್ರವೀಣ್ ನೆಟ್ಟಾರು ಕೊಲೆ ಸಂದರ್ಭದಲ್ಲಿ ಸಿಡೆದೆದ್ದಿರುವ ಯುವ ಪಡೆ ಕೂಡಾ ಪುತ್ತೂರಿಗೆ ಪುತ್ತಿಲ ಅಂದಿದೆ.

ಇನ್ನು ಪುತ್ತೂರು ಬಿಜೆಪಿಯ ಬೂತ್ ಮಟ್ಟದ ಪದಾಧಿಕಾರಿಗಳು ಕೂಡಾ ದೊಡ್ಡ ಸಂಖ್ಯೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಅವರಿಗೆ ನೇರವಾಗಿ ತಮ್ಮ ಬೆಂಬಲ ಘೋಷಿಸಿದ್ದಾರೆ. ಈ ಎಲ್ಲಾ ಕಾರಣಗಳು ನೇರವಾಗಿ ಕಾಂಗ್ರೆಸ್ ಮತ ಬೇಟೆಯ ಮೇಲೆ ಪರಿಣಾಮ ಬೀರಲಿದೆ. ಅಷ್ಟೇ ಮಾಜಿ ಶಾಸಕ ಸಂಜೀವ ಮಠಂದೂರು ಬೆಂಬಲಿಗರು ಕೂಡಾ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ಪಾಠ ಕಲಿಸೋಣ ಅನ್ನುವ ಸಾಧ್ಯತೆಗಳು ಇಲ್ಲದಿಲ್ಲ. ಜೊತೆಗೆ ಕಣದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಕೆಲ ತಿಂಗಳ ಹಿಂದಿನ ತನಕ ಬಿಜೆಪಿಯಲ್ಲಿದ್ದರು. ಮಾತ್ರವಲ್ಲದೆ ಕರಾವಳಿಯ ಅನೇಕ ಬಿಜೆಪಿ ನಾಯಕರ ರೈಟ್ ಹ್ಯಾಂಡ್ ಅನ್ನಿಸಿಕೊಂಡಿದ್ದರು. ಹೀಗಾಗಿ ಬಿಜೆಪಿ ನಾಯಕರೇ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಪ್ರಯತ್ನಿಸುತ್ತಿದ್ದಾರೆ ಅನ್ನುವ ಆಕ್ರೋಶ ಬಿಜೆಪಿ ಕಾರ್ಯಕರ್ತರಲ್ಲಿದೆ.

puthila

ಇದರೊಂದಿಗೆ ಪುತ್ತೂರಿನಲ್ಲಿ ಕಾಂಗ್ರೆಸ್ ಮತ ಬ್ಯಾಂಕ್ ಅನ್ನು ದೊಡ್ಡ ಮಟ್ಟದಲ್ಲಿ SDPI ಕಸಿದುಕೊಳ್ಳಲಿದೆ. ಈ ಎಲ್ಲಾ ಫ್ಯಾಕ್ಟರ್ ಗಳನ್ನು ಗಮನಿಸಿದರೆ ಅರುಣ್ ಕುಮಾರ್ ಪುತ್ತಿಲ ಅವರಿಗೆ ಕಾಂಗ್ರೆಸ್ ಅಭ್ಯರ್ಥಿಯೇ ನೇರ ಎದುರಾಳಿಯಾಗೋ ಸಾಧ್ಯತೆಗಳಿದೆ. ಹಾಗಾದ್ರೆ ಪುತ್ತೂರು ಕ್ಷೇತ್ರದಲ್ಲಿ ಉರಿಮಜಲು ರಾಮಭಟ್ಟರ ನಂತರ ಅರುಣ್ ಕುಮಾರ್ ಪುತ್ತಿಲ ಬಂಡಾಯ ಬಾವುಟ ಹಾರಿಸಿದಂತಾಗುತ್ತದೆ.

ಹಾಗಾದ್ರೆ ಪುತ್ತಿಲ ಗೆಲುವು ಸುಲಭವೇ, ಖಂಡಿತಾ ಅಲ್ಲ, ಅರುಣ್ ಕುಮಾರ್ ಪುತ್ತಿಲ ಬಳಗ ರಾಜಕೀಯ ಪಟ್ಟುಗಳನ್ನು ಸರಿಯಾಗಿ ಬಳಸದೇ ಹೋದ್ರೆ ಗೆಲುವು ಸಾಧ್ಯವಿಲ್ಲ. ದಕ್ಷಿಣ ಕನ್ನಡದ ಪುತ್ತಿಲ ಅಭಿಮಾನಿಗಳು ಪುತ್ತಿಲ ಪರ ಪ್ರಚಾರಕ್ಕೆ ಪುತ್ತೂರಿಗೆ ಬಂದರೆ ಪಕ್ಷೇತರ ಅಭ್ಯರ್ಥಿ ಗೆಲುವಿನ ನಗೆ ಬೀರಬಹುದು.

Tags: FEATURED
ShareTweetSendShare

Discussion about this post

Related News

Tomato Yield Makes Andhra Farmer Crorepati Andhra Pradesh farmer earns three crore in 45 days

ಟೊಮೊಟೊ ಬೆಳೆದವರು ಕೋಟ್ಯಧಿಪತಿ : ಆಂಧ್ರ ರೈತನಿಗೆ ಕೋಲಾರದಲ್ಲಿ ಸಿಕ್ತು ಚಿನ್ನದ ಬೆಲೆ

mandya-bike-riders-ejured-while-wheeling-maddur-bike-car-accident

ಮದ್ದೂರಿನಲ್ಲಿ ವ್ಹೀಲಿಂಗ್ : ಕಾರಿಗೆ ಡಿಕ್ಕಿ ಹೊಡೆದು ಆಸ್ಪತ್ರೆ ಸೇರಿದ ಸೈಯದ್ ಶೋಹೆಬ್ ಗ್ಯಾಂಗ್

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Latest News

afspa-extended-in-manipur-for-6-months-from-october-1-barring-19-police-stations-of-valley

Manipura ಮಣಿಪುರದಲ್ಲಿ ಮತ್ತೆ ಜಾರಿಯಾಗಿರುವ  ಆಫ್ಸ್ಪ ಕಾಯ್ದೆಯ ಬಗ್ಗೆ ನಿಮಗೆಷ್ಟು ಗೊತ್ತು..?

Actor Vijay set to make debut in Tamil Nadu politics

ಅಣ್ಣಾಮಲೈ ಬೆನ್ನಲ್ಲೇ ನಟ ವಿಜಯ್ ತಮಿಳು ಪಾಲಿಟಿಕ್ಸ್ ಗೆ ಎಂಟ್ರಿ : ಸನಾತನ ಧರ್ಮದ ವಿರುದ್ಧ ನಿಂತವರಿಗೆ ಶುರುವಾಗಿದೆ ನಡುಕ

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್