ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು 9 ಅಧಿಕಾರಿಗಳಿಗೆ ಸಂಬಂಧಿಸಿದಂತೆ 40 ಕಡೆಗಳಲ್ಲಿ ದಾಳಿ ನಡೆದಿದೆ.
ಜಿಲ್ಲಾ ನಗರಾಭಿವೃದ್ಧಿ ಸೆಲ್ನ ಇಇ ಜಿ.ಶ್ರೀಧರ್ ಕಚೇರಿ, ಮನೆ, ದಕ್ಷಿಣ ಕನ್ನಡ ಡಿಸಿ ಕಚೇರಿಯ ಜಿಲ್ಲಾ ನಗರಾಭಿವೃದ್ಧಿ ಸೆಲ್ ಇಇ ಕೃಷ್ಣ ಎಸ್. ಹೆಬ್ಸೂರ್, ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಲಿ., ಉಡುಪಿ KRIDCL ಮುಖ್ಯ ಇಂಜಿನಿಯರ್ ಆರ್.ಪಿ.ಕುಲಕರ್ಣಿ, ಮಾಲೂರು ನಗರ ಯೋಜನೆ ಸಹಾಯಕ ನಿರ್ದೇಶಕ ಹೆಚ್.ಆರ್.ಕೃಷ್ಣಪ್ಪಗೂ ಎಸಿಬಿ ಶಾಕ್ ಕೊಟ್ಟದೆ. ಬೀದರ್ ಪಂಚಾಯತ್ ರಾಜ್ ಇಲಾಖೆ ಜೆಇ ಸುರೇಶ್ ಮೊಹ್ರೆ, ಮಂಡ್ಯ ಸಾಮಾಜಿಕ ಅರಣ್ಯ ಇಲಾಖೆ ಡಿಸಿಎಫ್ ಟಿ.ವೆಂಕಟೇಶ್, ವಿಜಯಪುರ ಹೆಸ್ಕಾಂ ಎಇಇ ಸಿದ್ದರಾಮ ಮಲ್ಲಿಕಾರ್ಜುನ, ಇನ್ಸ್ಪೆಕ್ಟರ್ ಎ.ಕೃಷ್ಣಮೂರ್ತಿ, ಬಳ್ಳಾರಿಯ ಎಲೆಕ್ಟ್ರಿಕಲ್ ಇನ್ಸ್ಪೆಕ್ಟರ್ A.N.ವಿಜಯ್ಕುಮಾರ್ ಅವರ ಅಕ್ರಮಗಳಿಗೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ.
ಈ ಪೈಕಿ KRIDCL ಮುಖ್ಯ ಇಂಜಿನಿಯರ್ ಆರ್.ಪಿ.ಕುಲಕರ್ಣಿ ಅವರಿಗೆ ಸೇರಿದ ರಾಜಾಜಿನಗರ ಸ್ಟರ್ಲಿಂಗ್ ಅಪಾರ್ಟ್ಮೆಂಟ್, ಜಯನಗರ ಗೋಕುಲ ಅಪಾರ್ಟ್ಮೆಂಟ್ ಸೇರಿದಂತೆ 4 ಕಡೆ ದಾಳಿ ನಡೆದಿದೆ. ಕುಲಕರ್ಣಿಯವರು ಐದಾರು ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಫ್ಲಾಟ್ ಹೊಂದಿದ್ದು. ಇವರು ಕೆಲ ಅಪಾರ್ಟ್ಮೆಂಟ್ ಖರೀದಿಸಿ ಬಾಡಿಗೆಗೆ ನೀಡಿದ್ದಾರೆ. ಮಗನ ಹೆಸರಲ್ಲಿ ಕಂಪನಿ ಕೂಡ ತೆರೆದಿದ್ದು. ಎರಡು ಕೋಟಿ ರೂಪಾಯಿ ಇನ್ಶುರೆನ್ಸ್ ಕೂಡ ಹೊಂದಿದ್ದಾರೆ. ಸಂಬಂಧಿಕರ ಹೆಸರಲ್ಲೂ ಆಸ್ತಿ ಮಾಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ದಾಳಿ ನಡೆದಿದೆ.
ಜಯನಗರ ಹಾಗೂ ಬನಶಂಕರಿ ಅಪಾರ್ಟ್ಮೆಂಟ್ನಲ್ಲಿ ಕುಲಕರ್ಣಿ ಹಾಗೂ ಆತನ ಮಗ ವಾಸವಾಗಿದ್ದು ಕುಲಕರ್ಣಿ ಮೂರು ಅಪಾರ್ಟ್ಮೆಂಟ್ಗಳನ್ನ ಬಾಡಿಗೆ ನೀಡಿದ್ದರು. ರಾಜಾಜಿನಗರದ ಅಪಾರ್ಟ್ಮೆಂಟ್ ನಲ್ಲಿ 1, ಹಾಗೂ ಮೈಸೂರಿನ ಯಾದವನಗರದ 1 ಮನೆ ಬಾಡಿಗೆಗೆ ನೀಡಿದ್ದರು. ಸದ್ಯ 15 ಕೋಟಿಯ ದಾಖಲೆಪತ್ರ ವಶಪಡಿಸಿಕೊಳ್ಳಲಾಗಿದೆ.
ಮಾಯಾ ದೇವಿ ಆಂಡ್ ಕೋ ಹಾಗೂ ಕೆಮ್ ಟೆಕ್ ಹೆಸರಿನ ಕಂಪನಿ ಮಗನ ಹೆಸರಲ್ಲಿದೆ. ಕೋಟ್ಯಾಂತರ ರೂ ಇನ್ಶುರೆನ್ಸ್ ಮಾಡಿಸಿರುವ ದಾಖಲೆಗಳು ಎಸಿಬಿಗೆ ಲಭಿಸಿವೆ.
Discussion about this post