ಮಂಗಳೂರು : ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಲ್ಲಿ ಜ್ಯೋತಿಷಿಯೊಬ್ಬರಿಗೆ ಚೂರಿ ಇರಿದ ಘಟನೆ ನಡೆದಿದೆ.
ಶನಿವಾರ ಸಂಜೆ ಈ ಘಟನೆ ನಡೆದಿದ್ದು, ಜ್ಯೋತಿಷಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಿಸಿರೋಡ್ ನ ಪದ್ಮಾ ಕಾಂಪ್ಲೆಕ್ಸ್ ನಲ್ಲಿ ಶ್ರೀದುರ್ಗಾಪರಮೇಶ್ವರಿ ಜ್ಯೋತಿಷಾಲಯ ನಡೆಸುತ್ತಿರುವ ಪಂಡಿತ್ ಲಕ್ಷ್ಮೀಕಾಂತ್ ಭಟ್ ಚೂರಿ ಇರಿತಕ್ಕೆ ಒಳಗಾದವರು.
ಶನಿವಾರ ಎಂದಿನಂತೆ ತಮ್ಮ ಕಚೇರಿಯಲ್ಲಿದ್ದ ಸಂದರ್ಭದಲ್ಲಿ ಕಚೇರಿಗೆ ನುಗ್ಗಿದ ಅಪರಿಚಿತರು ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ.
ಏಕಾಏಕಿ ನುಗ್ಗಿ ಬಂದ ಇಬ್ಬರು ಅಪರಿಚಿತರು ಚೂರಿಯಿಂದ ಇರಿದು ಪರಾರಿಯಾಗುತ್ತಿದ್ದಂತೆ, ಆತಂಕಕ್ಕೆ ಒಳಗಾದ ಲಕ್ಷ್ಮಿಕಾಂತ್ ಭಟ್ ಮೂರ್ಛೆ ಹೋಗಿದ್ದಾರೆ.
ಕೆಲ ಹೊತ್ತಿನ ಬಳಿಕ ಎಚ್ಚರವಾಗಿ ತಮ್ಮ ಕಚೇರಿಯಿಂದ ಹೊರ ಬಂದಿದ್ದಾರೆ.
ಈ ವೇಳೆ ರಕ್ತ ಸುರಿಯುತ್ತಿರುವುದನ್ನು ಗಮನಿಸಿದ ಅಕ್ಕ ಪಕ್ಕದ ಶಾಪ್ ನ ಮಂದಿ ತಕ್ಷಣ ಸರ್ಕಾರಿ ಆಸ್ಪತ್ರೆಗೆ ಸೇರಿಸಿದ್ದಾರೆ.
ಗಾಯ ಗಂಭೀರವಾಗಿದ್ದ ಕಾರಣ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರಿನ ಖಸಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ದೌಡಾಯಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವೈಯುಕ್ತಿಕ ದ್ವೇಷದ ಹಿನ್ನಲೆಯಲ್ಲಿ ಈ ಘಟನೆ ನಡೆದಿದೆ ಎಂದು ತನಿಖೆಯ ಪ್ರಾಥಮಿಕ ಹಂತದಲ್ಲಿ ಗೊತ್ತಾಗಿದೆ.
Discussion about this post