ಕೊಪ್ಪಳ : ಅಲ್ಪಸಂಖ್ಯಾತರನ್ನು ಓಲೈಸುವ ನಿಟ್ಟಿನಲ್ಲಿ RSS ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಕೆಲ ಬಿಜೆಪಿ ನಾಯಕರು ಸಿಡಿದೆದ್ದಿದ್ದಾರೆ. ಇನ್ನು ಕುಮಾರಸ್ವಾಮಿಯವರ ಆರ್ ಎಸ್ ಎಸ್ ವಿರೋಧಿ ಹೇಳಿಕೆಗಳು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಅವರಿಗೆ ಮುಳುವಾಗಲಿದೆ ಅನ್ನುವ ಅಭಿಪ್ರಾಯವೂ ಇದೆ. ನಿಜಕ್ಕೂ ಕುಮಾರಸ್ವಾಮಿ RSS ವಿರೋಧಿಯಾಗಿದ್ರೆ ಬಿಜೆಪಿಯೊಂದಿಗೆ ಸಂಬಂಧವನ್ನೇ ಬೆಳೆಸಬಾರದಿತ್ತು ಅನ್ನುವುದು ರಾಜಕೀಯ ತಜ್ಞರ ಅಭಿಪ್ರಾಯ.
ಈ ನಡುವೆ ಕುಮಾರಸ್ವಾಮಿಯವರ ಆರ್ ಎಸ್ ಎಸ್ ಹೇಳಿಕೆಗೆ ಅವರ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ. ಇದೀಗ ಕೊಪ್ಪಳದಲ್ಲಿ ಮಾತನಾಡಿರುವ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, RSS ಮುಖಂಡರು ಹೇಳುವ ಕೆಲ ವಿಚಾರಗಳು ಸರಿ ಇರುತ್ತವೆ ಅಂದಿದ್ದಾರೆ. ಈ ಮೂಲಕ ಸಂಘ ಪರಿವಾರದ ಬಗ್ಗೆ ಸಾಫ್ಟ್ ಕಾರ್ನರ್ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಈ ಹೇಳಿಕೆಗಳ ವಿಚಾರದಲ್ಲಿ ನಾನು ರಾಜಕಾರಣ ಮಾಡುವುದಿಲ್ಲ. ಅಂದಿನ ರಾಜಕಾರಣ ತತ್ತದ ಆಧಾರದ ಮೇಲಿತ್ತು. ಈಗಿನ ರಾಜಕಾರಣ ಟೀಕೆಗೆ ಸೀಮಿತವಾಗಿದೆ. ಬರೀ ಟೀಕೆ ಮಾಡಿ ಜನರ ಮೇಲೆ ಪರಿಣಾಮ ಬೀರುವ ಯತ್ನವಾಗುತ್ತಿದೆ ಅಂದರು.
Discussion about this post