ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವೇಗಕ್ಕೆ ಕೆಲಸ ಮಾಡಲು ಸಾಧ್ಯವಾಗದಿದ್ರೆ ಅಧಿಕಾರ ತ್ಯಜಿಸಿ ಅನ್ನುವ ಸ್ಪಷ್ಟ ಸಂದೇಶವನ್ನು ಬಿಜೆಪಿ ರವಾನಿಸಿದೆ. ಹೀಗಾಗಿ ಬಿಜೆಪಿ ಅಧಿಕಾರಿದಲ್ಲಿದ್ದ ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಮುಖ್ಯಮಂತ್ರಿಗಳನ್ನು ಬದಲಾಯಿಸಲಾಗಿದೆ.ಆಡಳಿತ ವಿರೋಧಿ ಆಳ್ವಿಕೆ ಕಾಣಿಸುವಂತೆ ಆಡಳಿತ ನಡೆಸಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ್ರೆ ಮನೆ ದಾರಿ ಪಕ್ಕಾ ಅನ್ನುವುದನ್ನು ಕಾರ್ಯದ ಮೂಲಕ ತೋರಿಸಲಾಗಿದೆ.
ಈ ಹಿನ್ನಲೆಯಲ್ಲಿಯೇ ಗುಜರಾತ್ ಸಿಎಂ ವಿಜಯ್ ರೂಪಾನಿ ರಾಜೀನಾಮೆ ಪಕ್ಷ ಪಡೆದಿದ್ದು, ಆ ಜಾಗಕ್ಕೆ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಭಾನುವಾರ ನಡೆದ ಶಾಸಕಾಂಗ ಪಕ್ಷ ಸಭೆಯಲ್ಲಿ ಈ ಬಗ್ಗೆ ಒಮ್ಮತದ ತೀಮಾನ ಕೈಗೊಳ್ಳಲಾಗಿದೆ. ಹೈಕಮಾಂಡ್ ಅಭ್ಯರ್ಥಿಯೇ ಗುಜರಾತ್ ಅನ್ನು ಮುನ್ನಡೆಸಲಿದ್ದಾರೆ.
ಇನ್ನು ಕರ್ನಾಟಕದಂತೆ ಉಪ ಮುಖ್ಯಮಂತ್ರಿ ಸ್ಥಾನ ಸೃಷ್ಟಿಸುವ ಬಗ್ಗೆ ಹೈಕಮಾಂಡ್ ಒಲವು ತೋರಿಸಿಲ್ಲ. ಹೀಗಾಗಿ ಉಪ ಮುಖ್ಯಮಂತ್ರಿ ಯಾರಾಗಬೇಕು ಅನ್ನುವ ಬಗ್ಗೆ ಶಾಸಕಾಂಗ ಸಭೆಯಲ್ಲಿ ಯಾವುದೇ ಚರ್ಚೆಯಾಗಿಲ್ಲ.
ಇನ್ನು ನೂತನ ಸಿಎಂ ಭೂಪೇಂದ್ರ ಪಟೇಲ್ ಮಾಧ್ಯಮಗಳ ಜೊತೆಗೆ ಮಾತನಾಡಿದ್ದು,ನತನ್ನ ಮೇಲೆ ನಂಬಿಕೆ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದ ಅಂದಿದ್ದಾರೆ.
first-time legislator Bhupendra Patel, 59, a protege of former Chief Minister and current Uttar Pradesh Governor Anandiben Patel, was on September 12 elected to be the new Chief Minister of Gujarat.
Discussion about this post