ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ಗೂಂಡಾಗಿರಿ ಮತ್ತೆ ತೀವ್ರಗೊಂಡಿದೆ. ಮಮತಾ ಬ್ಯಾನರ್ಜಿ ಬೆನ್ನಿಗೆ ನಿಂತಿರುವಾಗ ನಮಗ್ಯಾಕೆ ಭಯವೆಂದು ಗೊತ್ತಿರುವ ಕಾರ್ಯಕರ್ತರು ಇದೀಗ ಬಿಜೆಪಿ ಕಾರ್ಯಕರ್ತರು ಮಾತ್ರವಲ್ಲ ನಾಯಕರನ್ನೇ ಟಾರ್ಗೇಟ್ ಮಾಡಿದ್ದಾರೆ.
ರಾಜ್ಯ ಪೊಲೀಸರು ಮಮತಾ ಬ್ಯಾನರ್ಜಿ ಕೈಗೊಂಬೆಗಳಂತೆ ವರ್ತಿಸುತ್ತಿದ್ದಾರೆ ಅನ್ನುವ ಆರೋಪದ ನಡುವೆ, ಟಿಎಂಸಿ ಕಾರ್ಯಕರ್ತರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನೇ ಟಾರ್ಗೇಟ್ ಮಾಡಿದ್ದಾರೆ.
ಕೋಲ್ಕತ್ತಾದಿಂದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಪ್ರದೇಶಕ್ಕೆ ತೆರಳುತ್ತಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಬೆಂಗಾವಲು ಪಡೆಯ ವಾಹನಗಳ ಮೇಲೆ ಇಂದು ಕಲ್ಲು ತೂರಾಟ ನಡೆದಿದೆ.
ನಡ್ಡಾ ಹಾಗೂ ಇತರೆ ಬಿಜೆಪಿ ನಾಯಕರು ತೆರಳುತ್ತಿದ್ದ ವಾಹನಗಳ ಮೇಲೆ ಕಲ್ಲು ಹಾಗೂ ಸಾಫ್ಟ್ ಡ್ರಿಕ್ಸ್ ಬಾಟಲ್ ಗಳನ್ನು ಎಸೆಯಲಾಗಿದೆ. ನಡ್ಡಾ ಅವರ ಕಾರು ಬುಲೆಟ್ ಪ್ರೂಫ್ ವಾಹನವಾಗಿದ್ದರಿಂದ ಅವರು ಸುರಕ್ಷಿತವಾಗಿದ್ದಾರೆ. ಆದರೆ ಬಿಜೆಪಿ ನಾಯಕರಾದ ಕೈಲಾಶ್ ವಿಜಯವರ್ಗಿಯಾ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ದಿಲಿಪ್ ಘೋಷ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
‘ಡೈಮಂಡ್ ಹಾರ್ಬರ್ಗೆ ತೆರಳುತ್ತಿದ್ದ ನಮ್ಮ ವಾಹನಗಳನ್ನು ದಾರಿಯಲ್ಲಿ ಅಡ್ಡಗಟ್ಟಿದ ಟಿಎಂಸಿ ಬೆಂಬಲಿಗರು, ನಡ್ಡಾ ಅವರ ವಾಹನ ಸೇರಿದಂತೆ, ತಂಡದಲ್ಲಿದ್ದ ಇತರೆ ನಾಯಕರ ವಾಹನಗಳ ಮೇಲೆ ಕಲ್ಲು ತೂರಿದರು. ಈ ಮೂಲಕ ಟಿಎಂಸಿ ಅವರ ನಿಜ ಬಣ್ಣ ಬಯಲಾಗಿದೆ’ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖಂಡ ದಿಲೀಪ್ ಘೋಷ್ ತಿಳಿಸಿದ್ದಾರೆ.
ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ನಡ್ಡಾ ಅವರು, ‘ಪಶ್ಚಿಮ ಬಂಗಾಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಗೂಂಡಾರಾಜ್ಯದ ಆಡಳಿತ ನಡೆಯುತ್ತಿದೆ ಅಂದಿದ್ದಾರೆ.
Discussion about this post