Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಲೈಂಗಿಕ ಪ್ರಕರಣದ ಆರೋಪಿಯ ರಕ್ಷಣೆಗೆ ಧರ್ಮಸ್ಥಳ ಪೊಲೀಸರು : ಯುವತಿಗೆ ವಂಚಿಸಿರೋ SI ವಿರುದ್ಧ CID ತನಿಖೆ..

Radhakrishna Anegundi by Radhakrishna Anegundi
May 30, 2021
in ಕ್ರೈಮ್
cid highcourt
Share on FacebookShare on TwitterWhatsAppTelegram

ಬೆಂಗಳೂರು : 32 ವರ್ಷದ ಮಹಿಳೆಯೊಂದಿಗೆ ಪ್ರೀತಿ ಪ್ರೇಮ ಮದುವೆ ಎಂದು ನಾಟಕವಾಡಿ ಕೊನೆಗೆ ಮೋಸ ಮಾಡಿದ ಆರೋಪ ಎದುರಿಸುತ್ತಿರುವ 29 ವರ್ಷದ ಪೊಲೀಸ್ ಸಬ್ ಇನ್ಸ್ ಪೆಕ್ಟ್ ರನ್ನು ತಕ್ಷಣ ಬಂಧಿಸಿ ಸಿಐಡಿ ತನಿಖೆ ನಡೆಸುವಂತೆ ಹೈಕೋರ್ಟ್ ಆದೇಶಿಸಿದೆ.

ಈ ಪ್ರಕರಣ ಸಂಬಂಧ ಎಸ್ಐ ವಿಶ್ವನಾಥ್ ಬಿರಾದಾರ್ ಗೆ ದಕ್ಷಿಣ ಕನ್ನಡ ಜಿಲ್ಲೆಯ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಕೂಡಾ ಹೈಕೋರ್ಟ್ ರದ್ದುಗೊಳಿಸಿದೆ. 2020 ಡಿ 19 ರಂದು ವಿಚಾರಣ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಸಂತ್ರಸ್ಥೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ಕುರಿತಂತೆ ವಿಚಾರಣೆ ನಡೆಸಿದ ನ್ಯಾಯಾಲಯ ಲೈಂಗಿಕ ದೌರ್ಜನ್ಯದಂತಹ ಗಂಭೀರ ಪ್ರಕರಣವಿದ್ದರೂ ಅಧಿಕಾರಿಯಾಗಿರುವ ಆರೋಪಿ ವಿರುದ್ಧ ಎಫ್ ಐ ಆರ್ ದಾಖಲಿಸಿ ಕ್ರಮಕ್ಕೆ ಮುಂದಾಗಿಲ್ಲ ಎಂದು ಧರ್ಮಸ್ಥಳ ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಆರೋಪಿಯ ರಕ್ಷಣೆಗೆ ಧರ್ಮಸ್ಥಳ ಠಾಣಾ ಪೊಲೀಸರು ಮುಂದಾಗಿರುವುದು ಸ್ಪಷ್ಟವಾಗಿದೆ. ಮುಂದಿನ ನಾಲ್ಕು ತಿಂಗಳ ಒಳಗಾಗಿ ಸಿಐಡಿ ತನಿಖೆ ಮುಕ್ತಾಯವಾಗಬೇಕಾಗಿದ್ದು, ಅಂತಿಮ ವರದಿಯನ್ನು ಸಲ್ಲಿಸುವಂತೆ ಕೋರ್ಟ್ ಆದೇಶಿಸಿದೆ. ಇದರೊಂದಿಗೆ ಆರೋಪಿಗೆ ಸಹಕರಿಸಿರುವ ಧರ್ಮಸ್ಥಳ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸಂದೇಶ್, ಪಿಎಸ್ಐ ಪವನ್ ಮತ್ತು ಇತರ ಸಿಬ್ಬಂದಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಚಾರಣೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ಕೋರ್ಟ್ ಆದೇಶಿಸಿದೆ.

ಪ್ರಕರಣದ ಹಿನ್ನಲೆ

30 ವರ್ಷ ಮಹಿಳೆಯೊಬ್ಬರು ತನ್ನ ಲ್ಯಾಪ್ ಟಾಪ್ ಕಳವು ಪ್ರಕರಣ ಸಂಬಂಧ ದೂರು ನೀಡಲು 2020ರ ಆಗಸ್ಟ್ ತಿಂಗಳಲ್ಲಿ ಚಾಮರಾಜಪೇಟೆ ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ಪರಿಚಯವಾದ ವಿಶ್ವನಾಥ್ ಬಿರದಾರ್ ಹಾಗೂ ಮಹಿಳೆಯ ಫೋನ್ ನಂಬರ್ ಗಳು ಪರಸ್ಪರ ಕೈ ಬದಲಾಯಿಸಿತ್ತು. ಇದಾದ ಬಳಿಕ ಯುವತಿಗೆ ಪದೇ ಪದೇ ಪದೇ ಕರೆ ಮಾಡುತ್ತಿದ್ದ ವಿಶ್ವನಾಥ್ ನಾನು ಪ್ರೀತಿಯಲ್ಲಿ ಬಿದ್ದಿದ್ದು, ಮದುವೆಯಾಗುವುದಾಗಿ ಹೇಳಿದ್ದರಂತೆ. ಜೊತೆಗೆ 12 ಲಕ್ಷ ಹಣಕ್ಕೂ ಬೇಡಿಕೆ ಇಟ್ಟಿದ್ದರಂತೆ. ಇದಕ್ಕೆ ಮಹಿಳೆ ಒಪ್ಪಿರಲಿಲ್ಲ.

 ಆ ನಂತ್ರ ಲ್ಯಾಪ್ ಟಾಪ್ ಕೇಸ್ ಸಂಬಂಧ ಮಾತನಾಡಲಿದೆ ಎಂದು ನನ್ನನ್ನು ಕರೆಸಿಕೊಂಡಿದ್ದ ವಿಶ್ವನಾಥ್ ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದರು. ಈ ವೇಳೆಯೂ ಪ್ರೀತಿಸುವಂತೆ ನನ್ನ ಒತ್ತಾಯಿಸುತ್ತಿದ್ದರು. ಅವರ ಮಾತಿಗೆ ಮರುಳಾದ ನಾನು ಪ್ರೀತಿಯ ಆಫರ್ ಅನ್ನು ಒಪ್ಪಿಕೊಂಡೆ.  ಅಕ್ಟೋಬರ್ 8 ರಂದು ಅವರ ಮದುವೆ ಪ್ರಸ್ತಾಪಕ್ಕೂ ಸಮ್ಮತಿಸಿದೆ.

ಇದಾದ ನಂತರ ತನ್ನನ್ನು ವಿವಾಹವಾಗುವುದಾಗಿ ನಂಬಿಸಿ ನವೆಂಬರ್ 10 ರಂದು ಧರ್ಮಸ್ಥಳಕ್ಕೆ ಕರೆದುಕೊಂಡು ಬಂದಿದ್ದ ವಿಶ್ವನಾಥ್ ಲಾಡ್ಜ್ ಒಂದರಲ್ಲಿ ರೂಮ್ ಪಡೆದು ಲೈಂಗಿಕ ಸಂಪರ್ಕ ಬೆಳೆಸಿದ್ದಾರೆ. ಇದಾದ ಬಳಿಕ ನನಗೆ ಈಗಾಗಲೇ ವಿವಾಹವಾಗಿದ್ದು, ಮತ್ತೊಂದು ಮದುವೆಯಾಗಲು ಇಚ್ಛೆಯಿಲ್ಲ ಎಂದು ನವೆಂಬರ್ 11 ರಂದು ತಿಳಿಸಿದ್ದಾರೆ ಎಂದು ಯುವತಿ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇದಾದ ಬಳಿಕ ವಿಶ್ವನಾಥ್ ಬಿರದಾರ್ ಮಹಿಳೆ ವಿರುದ್ಧ ಕೌಂಟರ್ ಕೇಸ್ ದಾಖಲಿಸಿದ್ದರು. ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಈ ಪ್ರಕರಣದಲ್ಲಿ,  ಮಹಿಳೆ ನನ್ನ ಮೇಲೆ ಸುಳ್ಳು ಕೇಸ್ ದಾಖಲಿಸಿದ್ದಾರೆ.

ಲ್ಯಾಪ್ ಟಾಪ್ ಕಳ್ಳತನದ ಕೇಸ್ ದಾಖಲಾದ ನಂತ್ರ ನನಗೆ ಅನಗತ್ಯವಾಗಿ ಮಹಿಳೆ ಕರೆ ಮಾಡುತ್ತಿದ್ದಳು. ನವೆಂಬರ್ 8 ರಂದು ಬಸವನಗುಡಿಯಲ್ಲಿ ಭೇಟಿಯಾಗುವಂತೆ ಮನವಿ ಮಾಡಿದ್ದರು. ಹೋಗಿ ಭೇಟಿಯಾದರೆ ಮದುವೆಯಾಗುವಂತೆ ಹಠ ಹಿಡಿದಿದ್ದಾರೆ. ಇದಕ್ಕೆ ಒಪ್ಪದೇ ಹೋದಾಗ, ಸೂಸೈಡ್ ನೋಟ್ ನಲ್ಲಿ ನನ್ನ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ್ದಾರೆ.

ಇದಾದ ಬಳಿಕ ಮಹಿಳೆಯೇ ನನ್ನನ್ನು ಧರ್ಮಸ್ಥಳಕ್ಕೆ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ನನ್ನ ಕಡೆಯಿಂದ 10 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಹಣ ಕೊಡದಿದ್ರೆ ರೇಪ್ ದಾಖಲಿಸುವುದಾಗಿ ಬೆದರಿಸಿದ್ದಾರೆ ಎಂದು ವಿಶ್ವನಾಥ್ ಆರೋಪಿಸಿದ್ದಾರೆ.

ಈ ನಡುವೆ ಇದೇ ಮಹಿಳೆ ಇದೇ ರೀತಿ ಮೂರು ಪ್ರಕರಣಗಳನ್ನು ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಿಸಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಬೆಂಗಳೂರಿನ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಈ ಪ್ರಕರಣ ಕುತೂಹಲಕ್ಕೆ ಕಾರಣವಾಗಿತ್ತು.

Tags: ವಿಶ್ವನಾಥ್ ಬಿರಾದಾರ್
Share63TweetSendShare

Discussion about this post

Related News

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

honey-trap-gang-busted-in-bluru-woman-arrested

Honey trap : ಮಂಚದಾಟಕ್ಕೆ ಮನೆಗೆ ಆಹ್ವಾನ : ಹನಿಟ್ರ್ಯಾಪ್’ಗೆ ಪ್ರಿಯತಮೆಯನ್ನೇ ಬಿಟ್ಟಿದ್ದ ಪ್ರೇಮಿ

KGF-inspired : ಸಿನಿಮಾ ಪ್ರೇರಣೆಯಿಂದ ಸರಣಿ ಕೊಲೆ : ಸಮಾಜದ ಸ್ವಾಸ್ಥ್ಯ ಕೆಡಿಸುವ ಚಿತ್ರಗಳ ಬಗ್ಗೆ ಇರಲಿ ಎಚ್ಚರ

Mysuru crime : ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಯುವತಿ ಕೊಲೆ : ಪ್ರಿಯಕರನ್ನು ಬಂಧಿಸಿದ ಪೊಲೀಸರು

Fake journalists : ಅಕ್ಕಿ ವ್ಯಾಪಾರಿಯಿಂದ 5 ಲಕ್ಷ ಪೀಕಿಸಲು ಹೋದ 6 ಮಂದಿ ನಕಲಿ ಪತ್ರಕರ್ತರು ಅಂದರ್

Kerala honey trap : ದೇವರನಾಡಿನಲ್ಲಿ ಬಾಡಿಗೆ ಜೋಡಿ : ಒಂದು ಹನಿ ಟ್ರ್ಯಾಪ್ ಗೆ 40 ಸಾವಿರ

Bengaluru crime : ಸರ್ಕಾರಿ ಟೆಂಡರ್ ಕೊಡಿಸುವುದಾಗಿ ಆಮಿಷ : 4 ಕೋಟಿ ರೂ ಸುಲಿಗೆಗೆ ಮುಂದಾದ ಸುಂದರಿಯ ಬಂಧನ

Mandya honey trap : ಬಿಜೆಪಿ ಮುಖಂಡನಿಗೆ ಹನಿ ಟ್ರ್ಯಾಪ್ : ಸಲ್ಮಾಭಾನು ಎಂಬಾಕೆಯನ್ನು ಬಂಧಿಸಿದ ಪೊಲೀಸರು

Police :ಸಾಮಾಜಿಕ ಕಾರ್ಯಕರ್ತೆಯ ದಂಧೆ : ಯುವತಿಗೆ ಲೈಂಗಿಕ ಶೋಷಣೆ : ಮೂವರು ಅಂದರ್

Bhadravathi ಯಲ್ಲಿ ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್