ಕೆಪಿಎಲ್ ಪಂದ್ಯಾವಳಿಯ ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ತಂಡದ 2 ಆಟಗಾರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
2019ರ ಕೆಪಿಎಲ್ ಫೈನಲ್ ಪಂದ್ಯದಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ತನಿಖೆ ಕೈಗೆತ್ತಿಕೊಂಡ ಸಂದೀಪ್ ಪಾಟೀಲ್ ನೇತೃತ್ವದ ಸಿಸಿಬಿ ಪೊಲೀಸರ ತಂಡ ಬಳ್ಳಾರಿ ಟಸ್ಕರ್ಸ್ ತಂಡದ ಇಬ್ಬರು ಆಟಗಾರರನ್ನು ಬಂಧಿಸಿದೆ.
ಬಳ್ಳಾರಿ ಟಸ್ಕರ್ಸ್ ತಂಡದ ನಾಯಕ ಸಿಎಂ ಗೌತಮ್ ಹಾಗೂ ಅಬ್ರರ್ ಖಾಜಿ ಬಂಧನಕ್ಕೊಳಗಾದ ಆಟಗಾರರು. ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್ ಮಾಡುವ ಸಲುವಾಗಿ ಇಬ್ಬರು ಆಟಗಾರರು ತಲಾ 20 ಲಕ್ಷ ರೂ. ಹಣವನ್ನು ಬುಕ್ಕಿಗಳಿಂದ ಪಡೆದಿದ್ದರು. ಇನ್ನು ಪಡೆದ ಕಾಸಿಗೆ ನ್ಯಾಯ ಒದಗಿಸಿದ್ದ ಇವರು ಬುಕ್ಕಿಗಳಿಗೆ ಸಹಾಯ ಮಾಡಿದ್ದರು.
ಸಿಎಂ ಗೌತಮ್ ಕರ್ನಾಟಕ ರಣಜಿ ತಂಡದಲ್ಲಿ ಆಡಿರುವುದು ಮಾತ್ರವಲ್ಲದೆ ಐಪಿಎಲ್ನಲ್ಲಿ ಮುಂಬೈ, ಆರ್ಸಿಬಿ ಮತ್ತು ಡೆಲ್ಲಿ ಡೇರ್ ಡೆವಿಲ್ಸ್ ಪರ ಆಟವಾಡಿದ್ದರು. ಅಬ್ರರ್ ಖಾಜಿಯೂ ಕರ್ನಾಟಕ ತಂಡದ ರಣಜಿ ಆಟಗಾರರಾಗಿದ್ದಾರೆ.
Discussion about this post