Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Car Accident : ಚಂದ್ರಶೇಖರ ಗುರೂಜಿ ಅಂತ್ಯಸಂಸ್ಕಾರ ಮುಗಿಸಿ ಮರಳುತ್ತಿದ್ದ ಶ್ರೀಗಳ ಕಾರು ಅಪಘಾತ

Radhakrishna Anegundi by Radhakrishna Anegundi
July 6, 2022
in ರಾಜ್ಯ
car-accident-nidasoshi-shivalingeshwara-swamiji-swamijis-car-accident-while-returning-from-chandrashekhar-guruji-funeral-dharwad
Share on FacebookShare on TwitterWhatsAppTelegram

ಧಾರವಾಡ ತಾಲೂಕಿನ ತೇಗೂರ ಬಳಿ ಕಾರು ಅಪಘಾತಕ್ಕೀಡಾಗಿದ್ದು, ( Car Accident ) ನಿಡಸೋಶಿ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಅಪಾಯದಿಂದ ಪಾರಾಗಿದ್ದಾರೆ

ಧಾರವಾಡ :  ಹುಬ್ಬಳ್ಳಿ ತಾಲೂಕಿನ ಸುಳ್ಳಾ ಗ್ರಾಮದಲ್ಲಿ ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಅಂತ್ಯಸಂಸ್ಕಾರ ಮುಗಿಸಿ ನಿಡಸೋಶಿಗೆ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಮರಳುತ್ತಿದ್ದರು. ಈ ವೇಳೆ ಧಾರವಾಡ ತಾಲೂಕಿನ ತೇಗೂರ ಬಳಿ , ( Car Accident ) ಶ್ರೀಗಳ ಕಾರು ಅಪಘಾತಕ್ಕೀಡಾಗಿದೆ.

ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಇದೀಗ ಶ್ರೀಗಳನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗರಗ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

swamijis car accident while returning from chandrashekhar guruji funeral dharwad

ಇದನ್ನೂ ಓದಿ : ಝೀ ನ್ಯೂಸ್ Anchor ಬಂಧಿಸಲು 2 ರಾಜ್ಯದ ಪೊಲೀಸರ ನಡುವೆ ಕಿತ್ತಾಟ

ಮೈಸೂರಿಗರ ಹೋರಾಟಕ್ಕೆ ಮಣಿದ ಸರ್ಕಾರ : ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಯೋಜನೆ ರದ್ದು

ಮೈಸೂರು : ಸಾಂಸ್ಕೃತಿಕ ನಗರಿಯ ಜನರ ಹೋರಾಟಕ್ಕೆ ಮಣಿದಿರುವ ಸರ್ಕಾರ ಇದೀಗ Chamundi ropeway project ಅನ್ನು ಕೈ ಬಿಟ್ಟಿದೆ. ಈ ಹಿಂದೆ ಪ್ರವಾಸೋದ್ಯಮ ಸಚಿವರಾಗಿದ್ದ ಸಿಪಿ ಯೋಗೀಶ್ವರ್, ಯಾರೇ ವಿರೋಧಿಸಿದರೂ ಯೋಜನೆ ಜಾರಿಯಾಗಲಿದೆ ಅಂದಿದ್ದರು. 2021ರ ಜುಲೈ 21 ರಂದು ಮಾತನಾಡಿದ ಅವರು ಈ ಯೋಜನೆಗೆ ಡಿಪಿಆರ್ ಸಿದ್ದವಾಗಿದೆ ಅಂದಿದ್ದರು. ಚಾಮುಂಡಿ ಬೆಟ್ಟದ ರೋಪ್ ವೇ ಯೋಜನೆಗೆ ಸಚಿವರಾದ ಆನಂದ್ ಸಿಂಗ್, ವಿ.ಸೋಮಣ್ಣ ಕೂಡಾ ಬೆಂಬಲಿಸಿದ್ದರು.

ಆದರೆ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಪರಿಸರ ಪ್ರಿಯರು, ಯೋಜನೆ ಸಂಬಂಧ ಜನರಲ್ಲಿ ಜಾಗೃತಿ ಮೂಡಿಸಿದರು. ಯೋಜನೆ ಬಂದರೆ ಆಗುವ ಅನಾಹುತಗಳನ್ನು ತಿಳಿಸಿದರು. ಈ ಕಾಮಗಾರಿಯಿಂದ ಮೈಸೂರಿನ ಜೀವ ವೈವಿಧ್ಯದ ಮೇಲೆ ಪರಿಣಾಮ ಬೀರಲಿದೆ. ಮುಂದಿನ ತಲೆಮಾರು ಸಂಕಷ್ಟಕ್ಕೆ ಸಿಲುಕಲಿದೆ ಅನ್ನುವುದನ್ನು ಸಾರಿದರು.

ಇದರ ಫಲವಾಗಿ ಸಾಹಿತಿ ಎಸ್ ಎಲ್ ಭೈರಪ್ಪ, ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಪ್ರವಾಸೋದ್ಯಮ ಇಲಾಖೆ ವಿರುದ್ಧ ಕಿಡಿಕಾರಿದ್ದರು. ನೆಮ್ಮದಿ ಹಾಗೂ ಆಧ್ಯಾತ್ಮಿಕತೆ ಬಯಸಿ ಬರುವ ಭಕ್ತರಿಗೆ ಪೂರಕವಾದ ವಾತಾವರಣ ಬೆಟ್ಟದಲ್ಲಿ ನಿರ್ಮಾಣವಾಗಬೇಕು. ಅಲ್ಲಿ ಯಾವುದೇ ಆಧುನಿಕ ಶೈಲಿಯ ಕಟ್ಟಡ ಕಟ್ಟಬಾರದು. ಅಲ್ಲಿನ ನೈಸರ್ಗಿಕ ಸೌಂದರ್ಯ ಉಳಿಯಬೇಕು. ಹೀಗಾಗಿ ರೋಪ್ ವೇ ಯೋಜನೆ ಕೈ ಬಿಡಿ ಎಂದು ಆಗ್ರಹಿಸಿದ್ದರು.

ಇದರ ಬೆನ್ನಲ್ಲೇ ರೋಪ್ ವೇ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ್ದ ರಾಜಮಾತೆ ಪ್ರಮೋದಾ ದೇವಿ, ಚಾಮುಂಡಿ ಬೆಟ್ಟದ 20 ನಿಮಿಷದ ಜರ್ನಿಗೆ ರೋಪ್ ವೇ ಅವಶ್ಯಕತೆ ಇದೆಯೇ ಎಂದು ಪ್ರಶ್ನಿಸಿದ್ದರು. ಹೀಗೆ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಸರ್ಕಾರ ರೋಪ್ ವೇ ಯೋಜನೆಯನ್ನು ಕೈ ಬಿಡಲು ನಿರ್ಧರಿಸಿದೆ.

ಮೈಸೂರಿನಲ್ಲಿ ಈ ಸಂಬಂಧ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್,ಟಿ. ಸೋಮಶೇಖರ್, ಎಲ್ಲರ ಅಭಿಪ್ರಾಯಕ್ಕೆ ಮನ್ನಣೆ ನೀಡಿ ರೋಪ್ ವೇ ಅಳವಡಿಕೆ ಕೈ ಬಿಟ್ಟಿದ್ದೇವೆ. ಸರ್ಕಾರಕ್ಕೆ ಈ ಬಗ್ಗೆ ಜಿಲ್ಲಾಡಳಿತ ಪತ್ರದ ಮೂಲಕ ವಿವರಣೆ ನೀಡಲಿದೆ ಅಂದರು. ಚಾಮುಂಡಿ ಬೆಟ್ಟ ಪ್ರವಾಸಿ ಸ್ಥಳವಾಗುವುದಕ್ಕಿಂತ, ಪವಿತ್ರ ಧಾರ್ಮಿಕ ಸ್ಥಳವಾಗಬೇಕು. ಬೆಟ್ಟಕ್ಕೆ ಧಾರ್ಮಿಕ ಭಾವನೆಗಳಿಂದ ಜನ ಬರುತ್ತಾರೆ. ಹೀಗಾಗಿ ಈ ಸ್ಥಳವನ್ನು ಪ್ರವಾಸಿ ಸ್ಥಳವನ್ನಾಗಿ ಮಾಡಬೇಡಿ ಅನ್ನುವುದು ಜನರ ಅಭಿಪ್ರಾಯ ಇದಕ್ಕೆ ಗೌರವ ನೀಡಿ ಯೋಜನೆಯಿಂದ ಹಿಂದೆ ಸರಿದಿದ್ದೇವೆ ಎಂದು ಸೋಮಶೇಖರ್ ತಿಳಿಸಿದರು.

ಒಟ್ಟಿನಲ್ಲಿ ಪರಿಸರ ಪ್ರಿಯರ ಹೋರಾಟಕ್ಕೆ ಇದೀಗ ಜಯ ಸಿಕ್ಕಿದೆ. ಒಟ್ಟಾಗಿ ಹೋರಾಡಿದರೆ ಸರ್ಕಾರವನ್ನು ಮಣಿಸಬಹುದು ಅನ್ನುವುದಕ್ಕೆ ಇದೊಂದು ಉತ್ತಮ ಉದಾಹರಣೆ

Tags: MAIN
ShareTweetSendShare

Discussion about this post

Related News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

ಕರಾವಳಿ ಭದ್ರತಾ ಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ಬೆಂಗಳೂರಿನ ಲಕ್ಷ್ಮಿ ನಾರಾಯಣ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಉದ್ಯೋಗ ಅವಕಾಶ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್