ಕೊರೋನಾ ಸೋಂಕಿನ ತವರೂರು ಚೀನಾದಲ್ಲಿ ಕೊರೋನಾ ( China Covid ) ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಮತ್ತೆಲ್ಲಿ ಹೊಸ ತಳಿ ಎಂಟ್ರಿಯಾಗುತ್ತದೋ ಅನ್ನುವ ಆತಂಕ ಇವರದ್ದು. ಹೀಗಾಗಿಯೇ ಮುಂಜಾಗ್ರತೆ
ಬೀಜಿಂಗ್ : ಕೊರೋನಾ ಸೋಂಕಿನ ಮೊದಲ ಅಲೆಗೆ ಹೋಲಿಸಿದರೆ ಈಗ ಭೀತಿ ಸಾಕಷ್ಟು ಕಡಿಮೆಯಾಗಿದೆ. ಹಾಗಂತ ನಿರ್ಲಕ್ಷ್ಯ ಮಾಡುವಂತಿಲ್ಲ. ಕಾಲ ಕಾಲಕ್ಕೆ ಕಾಣಿಸಿಕೊಳ್ಳುತ್ತಿರುವ ಹೊಸ ಹೊಸ ತಳಿಗಳು ಅಪಾಯಕಾರಿಯಾಗಿಯೇ ವರ್ತಿಸುತ್ತಿದೆ. ಇನ್ನು ( China Covid ) ಕೊರೋನಾ ತವರೂರು ಚೀನಾ ಮಾತ್ರ ಕೊರೋನಾ ಅಂದ್ರೆ ಈಗ್ಲೂ ನಡುಗುತ್ತದೆ.
ಈ ನಡುವೆ ಒಂದೇ ಒಂದು ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಚೀನಾ ಸರ್ಕಾರ ಹೆನಾನ್ ಪ್ರಾಂತ್ಯದ ವುಗಾಂಗ್ ನಗರವನ್ನು ಲಾಕ್ ಡೌನ್ ಮಾಡಿದೆ. ಈ ಆದೇಶದ ಕಾರಣ 3 ಲಕ್ಷಕ್ಕೂ ಅಧಿಕ ಜನ ಸೋಮವಾರ ಮಧ್ಯಾಹ್ನದಿಂದ ಗುರುವಾರ ಮಧ್ಯಾಹ್ನ ತನಕ ಮನೆಯಲ್ಲೇ ಇರುವಂತಾಯ್ತು. ಮನೆಯಲ್ಲೇ ಇರುವ ಜನರ ಮೂಲಭೂತ ಅವಶ್ಯಕತೆ ಸಲುವಾಗಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಸ್ಥಳೀಯ ಆಡಳಿತ ಅವರ ಬೇಕು ಬೇಡಗಳಿಗೆ ಸ್ಪಂದಿಸಲಿದೆ.
ಇದನ್ನು ಓದಿ : bangalore murder : ಪತ್ನಿ ಜೊತೆ ಸರಸವಾಡಿದ ಸ್ನೇಹಿತನ ಕೊಲೆ : ಮೂವರು ಆರೋಪಿಗಳ ಬಂಧನ
ಇನ್ನು ಅನಿವಾರ್ಯ ಸಂದರ್ಭದಲ್ಲಿ ಜನ ಓಡಾಟ ನಡೆಸಬೇಕಾದರೆ ಅದಕ್ಕೆ ಅಧಿಕಾರಿಗಳ ಅನುಮತಿ ಅಗತ್ಯವಾಗಿದೆ. ಜೊತೆಗೆ ಅಷ್ಟೇ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವುದು ಕಡ್ಡಾಯವಾಗಿದೆ. ಈ ನಡುವೆ ಚೀನಾದಲ್ಲಿ ಮಂಗಳವಾರ 347 ಮಂದಿಗೆ ಕೊರೋನಾ ಸೋಂಕು ತಗುಲಿದೆ.
ಶೃತಿ ಜೊತೆ ನಟಿಸಿದ್ದ ನಟನ ಮೇಲೆ ಗುಂಡಿನ ದಾಳಿ : ಅಪಾಯದಿಂದ ಪಾರಾದ ಶಿವರಂಜನ್
ಅಮೃತ ಸಿಂಧು ಅನ್ನುವ ಸಿನಿಮಾ ಇವರಿಗೆ ದೊಡ್ಡ ಮಟ್ಟದಲ್ಲಿ ಹೆಸರು ತಂದುಕೊಟ್ಟಿತ್ತು. ಬಳಿಕ ಉದ್ಯಮಿಯಾಗಿ ಇವರು ಗುರುತಿಸಿಕೊಂಡಿದ್ದರು.
ಬೆಳಗಾವಿ : ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಮಂಗಳವಾರ ರಾತ್ರಿ ಹಿರಿಯ ಚಿತ್ರನಟ ಶಿವರಂಜನ್ ಬೋಳಣ್ಣವರ ಮೇಲೆ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಅದೃಷ್ಪವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಲ್ಲಿನ ಹಳೆಯ ಹನುಮಂತ ದೇವಸ್ಥಾನ ಬಳಿ ಇರುವ ಅವರ ಮನೆ ಎದುರು ಈ ಘಟನೆ ನಡೆದಿದೆ. ಬೈಕ್ನಲ್ಲಿ ಬಂದ ಆರೋಪಿ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಆದರೆ ಗುರಿ ತಪ್ಪಿದ್ದರಿಂದ ಕೂದಲೆಳೆ ಅಂತರದಿಂದ ಶಿವರಂಜನ್ ಪಾರಾಗಿದ್ದಾರೆ.
ಘಟನೆ ನಡೆದ ಬೆನ್ನಲ್ಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದರು. ಆರೋಪಿಯ ಬಂಧನಕ್ಕೆ 5 ವಿಶೇಷ ತಂಡಗಳನ್ನು ರಚನೆ ಮಾಡಲಾಗಿದ್ದು, ಆರೋಪಿಗಾಗಿ ಶೋಧ ಕಾರ್ಯ ಪ್ರಾರಂಭವಾಗಿದೆ.
ಶಿವರಂಜನ್ ಅಮೃತಸಿಂಧು, ರಾಜಾರಾಣಿ ಸೇರಿದಂತೆ ಹಲವು ಚಲನಚಿತ್ರಗಳಲ್ಲಿ ನಾಯಕರಾಗಿ ನಟಿಸಿದ್ದರು. ಅಮೃತಸಿಂಧು ಶಿವರಂಜನ್ ಅವರಿಗೆ ದೊಡ್ಡ ಹೆಸರು ತಂದುಕೊಟ್ಟಿತ್ತು.. 20 ವರ್ಷಗಳ ಹಿಂದೆ ಈ ಚಿತ್ರವನ್ನು ಶಿವರಂಜನ್ ಅವರ ತಂದೆಯೇ ನಿರ್ಮಾಣ ಮಾಡಿದ್ದರು.
ಇದೀಗ ಉದ್ಯಮಿಯಾಗಿ ಗುರುತಿಸಿಕೊಂಡಿರುವ ಶಿವರಂಜನ್ ಬೆಳಗಾವಿಯಲ್ಲೇ ವಾಸ್ತವ್ಯ ಹೂಡಿದ್ದಾರೆ. ಆಸ್ತಿ ವಿಚಾರದಲ್ಲಿ ಈ ದಾಳಿ ನಡೆದಿದೆ ಎಂದು ಪ್ರಾಥಮಿಕ ಮಾಹಿತಿಗಲು ತಿಳಿಸಿವೆ.
Discussion about this post