ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಕಮಿಷನ್ ಸರ್ಕಾರ ಎಂದು ಜರೆದ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿಎಂ ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.
ಚಿತ್ರದುರ್ಗದಲ್ಲಿ ರಾಹುಲ್ ಗಾಂಧಿ ಪಾಲ್ಗೊಂಡಿದ್ದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಿ ಕಮಿಷನ್ ಬಗ್ಗೆ ಮಾತನಾಡುತ್ತಾರೆ. ಭದ್ರಾ ಯೋಜನೆಯ ಟೆಂಡರ್ಗೆ ಆಗಿನ ಇಂಜಿನಿಯರ್ಗೆ ಚೆಕ್ ಮೂಲಕ ಹಣ ನೀಡಿದ್ದು ಯಾರು. ದಾಖಲೆ ಮೂಲಕ ಈಗಾಗಲೇ ಬಿಡುಗಡೆ ಮಾಡಿದ್ದೇವೆ. ಪ್ರಧಾನಿಗೆ ಈ ದಾಖಲೆಗಳನ್ನ ಕಳುಹಿಸಿಕೊಡುತ್ತೇನೆ. ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಮೋದಿಯವರಿಗೆ ನೈತಿಕತೆ ಇಲ್ಲ ಎಂದರು.
ಮೋದಿ ಭಾಷಣದಲ್ಲಿ ಯಾವುದೇ ಕೊಡುಗೆ ಬಗ್ಗೆ ಚರ್ಚೆ ಆಗಿಲ್ಲ. ಮಹಿಳೆಯರ ರಕ್ಷಣೆ, ಯುವಕರಿಗೆ ನೀಡಿದ ಉದ್ಯೋಗದ ಬಗ್ಗೆ ಮಾತನಾಡಿಲ್ಲ. ಅವರು ಬಿಜೆಪಿ ಅಭ್ಯರ್ಥಿ ಪರ ಮತ ಕೇಳಿಲ್ಲ, ಆದ್ರೆ ರೈತ ಮತ್ತು ಸೈನಿಕರಿಗಾಗಿ ಕೇಳಿದ್ದಾರೆ. ಆದ್ರೆ ಅವರಿಗೆ ಮೋದಿ ನೀಡಿರುವ ರಕ್ಷಣೆ ಏನು? ಎಂದು ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ರು.
Discussion about this post