ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರವಾಗಿ ನಡೆದ ಸ್ವಾಭಿಮಾನಿ ಸಮಾವೇಶ ಕುರಿತಂತೆ ಸಿಎಂ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಸಮಾವೇಶದಲ್ಲಿ ಕೇಳಿ ಬಂದ ಟೀಕೆಗಳಿಗೆ ಖಡಕ್ಕ್ ಉತ್ತರ ಕೊಟ್ಟಿದ್ದಾರೆ.
ಸುಮಲತಾ ನನ್ನ ವಿರುದ್ಧ ಆರೋಪಗಳ ಸುರಿಮಳೆಯನ್ನೇ ಹರಸಿದ್ದಾರೆಂದು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಸಿಎಂ ಮಂಡ್ಯದಲ್ಲಿಂದು ಪಕ್ಷೇತರ ಅಭ್ಯರ್ಥಿ ಪರವಾಗಿ ನಡೆದ ಸಮಾವೇಶದ ದಿಗ್ಗಜರ ಭಾಷಣದ ಸಾರಾಂಶವನ್ನು ಗ್ರಹಿಸಿದ್ದೇನೆ.
ನನ್ನ ಬಗ್ಗೆ ಮಾಡಿರುವ ವೈಯಕ್ತಿಕ ಆಪಾದನೆಗಳಿಗೆ ಉತ್ತರ ನೀಡುವ ಶಕ್ತಿ ಮಂಡ್ಯ ಜಿಲ್ಲೆಯ ನನ್ನ ಬಾಂಧವರಿಗಿದೆ. ಉತ್ತರ ಕೊಡುವ ರೀತಿಯೂ ಅವರಿಗೆ ಗೊತ್ತಿದೆ ಅಂತಾ ಹೇಳಿದ್ರು.
ಇದೇ ವೇಳೆ, ಅಂಬರೀಶ್ ಹಾಗೂ ನನ್ನ ನಡುವಿನ ಸ್ನೇಹ ಮೂರು ದಶಕಗಳದ್ದು. ಅದು ರಾಜಕಾರಣದ ವ್ಯಾಪ್ತಿಯನ್ನೂ ಮೀರಿದ ಅಪ್ಪಟ ಗೆಳೆತನ. ಈ ಸ್ನೇಹಕ್ಕೆ ಅವರ ಕುಟುಂಬ ಸೂಕ್ತ ಕಾಣಿಕೆ ನೀಡಿದೆ ಎಂದಿದ್ದಾರೆ.
Discussion about this post