ಉಪ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಮೈತ್ರಿ ಮುರಿದು ಸ್ವತಂತ್ರವಾಗಿ ಕಣಕ್ಕೆ ಇಳಿಯುತ್ತಿರುವ ಕಾಂಗ್ರೆಸ್ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ರಾಜ್ಯದ 15 ಕ್ಷೇತ್ರಗಳ ಚುನಾವಣೆ ಡಿಸೆಂಬರ್ 5ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ 15 ಕ್ಷೇತ್ರಗಳ ಪೈಕಿ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿ ಬಿಡುಗಡೆ ಮಾಡಿದೆ.
ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಬೈರತಿ ಸುರೇಶ್ ಪತ್ನಿ
ಪದ್ಮಾವತಿ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
ಮಾಜಿ ಸ್ಪೀಕರ್ ಕೆಬಿ
ಕೋಳಿವಾಡ ಅವರಿಗೂ ಟಿಕೆಟ್ ನೀಡಲಾಗಿದೆ. ರಾಣೆಬೆನ್ನೂರು ಕ್ಷೇತ್ರದಿಂದ ಕೋಳಿವಾಡ
ಕಣಕ್ಕಿಳಿಯಲಿದ್ದಾರೆ.
ಈಗ ಹೊರಬಿದ್ದಿರುವ ಪಟ್ಟಿಯಲ್ಲಿ ಸಿದ್ದರಾಮಯ್ಯ ಅವರಿಗೆ ಹೆಚ್ಚಿನ ಮನ್ನಣೆ ಸಿಕ್ಕಿರುವುದು ಸ್ಪಷ್ಟವಾಗಿದೆ. ಟ್ರಬಲ್ ಶೂಟರ್, ಉಪಚುನಾವಣೆಗಳ ತಂತ್ರಗಾರ ಎಂದೇ ಬಿಂಬಿತವಾಗಿರುವ ಡಿಕೆಶಿ ಬೆಂಬಲಿಗರಿಗೆ ಈ ಪಟ್ಟಿಯಲ್ಲಿ ಸ್ಥಾನ ಸಿಕ್ಕಿಲ್ಲ. ಹೀಗಾಗಿ ಡಿಕೆಶಿ ಉಪಚುನಾವಣೆ ಸಮರದಿಂದ ಹಿಂದಕ್ಕೆ ಸರಿದಿದ್ದಾರೆಯೇ ಅಥವಾ ಸಿದ್ದರಾಮಯ್ಯ ಅವರನ್ನು ಹಿಂದಿಕ್ಕಿದರೇ ಅನ್ನುವುದು ಗೊತ್ತಾಗುತ್ತಿಲ್ಲ.
Discussion about this post