ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಗಬೇಕಾಗಿದ್ದ ಸಿಎಂ ಸ್ಥಾನವನ್ನು ಕಾಂಗ್ರೆಸ್ ಹೈಕಮಾಂಡ್ ತಪ್ಪಿಸಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಸ್ಫೋಟಕ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು ನಾನು ಖರ್ಗೆಯವರನ್ನು ಸಿಎಂ ಮಾಡಲು ಹೇಳಿದೆ. ಆದರೆ ಸೋನಿಯಾ ಗಾಂಧಿ ಖರ್ಗೆ ಬೇಡ ಅಂದರು. ಹೀಗಾಗಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಆಯ್ಕೆಯಾದರು ಎಂದು ಮೈತ್ರಿ ಸರ್ಕಾರದ ಒಪ್ಪಂದವನ್ನು ಬಹಿರಂಗಪಡಿಸಿದ್ದಾರೆ.
ಇದೇ ವೇಳೆ ಸಿದ್ದರಾಮಯ್ಯ ಸಾಮರ್ಥ್ಯವನ್ನು ಹೊಗಳಿದ ದೇವೇಗೌಡರು, ಈಗಲೇ ಚುನಾವಣೆ ನಡೆದರೆ ನಾವು ಅಧಿಕಾರಕ್ಕೆ ಬರುವುದಿಲ್ಲ. ಚುನಾವಣೆ ನಡೆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಸಿದ್ದರಾಮಯ್ಯಗೆ ಆ ವರ್ಚಸ್ಸು ಇದೆ ಎಂದರು.
Discussion about this post