ಇಂಗ್ಲೆಂಡ್ ತಂಡದ ವಿರುದ್ಧ ನಡೆದ ಮೂರು ಪಂದ್ಯಗಳ T20 ಸರಣಿಯಲ್ಲಿ ವೈಟ್ವಾಶ್ ಆಗಿರೋ ಶ್ರೀಲಂಕಾ ತಂಡಕ್ಕೆ ಮತ್ತೊಂದು ಅಘಾತ ಎದುರಾಗಿದೆ.
ಏಕದಿನ ಸರಣಿಯ ಆರಂಭಕ್ಕೂ ಮುನ್ನ ಇಂಗ್ಲೆಂಡ್ ಪ್ರವಾಸದಲ್ಲಿರುವ ಮೂವರು ಕ್ರಿಕೆಟ್ ಆಟಗಾರರನ್ನು ಅಮಾನತು ಮಾಡಲಾಗಿದೆ. ಕುಸಾಲ್ ಮೆಂಡಿಸ್, ದನುಷ್ಕಾ ಗುಣತಿಲಕ ಮತ್ತು ನಿರೋಶನ್ ಡಿಕ್ವೆಲ್ಲಾ ಅವರನ್ನು ಬಯೋಬಬಲ್ ಉಲ್ಲಂಘಿಸಿದ ಪ್ರಕರಣದಲ್ಲಿ ತಪ್ಪಿತಸ್ಥರು ಎಂದು ಗುರುತಿಸಲಾಗಿದೆ.
ಕ್ರಿಕೆಟಿಗರು ಬಯೋಬಬಲ್ ಉಲ್ಲಂಘಿಸಿದ ಕಾರಣಕ್ಕೆ ಅಮಾನತುಗೊಂಡಿದ್ದು ಈ ಹಿನ್ನೆಲೆಯಲ್ಲಿ ಈ ಮೂವರಿಗೆ ತವರಿಗೆ ಮರಳಲು ಸೂಚಿಸಲಾಗಿದೆ. ಕೊರೋನಾ ಆತಂಕದ ನಡುವೆ ಆಯೋಜಿಲಾಗಿರುವ ಕ್ರಿಕೆಟ್ ಪಂದ್ಯಾವಳಿ ಬಯೋಬಬಲ್ ವಾತಾವರಣದಲ್ಲಿ ನಡೆಯುತ್ತದೆ. ಆದರೆ ಈ ಮೂವರು ಆಟಗಾರರು ಈ ನಿಯಮಗಳನ್ನು ಉಲ್ಲಂಘಿಸಿ ಮಾದಕ ದ್ರವ್ಯದ ಮತ್ತಿನಲ್ಲಿ ಊರೂರು ಸುತ್ತಿದ್ದರು.
Discussion about this post