ಮಂಡ್ಯದ ಮಳವಳ್ಳಿ ತಾಲೂಕಿನಲ್ಲಿ ಪ್ರಚಾರ ನಡೆಸಿದ ಸಚಿವ ಡಿ.ಕೆ.ಶಿವಕುಮಾರ್, ನಾನು ನನ್ನ ಎಲ್ಲಾ ಕಾಂಗ್ರೆಸ್ಸಿಗರಿಗೆ ಕೈ ಮುಗಿದು, ಕಾಲು ಮುಗಿದು ಕೇಳಿಕೊಳ್ತಿನಿ ತಪ್ಪು ಮಾಡಲು ಹೋಗಬೇಡಿ. ಈ ರಾಜ್ಯದ ಮುಖ್ಯಮಂತ್ರಿ ನಿಮ್ಮ ಮನೆ ಬಾಗಿಲಿಗೆ ಬಂದು ಮತ ಕೇಳುತ್ತಿದ್ದಾರೆ. ಹೀಗಾಗಿ ನಿಖಿಲ್ ಕುಮಾರಸ್ವಾಮಿ ಗೆಲ್ಲಿಸಿ ಎಂದು ಮನವಿ ಮಾಡಿದ್ದಾರೆ.
ನಾನು ಇಲ್ಲಿರುವ ಕಾಂಗ್ರೆಸ್- ಜೆಡಿಎಸ್ ಕಾರ್ಯಕರ್ತರಿಗೆ ಹೇಳ್ತಿನಿ ನನ್ನ ಮನೆಬಾಗಿಲು ಯಾವಾಗಲೂ ತೆರೆದಿರುತ್ತದೆ. ಬಂದು ನಿಮ್ಮ ಕೆಲಸ ಮಾಡಿಸಿಕೊಳ್ಳಿ . ಬಹಳ ಜನ ಮುಖಂಡರು ಈ ಸಭೆಗೆ ಹೋಗ್ಬೇಡ ವೋಟ್ ಹಾಕಬೇಡ ಅಂತ ಹೇಳಿ ತುಂಬಾ ಪ್ರಯತ್ನ ಪಡುತ್ತಿದ್ದಾರೆ. ಇದು ಪಕ್ಷದ ತೀರ್ಮಾನ ರಾಹುಲ್ ಗಾಂಧಿ ತೀರ್ಮಾನ ಎಂದು ಬಂಡಾಯವೆದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಸಮಾಧಾನಪಡಿಸುವ ಕೆಲಸವನ್ನು ಕೂಡಾ ಇದೇ ವೇಳೆ ಮಾಡಿದರು.
Discussion about this post