ಸಿಕ್ಕಿರುವ ಅಧಿಕಾರ ಉಳಿಸಿಕೊಳ್ಳುವ ಯೋಗ್ಯತೆ ಜೆಡಿಎಸ್ ಮತ್ತು ಕಾಂಗ್ರೆಸ್ ಗೆ ಇಲ್ಲ. ಇಬ್ಬರ ಆಂತರಿಕ ಕಲಹದಿಂದ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಸ್ತುತ ರಾಜಕೀಯ ದೊಂಬರಾಟಕ್ಕೆ ಸಿದ್ದರಾಮಯ್ಯ ಹಾಗೂ ದೇವೇಗೌಡರೇ ಮಾಜಿ ಸ್ಪೀಕರ್ ಕೆ.ಆರ್. ಪೇಟೆ ಕೃಷ್ಣ ಆರೋಪಿಸಿದ್ದಾರೆ.
ಕೆಆರ್ ಪೇಟೆಯಲ್ಲಿ ಮಾತನಾಡಿದ ಅವರು ಇದೀಗ ಸಿದ್ದರಾಮಯ್ಯ ಬೆಂಬಲಿಗರೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರೋದು, ಜೆಡಿಎಸ್ ಮತ್ತು ಕಾಂಗ್ರೆಸ್ ತಲಾ ಎರಡೂವರೆ ವರ್ಷ ಅಧಿಕಾರ ಹಂಚಿಕೊಂಡಿದ್ರೆ ಸಮಸ್ಯೆ ಇರುತ್ತಿರಲಿಲ್ಲ. ದೇವೇಗೌಡರ ಐದು ವರ್ಷದ ಅಧಿಕಾರದ ಆಸೆಗೆ ಮೈತ್ರಿ ಬಲಿಯಾಗಿದೆ ಎಂದರು.
ದೇವೇಗೌಡರಿಗೆ ದುರಾಸೆ ಜಾಸ್ತಿ. ಅಧಿಕಾರ ಹಂಚಿಕೆ ಆಗಿದ್ರೆ ಕಾಂಗ್ರೆಸ್ ನವ್ರು ನಾಯಿ ಥರ ಅಧಿಕಾರಕ್ಕಾಗಿ ಕಾಯ್ತಿರೋರು. ರೇವಣ್ಣ ಉಪಮುಖ್ಯಮಂತ್ರಿಯಾಗುವ ಆಸೆ ಕೂಡಾ ಈಡೇರುತ್ತಿತ್ತು ಎಂದು ಕೆ.ಆರ್.ಪೇಟೆ ಕೃಷ್ಣ ತಿಳಿಸಿದರು.
ಇದೇ 14 ಶಾಸಕರ ಅನರ್ಹತೆ ಕುರಿತು ಸ್ಪೀಕರ್ ರಮೇಶ್ ಕುಮಾರ್ ಕೈಗೊಂಡಿರುವ ತೀರ್ಮಾನವನ್ನು ಸ್ವಾಗತಿಸಿದ ಕೃಷ್ಣ, ಸ್ಪೀಕರ್ ರಮೇಶ್ ಕುಮಾರ್ ತೀರ್ಮಾನ ಸರಿ ಇದೆ. ಅತೃಪ್ತರ ವಿರುದ್ದ ಸಲ್ಲಿಕೆಯಾದ ದಾಖಲೆ ಪರಿಶೀಲಿಸಿಯೇ ತೀರ್ಪು ಕೊಟ್ಟಿದ್ದಾರೆ. ಜೆಡಿಎಸ್- ಕಾಂಗ್ರೆಸ್ ಪಕ್ಷದ ನಾಯಕರು ಸ್ಪೀಕರ್ ಗೆ ಅಗತ್ಯ ದಾಖಲೆಗಳನ್ನ ಒದಗಿಸಿದ್ದಾರೆ. ತೀರ್ಪು ಪ್ರಶ್ನಿಸಿ ಶಾಸಕರು ಸುಪ್ರೀಂ ಕೋರ್ಟ್ ಮೊರೆ ಹೋಗಬಹುದು ಎಂದರು.
Discussion about this post