ರಾಜಕಾರಣದ ಚಕ್ರವನ್ನು ಹೇಗೆ ತಿರುಗಿಸಬೇಕೆಂಬುದು ನನಗೂ ಗೊತ್ತಿದೆ. ಅಂಥ ಸಮಯ ಬರಲಿದ್ದು, ಆಗ ಚಕ್ರ ತಿರುಗಿಸೋಣ. ಯಾರೂ ಶಾಶ್ವತ ಅಲ್ಲ’ ಎಂದು ಶಾಸಕ, ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಗುರುವಾರ ಹೇಳಿದ್ದಾರೆ.
ಮೈಸೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಯಡಿಯೂರಪ್ಪ ನನ್ನ ಕ್ಷೇತ್ರಕ್ಕೆ ಸಿಗಬೇಕಿದ್ದ ವೈದ್ಯಕೀಯ ಕಾಲೇಜನ್ನೇ ಕಿತ್ತುಕೊಂಡಿದ್ದಾರೆ. ಇನ್ನು ಇತರ ಶಾಸಕರ ಅನುದಾನ ಕಿತ್ತುಕೊಂಡಿರುವುದು ಯಾವ ಲೆಕ್ಕ?’ ಎಂದರು.
Discussion about this post