ಬೆಂಗಳೂರು : ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಕ್ಯಾತೆ ತೆಗೆದಿರುವುದು ಇದೀಗ ತಲೆನೋವಾಗಿ ಪರಿಣಮಿಸಿದೆ. ಜೊತೆಗೆ ತಮಿಳುನಾಡು ಕಿರಿಕ್ ಕಾರಣದಿಂದ ಯೋಜನೆ ವಿಳಂಭವಾಗುವ ಸಾಧ್ಯತೆಗಳಿದೆ. ಹೀಗಾಗಿ ಇದೀಗ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರೈತರು ನಿರ್ಧರಿಸಿದ್ದಾರೆ.
ಈ ಸಂಬಂಧ ಹೋರಾಟಕ್ಕಾಗಿ 6 ಜಿಲ್ಲೆಯ ರೈತರು ಸೇರಿ ಕರ್ನಾಟಕ ರಾಜ್ಯ ಮೇಕೆದಾಟು ಹೋರಾಟ ಸಮಿತಿಯನ್ನು ಅಸ್ತಿತ್ವಕ್ಕೆ ತಂದಿದ್ದಾರೆ. ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಯ ರೈತ ಮುಖಂಡರು ಈ ಸಮಿತಿಯಲ್ಲಿ ಇರಲಿದ್ದಾರೆ.
ಇನ್ನು ಈ ಸಮಿತಿಯ ಮೊದಲ ಸಭೆ ರಾಮನಗರದಲ್ಲಿ ನಡೆದಿದ್ದು, ಹೋರಾಟ ತೀವ್ರಗೊಳಿಸುವ ನಿಟ್ಟಿನಲ್ಲಿ ವಿಧಾನಸೌಧ ಚಲೋ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಆಗಸ್ಟ್ 3 ರಿಂದ 7ರ ತನಕ ಈ ಪಾದಯಾತ್ರೆ ನಡೆಯಲಿದ್ದು, ಕನಕಪುರದ ಮೇಕೆದಾಟುವುನಿಂದ ಬೆಂಗಳೂರು ವಿಧಾನಸೌಧ ತನಕ ಪಾದಯಾತ್ರೆ ಸಾಗಲಿದೆ.
ಪಾದಯಾತ್ರೆಯಲ್ಲಿ ಈ ಆರು ಜಿಲ್ಲೆಗಳ 10 ಸಾವಿರಕ್ಕೂ ಅಧಿಕ ರೈತರು ಪಾಲ್ಗೊಳ್ಳಲಿದ್ದಾರೆ ಎಂದು ಹೋರಾಟ ಸಮಿತಿ ಅಧ್ಯಕ್ಷ ಸಂಪತ್ ಕುಮಾರ್ ಹೇಳಿದ್ದಾರೆ.
Discussion about this post