ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಹಿಂದೆ ಪ್ರೇಮ ವಿಚಾರವಿದೆ ಅನ್ನುವ ಸುದ್ದಿ ಹರಿದಾಡುತ್ತಿದೆ.(Fazil murder) ಕೆಲ ರಾಜಕೀಯ ನಾಯಕರ ಹೇಳಿಕೆ ಪ್ರಕಾರ ಈ ಕೊಲೆ ಹಿಂದೆ ಪ್ರತೀಕಾರವೂ ಇಲ್ಲ ಕೋಮು ದ್ವೇಷವೂ ಇಲ್ಲ ಅನ್ನಲಾಗಿದೆ.
ಮಂಗಳೂರು : ನಗರದ ಹೊರವಲಯದ ಸುರತ್ಕಲ್ ನಲ್ಲಿ ಫಾಜಿಲ್ ಎಂಬ ಯುವಕನ ಬರ್ಬರ ಹತ್ಯೆ (Fazil murder) ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಸುರತ್ಕಲ್ ಸುತ್ತ ಮುತ್ತಲಿನ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಈ ಬಗ್ಗೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಮಾತನಾಡಿದ್ದು ಸುರತ್ಕಲ್, ಮುಲ್ಕಿ, ಬಜ್ಪೆ, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗೆ ವರೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಅಂದಿದ್ದಾರೆ.
ಸುರತ್ಕಲ್ನಲ್ಲಿ ಫಾಜಿಲ್ನ ಹತ್ಯೆ ನಡೆದ ಸ್ಥಳಕ್ಕೆ ಭೇಟಿ (Fazil murder) ನೀಡಿದ ಬಳಿಕ ಮಾತನಾಡಿದ ಅವರು, ಮದ್ಯದಂಗಡಿಗಳನ್ನು ಬಂದ್ ಮಾಡುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : boycott zee kannada : ಯಕ್ಷಗಾನಕ್ಕೆ ಅವಮಾನ : ಝೀ ಕನ್ನಡ ವಿರುದ್ಧ ದಾಖಲಾಯ್ತು ಪ್ರಕರಣ
ಈ ನಡುವೆ ಪ್ರವೀಣ್ ನೆಟ್ಟಾರು ಹತ್ಯೆ ಬೆನ್ನಲ್ಲೇ ಫಾಜಿಲ್ ಕೊಲೆ ನಡೆದ ಕಾರಣ ಇದೊಂದು ಪ್ರತೀಕಾರದ ಕೊಲೆ ಎಂದು ಕೆಲ ರಾಜಕಾರಣಿಗಳು ಹೇಳಿಕೆ ಕೊಟ್ಟಿದ್ದರು. ಆದರೆ ಈಗ ಪೊಲೀಸರಿಗೆ ಸಿಕ್ಕಿರುವ ಪ್ರಾಥಮಿಕ ಮಾಹಿತಿ ಪ್ರಕಾರ ಈ ಕೊಲೆಯ ಹಿಂದೆ ಯಾವುದೇ ಕೋಮು ದ್ವೇಷವಿಲ್ಲ ಮತ್ತು ಇದು ಪ್ರತೀಕಾರದ ಕೊಲೆ ಅಲ್ಲ ಅನ್ನಲಾಗಿದೆ. ಆದರೆ ಈ ಬಗ್ಗೆ ಪೊಲೀಸರು ಯಾವುದೇ ಅಧಿಕೃತ ಹೇಳಿಕೆಗಳು ಸಿಕ್ಕಿಲ್ಲ.
ಎರಡು ಗುಂಪುಗಳ ನಡುವೆ ಪ್ರೀತಿಯ ವಿಚಾರಕ್ಕಾಗಿ ದ್ವೇಷವಿತ್ತು, ಜಿಲ್ಲೆಯ ಉದ್ವಿಗ್ನ ಸ್ಥಿತಿ ಲಾಭ ಪಡೆಯಲು ಯತ್ನಿಸಿರುವ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಅನ್ನಲಾಗಿದೆ. ಆದರೆ ಪೊಲೀಸರ ತನಿಖೆಯ ಬಳಿಕವೇ ಸ್ಪಷ್ಟ ಮಾಹಿತಿ ಹೊರ ಬರಲಿದೆ.
ಮತ್ತೊಂದು ಮಾಹಿತಿಯ ಪ್ರಕಾರ ಹಣಕಾಸು ವಿಚಾರದಲ್ಲಿ ಈ ಕೊಲೆ ನಡೆದಿದೆ ಅನ್ನುವ ಮಾಹಿತಿಯೂ ಲಭ್ಯವಾಗಿದೆ.
ಇನ್ನು ಫಾಜಿಲ್ ನನ್ನು ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಗಳ ಸುಳಿವು ಪೊಲೀಸರಿಗೆ ಲಭ್ಯವಾಗಿದ್ದು, ಪ್ರತ್ಯಕ್ಷದರ್ಶಿಗಳು ಕೊಟ್ಟ ಸುಳಿವು ಮತ್ತು ಕಾರಿನ ಆಧಾರದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಮಾಧ್ಯಮ ಪ್ರಕಟಣೆ ಹೊರಡಿಸಿದ್ದು ಹತ್ಯೆಯನ್ನು ಖಂಡಿಸಿದ್ದಾರೆ. ಹಾಗೂ ಜನತೆ ಶಾಂತಿಯಿಂದ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಸುರತ್ಕಲ್ನಲ್ಲಿ ಫಾಜಿಲ್ ಹತ್ಯೆ ನಡೆದಿದೆ. ಫಾಜಿಲ್ ಅಮಾನುಷ ಕೊಲೆಯನ್ನ ಅತ್ಯುಗ್ರವಾಗಿ ಖಂಡಿಸುತ್ತೇನೆ. ದುಷ್ಕೃತ್ಯ ನಡೆಸಿದವರನ್ನು ಬಂಧಿಸಿ ಕ್ರಮಕೈಗೊಳ್ಳಲು ಪೊಲೀಸರು ಪೂರ್ಣ ಸ್ವಾತಂತ್ರ್ಯ ಹೊಂದಿದ್ದಾರೆ. ಜನತೆ ಶಾಂತಿಯಿಂದ ಸಹಕರಿಸಬೇಕು ಎಂದು ಗೃಹ ಇಲಾಖೆ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
Discussion about this post