ಕಳೆದ ವರ್ಷ ಮೂರೇ ದಿನದಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಾಗ ಅವರು ಮತ್ತೆ ಮುಖ್ಯಮಂತ್ರಿಯಾಗುವ ತನಕ ಚಪ್ಪಲಿ ತೊಡುವುದಿಲ್ಲ ಎಂದು ಮಂಡ್ಯ ತಾಲೂಕಿನ ಉಪ್ಪರಕನಹಳ್ಳಿ ನಿವಾಸಿಯಾದ ಶಿವಕುಮಾರ್ ಆರಾಧ್ಯ ಶಪಥ ಮಾಡಿದ್ದರು.
ಶನಿವಾರ ಬಿ ಎಸ್ ಯಡಿಯೂರಪ್ಪ ಹುಟ್ಟೂರು ಬೂಕನಕೆರೆಯಲ್ಲಿ ಅಭಿಮಾನಿಗಳಿಗೆ ಅಭಿನಂದನೆ ಸಲ್ಲಿಸಲು ಹೋಗಿದ್ದಾಗ, ಶಿವಕುಮಾರ್ ಅವರ ಶಪಥ ತಿಳಿದ ಯಡಿಯೂರಪ್ಪ ಸಂತಸಗೊಂಡು, ವಾರದೊಳಗೆ ಹೊಸ ಚಪ್ಪಲಿ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.
Discussion about this post