ಬೆಂಗಳೂರು : ಟೋಕಿಯೋ ಒಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ ಅವರ ಸಾಧನೆಯನ್ನು ದೇಶ ಕೊಂಡಾಡುತ್ತಿದೆ. ಈ ನಡುವೆ ಕರ್ನಾಟಕವೂ ಕೂಡಾ ಈ ಚಿನ್ನದ ಕ್ಷಣಗಳನ್ನು ಸಂಭ್ರಮಿಸುತ್ತಿದೆ. ಕರುನಾಡಿನ ರಾಜಕಾರಣಿಗಳು ಕೂಡಾ ಚೋಪ್ರಾ ಅವರನ್ನು ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ. ಈ ನಡುವೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೂಡಾ ಚೋಪ್ರಾ ಅವರನ್ನು ಅಭಿನಂದಿಸಿದ್ದಾರೆ. ಜೊತೆಗೆ ಕ್ರೀಡಾಪಟುಗಳನ್ನು ಬೆಳೆಸುವ ಕುರಿತಂತೆ ಅಮೂಲ್ಯ ಸಲಹೆ ಕೊಟ್ಟಿದ್ದಾರೆ.
ಒಡಿಶಾ ಹಾಕಿಯನ್ನು ಪ್ರೋತ್ಸಾಹಿಸಿದಂತೆ ಎಲ್ಲ ರಾಜ್ಯಗಳೂ ಒಂದೊಂದು ಕ್ರೀಡೆಯನ್ನು ಪ್ರೋತ್ಸಾಹಿಸುವ ಅವಶ್ಯಕತೆ ಇದೆ. ಈ ಮೂಲಕ ಪ್ರತಿಯೊಂದು ಕ್ರೀಡೆಗೆ ಪ್ರೋತ್ಸಾಹ ಸಿಗುವಂತೆ ಮಾಡುವುದು, ವಿಶ್ವ ಮಟ್ಟದ ಕೂಟದಲ್ಲಿ ಭಾರತದ ಘನತೆ ಎತ್ತಿ ಹಿಡಿಯುವುದು ಆದ್ಯತೆ ಆಗಬೇಕು. ಸಂಸದೀಯ ಸ್ಥಾಯಿಸಮಿತಿ(ಕ್ರೀಡೆ) ಇದೇ ಶಿಫಾರಸ್ಸನ್ನು ಕೇಂದ್ರಕ್ಕೆ ಮಾಡಿದೆ. ಅನ್ನುವ ಮೂಲಕ ಕರ್ನಾಟಕದ ಮುಖ್ಯಮಂತ್ರಿಗಳಿಗೊಂದು ಸಲಹೆ ಕೊಟ್ಟಿದ್ದಾರೆ.
Discussion about this post