ಎರಡು ಹೊತ್ತು ಊಟಕ್ಕೂ ಗತಿಯಿಲ್ಲದವರು ಭಾರತೀಯ ಸೇನೆ ಸೇರುತ್ತಿದ್ದಾರೆ ಎಂದು ಕರ್ನಾಟಕದ ಮುಖ್ಯಮಂತ್ರಿಕುಮಾರಸ್ವಾಮಿ ಹೇಳಿದ್ದಾರೆ. ಈ ಮೂಲಕ ದೇಶದ ರಕ್ಷಣೆಗಾಗಿ ಮರಭೂಮಿಯಲ್ಲಿನ 50 ಡಿಗ್ರಿ ಸೆಂಟಿಗ್ರೇಡ್ ತಾಪಮಾನ ಸಹಿಸಿಕೊಂಡು ಕೆಲಸ ಮಾಡುವ, ಹಿಮಾಲಯದ ತಪ್ಪಲಿನಲ್ಲಿ ರಕ್ತವನ್ನು ಹೆಪ್ಪುಗಟ್ಟಿಸುವ ಚಳಿಯಲ್ಲೂ ಕೆಲಸ ಮಾಡುತ್ತಾ, ಎಂಥ ಬಲಿದಾನಕ್ಕೂ ಸಿದ್ಧವಾಗಿರುವ ಭಾರತೀಯ ಯೋಧರಿಗೆ ಅಪಮಾನ ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಬೇಸರ ವ್ಯಕ್ತಪಡಿಸಿದ್ದಾರೆ.
ಗಂಗಾವತಿಯಲ್ಲಿ ಶುಕ್ರವಾರ ಆಯೋಜನೆಗೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಕರ್ನಾಟಕದಲ್ಲಿ ಶೇ.10 ಕಮಿಷನ್ ನಡೆಯುತ್ತಿತ್ತು. ಈಗ ಜೆಡಿಎಸ್ ಕೂಡ ಕೈಜೋಡಿಸಿರುವುದರಿಂದ, ಶೇ.10 ಇದ್ದ ಕಮಿಷನ್ ಈಗ ಶೇ.20ಕ್ಕೆ ಹೆಚ್ಚಳವಾಗಿದೆ ಎಂದು ಟೀಕಿಸಿದ್ದಾರೆ.
Discussion about this post