Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ದಾಖಲೆ ನಿರ್ಮಿಸಿದ ಮಕ್ಕಳ ಕಮರ್ಷಿಯಲ್​ ಚಿತ್ರ – IMDB ನೀಡಿದ ಭಾರತದ ಬಹು ನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ 5 ನೇ ಸ್ಥಾನ ಪಡೆದ ಗಿರ್ಮಿಟ್

Radhakrishna Anegundi by Radhakrishna Anegundi
November 2, 2019
in ಮನೋರಂಜನೆ
Share on FacebookShare on TwitterWhatsAppTelegram

ಐಎಮ್​ ಡಿಬಿಯ ನಿರೀಕ್ಷಿತ ಚಿತ್ರಗಳ ಅಗ್ರಪಟ್ಟಿಯಲ್ಲಿ 5 ನೇ ಸ್ಥಾನ ಪಡೆದ ಗಿರ್ಮಿಟ್​, ಭಾರತೀಯ ಚಿತ್ರಗಳ ಜೊತೆ ಗುರುತಿಸಿಕೊಂಡು ನಿರೀಕ್ಷೆ ಮೂಡಿಸಿದ ಚಿತ್ರ

ಭಾರತೀಯ ಚಿತ್ರರಂಗದಲ್ಲಿ ಮೊದಲು ಎನ್ನಲಾದ ಮಕ್ಕಳ ವಾಣಿಜ್ಯಾತ್ಮಕ ಚಿತ್ರಕ್ಕೆ ಮತ್ತೊಂದು ಗರಿ ಮೂಡಿದೆ.

ಮಕ್ಕಳ ಮೊಟ್ಟ ಮೊದಲ ಕಮರ್ಷಿಯಲ್​ ಚಿತ್ರವೆಂದು ಹೆಸರು ಪಡೆದಿರುವ ರವಿ ಬಸ್ರೂರು ಮತ್ತು ತಂಡದ ಪರಿಶ್ರಮದ ಗಿರ್ಮಿಟ್​ ಚಿತ್ರವು ಈಗ ಮತ್ತೊಂದು ದಾಖಲೆ ಬರೆದಿದೆ. ​​ಚಲನಚಿತ್ರಗಳ ಮಾನದಂಡ ಸಂಸ್ಥೆಯಾದ ಐಎಂಡಿಬಿ ನೀಡಿದ ಬಹು ನಿರೀಕ್ಷಿತ ಭಾರತೀಯ ಚಿತ್ರಗಳ ಪೈಕಿ ಬಸ್ರೂರು ಚಿತ್ರ 5 ನೇ ಸ್ಥಾನವನ್ನು ಪಡೆದಿದೆ.

ಶನಿವಾರ, ನ.2 ರ ಹೊತ್ತಿಗೆ ಜಾಲತಾಣ ಮಾನದಂಡ ಸಂಸ್ಥೆಯು ನೀಡಿದ ಪಟ್ಟಿಯಲ್ಲಿ ಸ್ಟಾರ್​ ನಟರ ಚಿತ್ರಗಳ ಜೊತೆ ಗುರುತಿಸಿಕೊಂಡಿರುವುದು ಚಿತ್ರತಂಡದ ಸಂತಸಕ್ಕೆ ಕಾರಣವಾಗಿದೆ. ಅಲ್ಲದೆ ಚಿತ್ರದ ಬಗ್ಗೆ ನಿರೀಕ್ಷೆಯನ್ನೂ ಹೆಚ್ಚಿಸಿದೆ.

ಜಾಲತಾಣ ಮಾನದಂಡ ಸಂಸ್ಥೆಯು ನೀಡಿರುವ ಜನರು ನೋಡಲು ಬಯಸುತ್ತಿರುವ ಚಿತ್ರಗಳ ಪೈಕಿ ಬಾಲಿವುಡ್​ ನ ಮಾರ್ಜಾವಾನ್ ಚಿತ್ರವು ಮೊದಲ ಸ್ಥಾನ ಪಡೆದಿದೆ. ಸಿದ್ಧಾರ್ಥ್ ಮಲ್ಹೋತ್ರಾ ಅಭಿನಯದ ಈ ಚಿತ್ರವನ್ನು ಶೇ.22.8 ರಷ್ಟು ಮಂದಿ ನೋಡುವ ನಿರೀಕ್ಷೆಯಲ್ಲಿದ್ದಾರೆ.

ಎರಡನೇ ಸ್ಥಾನದಲ್ಲಿ ಸಲ್ಮಾನ್ ಖಾನ್​ ಅಭಿನಯದ ದಬಾಂಗ್​ 3 ಇದೆ. ಇದನ್ನು ಶೇ.21.9 ರಷ್ಟು ಮಂದಿ ನೋಡಲು ಕಾತರರಾಗಿದ್ದಾರೆ. ಮೂರನೇ ಸ್ಥಾನದಲ್ಲಿ ಬಾಲಾ ಚಿತ್ರವಿದೆ. ಇದು ಶೇ.20.6 ರಷ್ಟು ಜನರ ಬೇಡಿಕೆ ಚಿತ್ರವಾಗಿದೆ. ನಾಲ್ಕನೇ ಸ್ಥಾನದಲ್ಲಿ ಪಾಗಲ್​ ಪಂತಿ ಚಿತ್ರವಿದೆ. ಶೇ.17 ರಷ್ಟು ಜನರು ಈ ಚಿತ್ರವನ್ನು ನೋಡಲು ಬಯಸುತ್ತಿದ್ದಾರೆ.

5 ನೇ ಸ್ಥಾನದಲ್ಲಿ ಇರುವ ಕನ್ನಡದ ಗಿರ್ಮಿಟ್​ ಚಿತ್ರವು ಶೇ.11.1 ರಷ್ಟು ಜನರ ನಿರೀಕ್ಷೆಯಲ್ಲಿದ್ದು ಭರವಸೆ ಮೂಡಿಸಿದೆ.

ಜಾಲತಾಣ ಮಾನದಂಡ ಸಂಸ್ಥೆಯು ನೀಡುವ ಈ ಅಂಕಿ ಅಂಶಗಳ ಮಾಹಿತಿಯು ಕನ್ನಡ ಸಿನಿಮಾಗಳ ಹಿರಿಮೆಯನ್ನು ಹೆಚ್ಚಿಸುತ್ತಿದೆ. ಬಸ್ರೂರು ಅವರ ಹೊಸ ಶೈಲಿಯ ಈ ಚಿತ್ರವನ್ನು ನೋಡಲು ಪ್ರೇಕ್ಷಕರು ಕಾತರರಾಗಿದ್ದಾರೆ.

ಏನಿದು ಜಾಲತಾಣ ಮಾನದಂಡ?

ಐಎಮ್​ ಡಿಬಿ ಎಂದರೆ ಇಂಟರ್ನೆಟ್​ ಮೂವಿ ಡೇಡಾ ಬೇಸ್​ ಎಂದರ್ಥ. ಅಂದರೆ ಚಲನಚಿತ್ರಗಳ ಬಗ್ಗೆ ಜಾಲತಾಣಿಗರು ವ್ಯಕ್ತಪಡಿಸುವ ಅಭಿಪ್ರಾಯಗಳು, ನೀಡುವ ವಿಮರ್ಶೆಗಳ ಬಗ್ಗೆ ತಿಳಿಸುವ ಒಂದು ಜಾಲತಾಣ ಮಾನದಂಡ ಸಂಸ್ಥೆಯಾಗಿದೆ.

ಇದು ಚಲನಚಿತ್ರಗಳು ಮಾತ್ರವಲ್ಲದೆ ದೂರದರ್ಶನ ಕಾರ್ಯಕ್ರಮಗಳು, ವಿಡಿಯೋ ಗೇಮ್​ ಗಳಿಗೆ ಸಂಬಂಧಿಸಿದ ಜಾಲತಾಣಿಗರ ಅಭಿಪ್ರಾಯದ ದತ್ತಾಂಶವನ್ನು ನೀಡುತ್ತದೆ.

Girmit imdb 01

ಶನಿವಾರ, ಅ.26 ರಂದು ಬಿಡುಗಡೆಯಾದ ಗಿರ್ಮಿಟ್​ ಟ್ರೈಲರ್​ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಸಂಗೀತ ನಿರ್ದೇಶಕ ಬಸ್ರೂರು ಮತ್ತು ತಂಡದ ಪ್ರಯತ್ನದ ಫಲವಾಗಿದ್ದು ಬಸ್ರೂರು ಅವರ ಶ್ರಮದ ನಾಲ್ಕನೇ ಚಿತ್ರವಾಗಿದೆ.

ಟ್ರೈಲರ್​ ಮೂಲಕ ಕುತೂಹಲ ಮೂಡಿಸಿರುವ ಚಿತ್ರ ಇದೇ ತಿಂಗಳ 8 ರಂದು ಪ್ರಪಂಚದಾದ್ಯಂತ ಬಿಡುಗಡೆಯಾಗುತ್ತಿದೆ.

ಚಿತ್ರದ ಟ್ರೈಲರ್​ ನಲ್ಲಿ ನಾಯಕ, ನಾಯಕಿಯಾಗಿರುವ ಮಕ್ಕಳು ಗಮನ ಸೆಳೆದಿದ್ದಾರೆ. ಚಿತ್ರದಲ್ಲಿ ರಾಕಿಸ್ಟಾರ್​ ಯಶ್​, ರಾಧಿಕಾ ಪಂಡಿತ್​ ಸೇರಿದಂತೆ ಹಿರಿಯ ಕಲಾವಿದರು ಮಕ್ಕಳ ಪ್ರಧಾನ ಪಾತ್ರಗಳಿಗೆ ಹಿನ್ನಲೆ ದನಿ ನೀಡಿರುವುದು ಚಿತ್ರದ ಪ್ರಮುಖ ಅಂಶಗಳಲ್ಲಿ ಒಂದು.

ಬಸ್ರೂರು ಚಿತ್ರಕ್ಕೆ ಸಂಗೀತ ನೀಡುವ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ಚಿತ್ರದ ‘ಆರಂಭವೇ ಆನಂದವೇ’ ಎಂಬ ಲಿರಿಕಲ್ ವಿಡಿಯೋ ಗೀತೆ ಅ.21 ರ ಸಂಜೆ 7 ಕ್ಕೆ ಬಿಡುಗಡೆಯಾಗಿತ್ತು. ಕಿನ್ನಾಳ ರಾಜ್ ಸಾಹಿತ್ಯ ಇದ್ದು ಸಂತೋಷ್ ವೆಂಕಿ ಗೀತೆಗೆ ಧ್ವನಿಯಾಗಿದ್ದಾರೆ.

Girmit imdb 02

ಚಿತ್ರದಲ್ಲಿ ಮಕ್ಕಳೇ ನಾಯಕ, ನಾಯಕಿ, ತಂದೆ, ತಾಯಿ, ಅಜ್ಜಿ, ಸ್ನೇಹಿತರು ಹೀಗೆ ಎಲ್ಲ ಬಗೆಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಭಾರತೀಯ ಚಿತ್ರರಂಗದಲ್ಲೇ ಒಂದು ವಿಶಿಷ್ಟ ಪ್ರಯತ್ನವಾದ ಈ ಚಿತ್ರವನ್ನು ಮಕ್ಕಳ ಮೂಲಕವೇ ಚಿತ್ರಿಸಿ ತೆರೆಗೆ ತರಲಾಗುತ್ತಿದೆ. ಒಂದು ಕಮರ್ಷಿಯಲ್ ಚಿತ್ರದಲ್ಲಿ ಇರುವ ಅಂಶಗಳೆಲ್ಲವೂ ಇದರಲ್ಲಿದೆ. ನಾಯಕ, ನಾಯಕಿಯ ವಾಗ್ಯುದ್ಧಗಳು, ನಾಯಕನ ಖಡಕ್ ಡೈಲಾಗ್ ಗಳು, ನಾಯಕ, ನಾಯಕಿಯ ಪ್ರೇಮ ಸಲ್ಲಾಪಗಳು ಎಲ್ಲವೂ ಚಿತ್ರದಲ್ಲಿದೆ. ದೊಡ್ಡವರ ಪೋಷಾಕಿನಲ್ಲಿ ಕಾಣಿಸಿಕೊಂಡಿರುವ ಮಕ್ಕಳ ಪೋಸ್ಟರ್ ಮತ್ತು ಟೀಸರ್ ಗಮನ ಸೆಳೆದಿತ್ತು.

ಚಿತ್ರರಂಗದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸ್ಟಾರ್ ನಟರು ಪ್ರಧಾನ ಪಾತ್ರಗಳಿಗೆ ಕಂಠದಾನ ನೀಡಿದ ಗಿರ್ಮಿಟ್ ಡಬ್ಬಿಂಗ್​ ಟ್ರೈಲರ್ ಶನಿವಾರ, ಅ.19 ರಂದು ರಿಲೀಸ್ ಆಗಿತ್ತು.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅರ್ಪಿಸುವ ಈ ಚಿತ್ರವು ಓಂಕಾರ್ ಮೂವೀಸ್ ಬ್ಯಾನರ್ ನಡಿ ನಿರ್ಮಾಣವಾಗಿದೆ. ಚಿತ್ರಕ್ಕೆ ಎನ್ ಎಸ್ ರಾಜ್ ಕುಮಾರ್ ಬಂಡವಾಳ ಹೂಡಿದ್ದಾರೆ. ಸೂರಜ್ ಚೌಧರಿ ಮತ್ತು ನರೇನ್ ಚಂದ್ರ ಚೌಧರಿಯು ಸಹ ನಿರ್ಮಾಪಕರಾಗಿದ್ದಾರೆ.

ಪ್ರಮೋದ್ ಮರವಂತೆ, ಕಿನ್ನಲ್ ರಾಜ್, ಸಂದೀಪ್ ಶಿರಸಿ, ಸುಚನ್ ಶೆಟ್ಟಿ ಮತ್ತು ಮಂಜುನಾಥ್ ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಚಿತ್ರದಲ್ಲಿ ಅಶ್ಲೇಷ್ ರಾಜ್, ಶ್ಲಾಘಾ ಸಾಲಿಗ್ರಾಮಾ, ಆರಾಧ್ಯ ಶೆಟ್ಟಿ, ತನಿಶಾ ಕೋನಿ, ಜಯೇಂದ್ರ, ನಾಗರಾಜ್ ಜಪ್ತಿ, ಆದಿತ್ಯ ಕುಂದಾಪುರ ಮತ್ತು ಸಿಂಚನಾ ಕೋಟೇಶ್ವರ ಮೊದಲಾದ ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಸಂಗೀತ ನಿರ್ದೇಶಕ ರವಿ ಬಸ್ರೂರು ಮತ್ತು ಅವರ ತಂಡ ಭಿನ್ನ ಪ್ರಯತ್ನದ ಮೂಲಕ ಮಕ್ಕಳ ಕಮರ್ಷಿಯಲ್ ಚಿತ್ರ ಗಿರ್ಮಿಟ್ ನ್ನು ತಯಾರಿಸಿದ್ದಾರೆ.

ಚಿತ್ರವು ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಏಕಕಲಾದಲ್ಲಿ ನವೆಂಬರ್​ 8 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

ShareTweetSendShare

Discussion about this post

Related News

Kantara Box Office 300 crore Kantara Box Office 300 crore

Kantara Box Office 300 crore : 30 ದಿನದಲ್ಲಿ 300 ಕೋಟಿ : ದಾಖಲೆ ಮೇಲೆ ದಾಖಲೆ ಬರೆದ ಕಾಂತಾರ

dhruva-sarja-and-prerana-expecting-their-first-child

Dhruva sarjaa : ಗುಡ್ ನ್ಯೂಸ್ ಕೊಟ್ಟ ಧ್ರುವ ಪ್ರೇರಣಾ ದಂಪತಿ

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

Dhamaka : ಧಮಾಕ ಟ್ರೇಲರ್ ರಿಲೀಸ್…ಇದು ಕಾಮಿಡಿ ಜೋಡಿಯ ನಗುವಿನ ಟಾನಿಕ್

Kendasampige : ಧಾರಾವಾಹಿ ಲೋಕದಲ್ಲಿ ದಾಖಲೆ ಬರೆಯಲಿದೆ ಕೆಂಡಸಂಪಿಗೆ

Bigg Boss OTT : ಮೂಡ್ ಬಂದಿಲ್ಲ ಅಂದ್ರೆ 3 ದಿನವಾದ್ರೂ ಮಾಡಲ್ಲ : ಸುದೀಪ್ ಮುಂದೆ ಸೋನು ರಹಸ್ಯ ಬಯಲು

bigg boss roopesh shetty : ಅವಳು ಬೀಳ್ತಾ ಇಲ್ಲ ಇವನು ಬಿಡ್ತಾ ಇಲ್ಲ : ರೂಪೇಶ್ love with ಸಾನ್ಯಾ

kiran yogeshwar  : ಬಿಗ್ ಬಾಸ್ ಮನೆಯಿಂದ ಹೊರ ಬಂದ ಕಿರಣ್ ಯೋಗೇಶ್ವರ್

Bigg Boss OTT : ವಾಶ್ ರೂಮ್ ನಲ್ಲಿ ಜಿರಳೆ : ಸಾನ್ಯಾ ಸಹಾಯಕ್ಕೆ ರೂಪೇಶ್

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್