ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕೊರೋನಾ ಸೋಂಕಿನ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಅದರಲ್ಲೂ ಕ್ಲಸ್ಟರ್ ಮಾದರಿಯಲ್ಲಿ ಸೋಂಕು ಪತ್ತೆಯಾಗುತ್ತಿರುವುದು ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.
ಈಗಾಗಲೇ ಕಾವಲ್ ಭೈರಸಂದ್ರದ ಮಂಜುಶ್ರೀ ನರ್ಸಿಂಗ್ ಕಾಲೇಜು, ಬೊಮ್ಮನಹಳ್ಳಿ, ಮಹಾದೇವಪುರ ಅಪಾರ್ಟ್ ಮೆಂಟ್, ಯಲಹಂಕದ ಕಾಲೇಜು ಮತ್ತು ಅಪಾರ್ಟ್ ಮಂಟ್ ಹಾಗೂ ನಗರದ ಕೆಲ ಶಾಲೆಗಳಲ್ಲಿ ಕ್ಲಸ್ಟರ್ ಮಾದರಿಯಲ್ಲಿ ಸೋಂಕು ಪತ್ತೆಯಾಗಿದೆ.
ಮುಂದುವರಿದ ಭಾಗವಾಗಿ ಬನಶಂಕರಿಯ ವಿದ್ಯಾಪೀಠದ ಬಳಿ ಇರುವ ಹಾಸ್ಟೆಲ್ ಒಂದರಲ್ಲಿ 7 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ.
ಇದೀಗ ಏಲು ಮಂದಿಯನ್ನೂ ಜಯನಗರದ ಸಂಜಯಗಾಂಧಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಾರ್ಚ್ 8 ರಂದು ವಿದ್ಯಾಪೀಠದ ಸರ್ಕಾರಿ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಹಾಸ್ಟೆಲ್ ನ ವಿದ್ಯಾರ್ಥಿಯೊಬ್ಬರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು.
ಬಳಿಕ ಸೋಂಕಿತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಈ ವಿದ್ಯಾರ್ಥಿಯ ಸಂಪರ್ಕಕ್ಕೆ ಬಂದಿದ್ದ 158 ಮಂದಿಯನ್ನು ಕೋವಿಡ್ ಪರೀಕ್ಷೆ ಒಳಪಡಿಸಲಾಗಿತ್ತು.
ಇದೀಗ 158 ಜನರ ರಿಪೋರ್ಟ್ ಬಂದಿದ್ದು ಅದರಲ್ಲಿ 7 ಮಂದಿಗೆ ಸೋಂಕು ತಗುಲಿದೆ.
Discussion about this post