ಹೈದರಾಬಾದ್ ಪಶುವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಗಲ್ಲಿಗೇರಿಸಿ ಎನ್ನುವ ಕೂಗು ಕೇಳಿ ಬರುತ್ತಿರುವಾಗಲೇ, ನಾಲ್ಕೂ ಆರೋಪಿಗಳನ್ನು ಪೊಲೀಸರು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದ್ದಾರೆ.
ವಿಶೇಷ ಎಂದರೆ ಎನ್ಕೌಂಟರ್ ಮಾಡಿದ ಪೊಲೀಸ್ ಆಯುಕ್ತರು ಹುಬ್ಬಳ್ಳಿ ಮೂಲದವರು. ಹುಬ್ಬಳ್ಳಿಯ ವಿಶ್ವನಾಥ್ ಸಜ್ಜನರ್ ಸೈಬರಾಬಾದ್ನಲ್ಲಿ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಎನ್ಕೌಂಟರ್ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿರುವ ಸಜ್ಜನರ್ ಈ ಹಿಂದೆ ವಾರಂಗಲ್ ಆ್ಯಸಿಡ್ ಪ್ರಕರಣದ ಆರೋಪಿಗಳನ್ನು ಎನ್ಕೌಂಟರ್ ಮಾಡಿದ್ದರು .
Discussion about this post