ಬೆಂಗಳೂರು : ಕಳೆದ ಕೆಲ ದಿನಗಳ ಹಿಂದೆ ರಾಜ್ಯದಲ್ಲಿ ಅಬ್ಬರಿಸಿದ ಮಳೆ ಇತ್ತೀಚೆಗಷ್ಟೇ ಕಡಿಮೆಯಾಗಿತ್ತು. ಹಾಗಂತ ಮಳೆ ಸಂಪೂರ್ಣವಾಗಿ ನಿಂತಿಲ್ಲ. ಈ ನಡುವೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸೋಮವಾರ ಮತ್ತು ಮಂಗಳವಾರ ಸಾಧಾರಣ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಹೇಳಿದೆ.
![rain1](https://torrentspree.com/wp-content/uploads/2021/11/rain1.jpg)
ಸೋಮವಾರ ಬೆಂಗಳೂರು,ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ರಾಮನಗರ, ತುಮಕೂರು,ಬಳ್ಳಾರಿ,ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಕೆಲವು ಕಡೆ ಮಳೆಯಾಗಿದೆ. ಇನ್ನು ಮಂಗಳವಾರ ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಯ ಕೆಲ ಕಡೆ ಮಳೆಯಾಗಲಿದೆ ಎಂದು ಹೇಳಲಾಗಿದೆ.
![rain 02](https://torrentspree.com/wp-content/uploads/2021/07/rain-02.jpg)
ಮಂಗಳವಾರದ ಬಳಿಕ ಕೊಡಗು ಮತ್ತು ಹಾಸನದ ಕೆಲ ಕಡೆ ಮಳೆಯಾಗಲಿದ್ದು ಉಳಿದಂತೆ ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ. ಜೊತೆಗೆ ದಕ್ಷಿಣ ಕನ್ನಡ ಮತ್ತು ಉಡುಪಿಯ ಕೆಲ ಭಾಗದಲ್ಲಿ ತುಂತುರು ಮಳೆಯಾಗಲಿದೆ.
![karnataka imd-predicts-heavy-rain-and-yellow-aleret-in-5-districts](https://torrentspree.com/wp-content/uploads/2021/11/rain-bg.jpg)
Discussion about this post