ಜುಲೈ 31 ರ ಒಳಗೆ ಎಲ್ಲಾ ರಾಜ್ಯಗಳು ಒಂದು ರಾಷ್ಟ್ರ, ಒಂದು ಪಡಿತರ ಚೀಟಿ (ಒನ್ ನೇಷನ್, ಒನ್ ರೇಷನ್ ಕಾರ್ಡ್) ಯೋಜನೆ ಜಾರಿಗೊಳಿಸಬೇಕು ಎಂದು ಸರ್ವೋಚ್ಛ ನ್ಯಾಯಾಲಯ ಆದೇಶಿಸಿದೆ.
ವಲಸೆ ಕಾರ್ಮಿಕರ ಅನುಕೂಲದ ಸಲುವಾಗಿ ಸುಪ್ರೀಂಕೋರ್ಟ್ ನೀಡಿರುವ ಆದೇಶ ಇದಾಗಿದೆ. ಇದರೊಂದಿಗೆ ಪಡಿತರ ಚೀಟಿ ಇಲ್ಲದವರಿಗೆ ಆಹಾರ ಧಾನ್ಯ ವಿತರಿಸಲು ರಾಜ್ಯಗಳು ಯೋಜನೆ ರೂಪಿಸಬೇಕು ಅನ್ನುವ ಸೂಚನೆಯನ್ನು ಕೂಡಾ ನೀಡಲಾಗಿದೆ.
ಈ ಹಿಂದೆ ಇದೇ ಯೋಜನೆಗೆ ಮಮತಾ ಬ್ಯಾನರ್ಜಿ ವಿರೋಧ ವ್ಯಕ್ತಪಡಿಸಿ ಸುದ್ದಿಯಾಗಿದ್ದರು.
Discussion about this post