ವಾರಣಾಸಿ : ಹಿಂದೂಗಳ ಪವಿತ್ರ ಶ್ರಾವಣ ಮಾಸ ಪ್ರಾರಂಭಕ್ಕೂ ಮುನ್ನ ಮುಸ್ಲಿಂ ಸಮುದಾಯದವರು ಕಾಶಿ ವಿಶ್ವನಾಥ ಮಂದಿರಕ್ಕೆ 1700 ಅಡಿ ಜಾಗ ಬಿಟ್ಟುಕೊಡಲು ಸಮ್ಮತಿಸಿದ್ದಾರೆ. ಈ ಸಂಬಂಧ ವಾರಾಣಸಿಯ ಜ್ಞಾನವಾಪಿ ಮಸೀದಿಯನ್ನು ನೋಡಿಕೊಳ್ಳುತ್ತಿರುವ ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಯು ಕಾಶಿ ವಿಶ್ವನಾಥ ದೇವಾಲಯಕ್ಕೆ ಈ ಭೂಮಿಯನ್ನು ನೀಡಿದೆ.
ದೇವಾಲಯ ಮತ್ತು ಮಸೀದಿಯ ಮಾಲೀಕತ್ವದ ಬಗ್ಗೆ ಕಾಶಿ ವಿಶ್ವನಾಥ ದೇವಾಲಯ ಹಾಗೂ ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿ ನಡುವೆ ನಡೆಯುತ್ತಿರುವ ಕಾನೂನು ಸಮರದ ಮಧ್ಯೆ ಈ ಬೆಳವಣಿಗೆ ನಡೆದಿದೆ.ಈ ಸಂಬಂಧ ಜುಲೈ 9 ರಂದು ಒಪ್ಪಂದಕ್ಕೂ ಸಹಿ ಹಾಕಲಾಗಿದೆ. ಒಪ್ಪಂದ ಪ್ರಕಾರ ಸಾವಿರ ಚದರ ಅಡಿ ಜಾಗವನ್ನು ದೇವಸ್ಥಾನದ ಆಡಳಿತ ಮಂಡಳಿ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಗೆ ನೀಡಬೇಕಿದೆ.
ಕಾಶಿ ವಿಶ್ವನಾಥ ದೇವಾಲಯಕ್ಕೆ ನಿಯಂತ್ರಣ ಕೊಠಡಿ ಸ್ಥಾಪಿಸಲು ಅಗತ್ಯವಾಗಿದ್ದ ಈ ಭೂಮಿಯ exchange deal ಕಳೆದ ಎರಡು ವರ್ಷಗಳಿಂದ ನಡೆಯುತ್ತಿತ್ತು. ಆದರೆ ಎರಡೂ ಪಾರ್ಟಿಗಳು ಒಗ್ಗಟ್ಟಿನ ತೀರ್ಮಾನಕ್ಕೆ ಬಂದಿರಲಿಲ್ಲ. ಇದೀಗ ದೇವಸ್ಥಾನದ ಅಭಿವೃದ್ಧಿ ಬೇಕಾದ ಮಸೀದಿಯ ಜಾಗದ ಬದಲಾಗಿ, ಮುಖ್ಯ ರಸ್ತೆಯಲ್ಲಿ ಸಾವಿರ ಚದರ ಅಡಿ ಭೂಮಿಯನ್ನು ನೀಡುವ ಪ್ರಸ್ತಾಪವನ್ನು ದೇವಸ್ಥಾನ ಮಂಡಳಿ ಮುಂದಿಟ್ಟಿತ್ತು. ಇದೀಗ ಈ ಪ್ರಸ್ತಾಪ ಎರಡೂ ಪಾರ್ಟಿಗಳು ಸಮ್ಮಿತಿಯಾಗಿದ್ದು, ಒಪ್ಪಂದಕ್ಕೆ ಸಹಿ ಹಾಕಲಾಗಿದೆ.
Discussion about this post