Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

kerala monkeypox : ಭಾರತಕ್ಕೆ ಕಾಲಿಟ್ಟ ಮಂಕಿಪಾಕ್ಸ್ : ಕೇರಳದಲ್ಲಿ ದೃಢಪಟ್ಟ ಸೋಂಕು : ಕರ್ನಾಟಕಕ್ಕೂ ಕಾದಿದೆ ಆತಂಕ

Radhakrishna Anegundi by Radhakrishna Anegundi
July 14, 2022
in ದೇಶ
indias-first-monkeypox-case-reported-in-kerala-thiruvananthapuram-suspected-monkeypox-case-found-in-kerala-samples-sent-for-testing
Share on FacebookShare on TwitterWhatsAppTelegram

ಮಂಕಿಪಾಕ್ಸ್ ಲಕ್ಷಣಗಳೊಂದಿಗೆ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿರುವುದನ್ನು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ದೃಢಪಡಿಸಿದ್ದಾರೆ. ( kerala monkeypox ) ಗುರುವಾರ ಸಂಜೆ ಈ ವ್ಯಕ್ತಿಯ ವರದಿ ಬಂದಿದ್ದು ಸೋಂಕು ದೃಢ ಪಟ್ಟಿದೆ  

ಕೇರಳ : ಕೊರೋನಾ ಸೋಂಕಿನ ಅಬ್ಬರ ಒಂದಿಷ್ಟು ಕಡಿಮೆಯಾಯ್ತು ಎಂದು ನಿಟ್ಟುಸಿರುಬಿಡುವ ಹೊತ್ತಿಗೆ ಮಂಕಿಪಾಕ್ಸ್ ಅನ್ನುವ ಮಹಾಮಾರಿ ವಕ್ಕರಿಸಿಕೊಂಡಿದೆ. ಈಗಾಗಲೇ ಯುರೋಪ್ ರಾಷ್ಟ್ರಗಳಲ್ಲಿ ಕಾಣಿಸಿಕೊಂಡಿರುವ ಸೋಂಕು ದೊಡ್ಡ ಮಟ್ಟದಲ್ಲಿ ಆತಂಕಕ್ಕೆ ಕಾರಣವಾಗಿದೆ. ಭಾರತಕ್ಕೆ ಮಂಕಿಪಾಕ್ಸ್ ನಿಂದ ಆತಂಕವಿಲ್ಲ ಅನ್ನುವ ಮಾತುಗಳೂ ಕೇಳಿ ಬಂದಿತ್ತು. ಆದರೆ ಈಗ ಕೇರಳದಲ್ಲಿ ಮಂಕಿ ಪಾಕ್ಸ್ ಆತಂಕ ಶುರುವಾಗಿದೆ.

ಮೂರು ದಿನಗಳ ಹಿಂದೆ ಯುಎಇ ನಿಂದ ಕೇರಳಕ್ಕೆ ಆಗಮಿಸಿದ ವ್ಯಕ್ತಿಯಲ್ಲಿ ಮಂಕಿ ಪಾಕ್ಸ್ ಲಕ್ಷಣ ಕಾಣಿಸಿಕೊಂಡಿದೆ.  ಜುಲೈ 12 ರಂದು ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಬಂದಿಳಿದ ವ್ಯಕ್ತಿಯಲ್ಲಿ ಸೋಂಕಿನ ಲಕ್ಷಣ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.  ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇರಳ ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಈ ಬೆಳವಣಿಗೆ ಸಾಕಷ್ಟು ಆತಂಕ ಮೂಡಿಸಿದೆ. ಹಾಗಿದ್ದರೂ ಪರಿಸ್ಥಿತಿಯನ್ನು ಎದುರಿಸಲು ಕೇರಳ ಆರೋಗ್ಯ ಇಲಾಖೆ ಸಜ್ಜಾಗಿದೆ.

ಸೋಂಕಿನ ಲಕ್ಷಣ ಹೊಂದಿದ ವ್ಯಕ್ತಿಯ ವಿವಿಧ ಮಾದರಿಗಳನ್ನು National Institute of Virology in Puneಗೆ ಕಳುಹಿಸಿಕೊಡಲಾಗಿದೆ. ಅಲ್ಲಿಂದ ವರದಿ ಬಂದಿದ್ದು, ಪಾಸಿಟಿವ್ ಎಂದು ಗೊತ್ತಾಗಿದೆ. ಇನ್ನು ಸೋಂಕಿನ ಲಕ್ಷಣಗಳನ್ನು ಹೊಂದಿದ್ದ ವ್ಯಕ್ತಿ ಯುಎಇನಲ್ಲಿ ಮಂಕಿ ಪಾಕ್ಸ್ ಸೋಂಕಿತನ ಸಂಪರ್ಕದಲ್ಲಿದ್ದರು ಎಂದು ಗೊತ್ತಾಗಿದೆ.

ಈ ಮೂಲಕ ಭಾರತದ ಮೊದಲ ಮಂಕಿ ಪಾಕ್ಸ್ ಪ್ರಕರಣ ಕೇರಳ ಕೊಲ್ಲಂ ಜಿಲ್ಲೆಯಿಂದ ವರದಿಯಾದಂತಾಗಿದೆ. ಇನ್ನು ಕೇಂದ್ರ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಕೇಂದ್ರ ಆರೋಗ್ಯ ಇಲಾಖೆ ವಿಶೇಷ ತಂಡವನ್ನು ಕೇರಳಕ್ಕೆ ತುರ್ತಾಗಿ ರವಾನಿಸಿದೆ.

ನಿತ್ಯದ ಬದುಕಲ್ಲಿ ಬಳಸುವ ಪದಗಳು ಆಸಂಸದೀಯವಂತೆ : ಪ್ರತಿಪಕ್ಷಗಳು ಇನ್ಮುಂದೆ ಬೈಯೋ ಹಾಗಿಲ್ಲ

ಜುಲೈ 18 ರಿಂದ ಪ್ರಾರಂಭವಾಗುವ ಮುಂಗಾರು ಅಧಿವೇಶನಕ್ಕೂ ಮುನ್ನವೇ ಪ್ರತಿಪಕ್ಷಗಳ ಬಾಯಿ ಮುಚ್ಚಿಸಲು ಸಿದ್ದತೆಗಳಾಗಿದೆ. ಪಟ್ಟಿ ನೋಡಿದರೆ ಸಂಸತ್ ನಲ್ಲಿ ಮಾತನಾಡುವುದೇ ಕಷ್ಟ.

ನವದೆಹಲಿ : ಕೋವಿಡ್ ಸ್ಪ್ರೆಡರ್, ( covid spreader ) ಭ್ರಷ್ಟ, (corrupt) ಅಸಮರ್ಥ, ಸರ್ವಾಧಿಕಾರಿ, ಕತ್ತೆ, ನಾಟಕ ( drama ) ಹೀಗಾಗಿ ನೂರಾರು ಪದಗಳನ್ನು ಬಳಸುವಂತಿಲ್ಲ ಅವೆಲ್ಲವೂ ಅಸಂಸದೀಯ ಪದಗಳು ಎಂದು ಲೋಕಸಭೆ ಸೆಕ್ರಟೇರಿಯಟ್ ಬಿಡುಗಡೆಗೊಳಿಸಿದ ಪುಸ್ತಕದಲ್ಲಿ ಹೇಳಲಾಗಿದೆ.

ಒಂದು ವೇಳೆ ಈ ಅಸಂಸದೀಯ ಪದಗಳನ್ನು ಬಳಸಿದರೆ ಲೋಕಸಭೆಯ ನಿಯಮ 380ರ ಪ್ರಕಾರ ಸ್ಪೀಕರ್ ಅವರನ್ನು ಕಲಾಪದಿಂದ ಹೊರಗೆ ಹಾಕುತ್ತಾರೆ ಎಂದು ಇದೇ ಪುಸ್ತಕದಲ್ಲಿ ಮಾಹಿತಿ ನೀಡಲಾಗಿದೆ. ಜೊತೆಗೆ ಸ್ಪೀಕರ್ ಅಥವಾ ರಾಜ್ಯಸಭೆಯ ಅಧ್ಯಕ್ಷರು ಅ ಪದಗಳನ್ನು ತೆಗೆದು ಹಾಕುತ್ತಾರೆ ಎಂದು ಹೇಳಲಾಗಿದೆ.

ಇನ್ನು ಈ ಕ್ರಮಕ್ಕೆ ಕಾಂಗ್ರೆಸ್ ಮತ್ತು ಟಿಎಂಸಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ತೃಣಮೂಲ ಕಾಂಗ್ರೆಸ್ ಸಂಸದೆ ಮೆಹುವಾ ಮೊಯಿತ್ರಾ ಒಂದು ಹೆಜ್ಜೆ ಮುಂದೆ ಹೋಗಿ ನಾವು ಈ ಪದಗಳನ್ನು ಬಳಸುತ್ತೇವೆ, ಅಮಾನತು ಮಾಡಿ ಅಂದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಬಿಜೆಪಿ ಭಾರತವನ್ನು ಹೇಗೆ ನಾಶ ಮಾಡುತ್ತದೆ ಅನ್ನುವುದು ಇದರಿಂದ ಗೊತ್ತಾಗುತ್ತದೆ. ಪ್ರತಿಪಕ್ಷಗಳು ಬಳಸುತ್ತಿದ್ದ ಶಬ್ಧವನ್ನೇ ಹೆಕ್ಕಿ ನಿಷೇಧಿಸಲಾಗಿದೆ, ಇದು ನಾಚಿಕೆಗೇಡು ಅಂದಿದ್ದಾರೆ.

ಹಾಗಾದ್ರೆ ಯಾವುದೇ ಅಸಂಸದೀಯ ಪದಗಳು ಎಂದು ನೋಡುವುದಾದರೆ ರಕ್ತಪಾತ, ರಕ್ತಸಿಕ್ತ, ದ್ರೋಹ, ವಂಚನೆ, ಚಮ್ಚಾ, ಚಮ್ಚಾಗಿರಿ, ಚೇಲಾನ್, ಬಾಲಿಶ, ಹೇಡಿ, ಕ್ರಿಮಿನಲ್, ಮೊಸಳೆ ಕಣ್ಣೀರು,ಅವಮಾನ, ಕತ್ತೆ, ನಾಟಕ, ಕಣ್ಣೊರೆಸುವ ತಂತ್ರ, ಗೂಂಡಾಗಿರಿ, ಅಸಮರ್ಥ, ಸುಳ್ಳು, ಗದ್ದಾರ್, ಗಿರ್ಗಿಟ್, ಗಢಿಯಾಲಿ ಅಂಸು, ಅಪಮಾನ್, ಅಸತ್ಯ, ಅಹಂಕಾರ, ಕಾಲಾ ದಿನ್, ಕಾಲಾ ಬಜಾರ್, ದಂಗ, ದಲಾಲ್, ದಾದಾಗಿರಿ, ಬೆಚಾರ, ಬಾಯ್ಕಟ್, ಲಾಲಿಪಪ್, ಸಂವೇದನಾ ಹೀನ್, ಸರ್ವಾದಧಿಕಾರಿ, ಶಕುನಿ, ತಾನಾಶಾಹಿ, ಜೈಚಂದ್, ವಿನಾಶ್ ಪುರುಷ್, ಖೂನ್ ಸೇ ಖೇತಿ ಹೀಗೆ ಸಾವಿರಾರು ಪದಗಳನ್ನು ಹೇಳಲಾಗಿದೆ.

Tags: FEATURED
ShareTweetSendShare

Discussion about this post

Related News

Police station

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

karnataka election bjp secret team from delhi

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

NDTV ಖರೀದಿಗಾಗಿ ಅದಾನಿ ಮಾಸ್ಟರ್ ಪ್ಲಾನ್ : ಮಾಧ್ಯಮ ಲೋಕದಲ್ಲಿ ಸಂಚಲನ ಮೂಡಿಸಿದ ನಡೆ

Youtube :ದೇಶ ವಿರೋಧಿ 8 ಯೂಟ್ಯೂಬ್ 1 ಫೇಸ್ ಬುಕ್ ಅಕೌಂಟ್ ಬಂದ್ : Ministry of I&Bಯಿಂದ ಆದೇಶ

Shrikant Tyagi : ಕಠಿಣ ಕ್ರಮ ಅಂದ್ರೆ ಇದಪ್ಪ : BJP ನಾಯಕನ ಮನೆಗೆ ಬುಲ್ಡೋಜರ್ ನುಗ್ಗಿಸಿದ ಯೋಗಿ

Agneepath naxal : ಅಗ್ನಿಪಥ ಹಿಂಸಾಚಾರದಲ್ಲಿ ನಕ್ಸಲ್ ಕೈವಾಡ

Amazon pressure cooker : ಕೆಟ್ಟು ಹೋದ ಕುಕ್ಕರ್ ಮಾರಿದ ಅಮೆಜಾನ್ 1 ಲಕ್ಷ ರೂಪಾಯಿ ದಂಡ

Karnataka BJP : ನಳಿನ್ ಕುಮಾರ್ ಕಟೀಲ್ ಗೆ ಕ್ಲಾಸ್ ತೆಗೆದುಕೊಂಡ ಅಮಿತ್ ಶಾ

Eliminate fastag & toll plaza : ಕೆಲ ವರ್ಷಗಳಲ್ಲಿ ಟೋಲ್ ಗೇಟ್ ಗಳೇ ಮಾಯ

Amit shah : ಶೋಭಾ ಕರಂದ್ಲಾಜೆ ಭೇಟಿ ಬೆನ್ನಲ್ಲೇ ಅಮಿತ್ ಶಾ ಕಚೇರಿಗೆ ದೌಡಾಯಿಸಿದ ನಳಿನ್ ಕುಮಾರ್

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್