ಪರಿಷತ್ ಸದಸ್ಯ ಪುಟ್ಟಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಅಧ್ಯಕ್ಷ ಎಚ್.ಕೆ ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆ, ವರಿಷ್ಠರ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೆಲ ದಿನಗಳ ಹಿಂದೆ ರಾಮನಗರದಲ್ಲಿ ಮಾತನಾಡಿದ್ದ ಪುಟ್ಟಣ್ಣ, ನಾನು ಪಕ್ಷ ಬಿಡಲು ನಿರ್ಧರಿಸಿದ್ದೇನೆ. ಮುಂದಿನ ನಡೆ ಯಾವ ಕಡೆ ಎಂದು ಗೊತ್ತಿಲ್ಲ ಅಂದಿದ್ದರು.
ಈಗಾಗಲೇ ಜೆಡಿಎಸ್ ಪಕ್ಷದ ಹಲವು ವಿಧಾನ ಪರಿಷತ್ ಪಕ್ಷ ತ್ಯಜಿಸಲು ನಿರ್ಧರಿಸಿದ್ದಾರೆ. ಇದರ ಬೆನ್ನಲ್ಲೇ ಅಮಾನತು ಆದೇಶ ಹೊರ ಬಿದ್ದಿದೆ. ಈ ನಡುವೆ ಜೆಡಿಎಸ್ ಪಕ್ಷದ ನಾಯಕರು ಬಿಜೆಪಿ ಕುರಿತಂತೆ ಸಾಫ್ಟ್ ಕಾರ್ನರ್ ತೋರಿಸುತ್ತಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ.
Discussion about this post