ರಾಯಚೂರು : ಜೆಡಿಎಸ್ ಮುಖಂಡರು ತಮ್ಮ ಚುನಾವಣೆ ಸಂದರ್ಭಗಳಲ್ಲಿ ಸಲ್ಲಿಸಿರುವ ಆಸ್ತಿ ವಿವರಗಳನ್ನು ಮತ್ತೊಂದು ಸಲ ಪುಟ ತಿರುವಿ ಹಾಕುವ ಅಗತ್ಯ ಖಂಡಿತವಾಗಿಯೂ ಇದೆ.
ಯಾಕಂದ್ರೆ ರಾಯಚೂರಿನಲ್ಲಿ ಮಾಜಿ ಪ್ರಧಾನಿ ಕೊಟ್ಟಿರುವ ಹೇಳಿಕೆ ಅಚ್ಚರಿಗೆ ಕಾರಣವಾಗಿದೆ.
ರಾಜ್ಯದಲ್ಲಿ ಮುಂಬರುವ ಉಪಚುನಾವಣೆಯಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದು ದೇವೇಗೌಡರು ಘೋಷಿಸಿದ್ದು, ಇದಕ್ಕೆ ಹಣಕಾಸಿನ ಸಮಸ್ಯೆ ಅಂದಿದ್ದಾರೆ.
ಮಸ್ಕಿ ಮತ್ತು ಬಸವ ಕಲ್ಯಾಣ ವಿಧಾನಸಭಾ ಉಪಚುನಾವಣೆ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ.
ಹಣದ ಕೊರತೆ ಹಿನ್ನಲೆಯಲ್ಲಿ ಮೂರೂ ಉಪ ಚುನಾವಣೆಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಳಿಸುವುದಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ.
ಆದರೆ ರಾಜಕೀಯ ವಿಶ್ಲೇಷಕರ ಪ್ರಕಾರ, ಬಿಜೆಪಿ ಜೊತೆಗಿನ ಸಂಬಂಧವನ್ನು ಉತ್ತಮವಾಗಿಟ್ಟುಕೊಳ್ಳುವ ಸಲುವಾಗಿ ದಳಪತಿಗಳು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
Discussion about this post