ಕಲಬುರಗಿ : ಬಾಂಗ್ಲಾ ಗಡಿಯಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿಯ ಆಳಂದ ತಾಲೂಕಿನ ಚಿಂಚನಸೂರ ಯೋಧ ರಾಜಕುಮಾರ ಎಂ. ಮಾವಿನ ಅವರು ಹುತ್ಮಾತರಾಗಿದ್ದಾರೆ. ಮಂಗಳವಾರ ಬೆಳಗ್ಗೆ ಬಾಂಗ್ಲಾದೇಶದ ಉಗ್ರಗಾಮಿ ಸಂಘಟನೆ ಜೊತೆಗೆ ನಡೆದ ಗುಂಡಿನಚಕಮಕಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ತ್ರಿಪುರಾ ರಾಜ್ಯದ ಭಾರತ ಮತ್ತು ಬಾಂಗ್ಲಾ ಗಡಿಯಲ್ಲಿರುವ ಧಲಾಯಿ ಪ್ರದೇಶದಲ್ಲಿ ಗಸ್ತು ನಡೆಸುತ್ತಿದ್ದ ಸಮಯದಲ್ಲಿ ಉಗ್ರರು ಗುಂಡಿನ ದಾಳಿ ಪ್ರಾರಂಭಿಸಿದ್ದರು. ಪ್ರತಿಕಾರವಾಗಿ ಭಾರತೀಯ ಯೋಧರು ಕೂಡಾ ಗುಂಡಿನ ಮೂಲಕವೇ ಉತ್ತರಿಸಿದ್ದಾರೆ.
ವೀರಯೋಧನ ಸಾವಿನ ಸುದ್ದಿ ಕೇಳಿ ಗ್ರಾಮ ಶೋಕ ಸಾಗರದಲ್ಲಿ ಮುಳುಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯೋಧನ ಪಾರ್ಥಿವ ಶರೀರ ಗುರುವಾರ ಗ್ರಾಮಕ್ಕೆ ಆಗಮಿಸುವ ಸಾಧ್ಯತೆಯಿದೆ.
Discussion about this post