ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಅಬ್ಬರ ಕಡಿಮೆಯಾಗುತ್ತಿರುವ ಹಿನ್ನಲೆಯಲ್ಲಿ ಈಗಾಗಲೇ ಅನ್ ಲಾಕ್ ಪ್ರಕ್ರಿಯೆಗಳು ಪ್ರಾರಂಭಗೊಂಡಿದೆ. ರಾಜ್ಯದಲ್ಲಿ ಪ್ರಸ್ತುತ ಅನ್ ಲಾಕ್ 4.0 ಮಾರ್ಗಸೂಚಿ ಜಾರಿಯಲ್ಲಿದೆ.
ಇದೀಗ ಇದೇ ಮಾರ್ಗಸೂಚಿಗೆ ತಿದ್ದುಪಡಿಯನ್ನು ತರಲಾಗಿದ್ದು ಅನೇಕ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ. ಇದರ ಪ್ರಕಾರ ದೇವಸ್ಥಾನ, ಮಸೀದಿ, ಚರ್ಚ್ ಸೇರಿದಂತೆ ಇತರ ಧಾರ್ಮಿಕ ಕೇಂದ್ರಗಳಲ್ಲಿ ಭಕ್ತರಿಗೆ ಸೇವೆ ಸಲ್ಲಿಸಲು ಅನುಮತಿ ನೀಡಲಾಗಿದೆ. ಇದರಿಂದಾಗಿ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಭಕ್ತರು ಹರಕೆ ಸಲ್ಲಿಸಲು ಅನುವು ಮಾಡಿಕೊಟ್ಟಂತಾಗಿದೆ,
ಇದರೊಂದಿಗೆ ಅಮ್ಯೂಸ್ಮೆಂಟ್ ಪಾರ್ಕ್ ಗಳನ್ನು ತೆರೆಯಲು ಕೂಡಾ ಸರ್ಕಾರ ಅನುಮತಿ ನೀಡಿದೆ. ಈ ಸಂಬಂಧ ರಾಜ್ಯ ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿ ಎನ್ ಮಂಜುನಾಥ ಪ್ರಸಾದ್ ಅಧಿಸೂಚನೆ ಹೊರಡಿಸಿದ್ದು, ದಿನಾಂಕ 03-07-2021ರ ಮಾರ್ಗಸೂಚಿಯನ್ನು ಮಾರ್ಪಡಿಸಲಾಗಿದ್ದು, ಮುಂದುವರೆದು ಅನ್ ಲಾಕ್ 4.0 ಮಾರ್ಗಸೂಚಿಯಂತೆ ದೇವಾಲಯ, ಮಸೀದಿ, ಚರ್ಚ್, ಗುರುದ್ವಾರ ಮತ್ತು ಇತರೆ ಧಾರ್ಮಿಕ ಕೇಂದ್ರ ತೆರೆಯೋದಕ್ಕೆ ಅನುಮತಿಸಲಾಗಿದೆ.
ಆದರೆ ಜಾತ್ರೆ, ದೇವಸ್ಥಾನಗಳ ಆಚರಣೆ ಸೇರಿದಂತೆ ಇತರೆ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ.
Discussion about this post