ಬೆಂಗಳೂರು : ಸೆಕೆಂಡ್ ಪಿಯು ರಿಪೀಟರ್ಸ್ ವಿದ್ಯಾರ್ಥಿಗಳೆಲ್ಲಾ ಪರೀಕ್ಷೆ ಇಲ್ಲದೆ ಪಾಸ್ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.ಈ ಬಗ್ಗೆ ರಾಜ್ಯ ಸರ್ಕಾರ ಹೈಕೋರ್ಟ್ ಗೆ ತಿಳಿಸಿದೆ.
ಈ ಹಿಂದೆ ರಾಜ್ಯದಲ್ಲಿ ಕೊರೋನಾ ಸೋಂಕಿನ ಕಾರಣದಿಂದ ಸೆಕೆಂಡ್ ಪಿಯು ಪರೀಕ್ಷೆಯನ್ನು ರದ್ದು ಪಡಿಸಲಾಗಿತ್ತು. ಜೊತೆಗೆ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ನಿರ್ಧರಿಸಿತ್ತು. ಆದರೆ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು.
ಇಲಾಖೆಯ ನಿರ್ಧಾರವನ್ನು ಖಂಡಿಸಿದ್ದ ರಿಪೀಟರ್ಸ್ ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ವೇಳೆ ವಿಚಾರಣೆ ನಡೆಸಿದ ಹೈಕೋರ್ಟ್ ಶಿಕ್ಷಣ ಇಲಾಖೆಯ ನಡೆಯ ವಿರುದ್ಧ ಗರಂ ಆಗಿತ್ತು. ಜೊತೆಗೆ ಇದಕ್ಕೊಂದು ಪರಿಹಾರ ಸೂಚಿಸಿ ಅಂದಿತ್ತು. ಇದೀಗ ಹೈಕೋರ್ಟ್ ಗೆ ಲಿಖಿತ ಹೇಳಿಕೆ ಸಲ್ಲಿಸಿರುವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ರಿಪೀಟರ್ಸ್ ವಿದ್ಯಾರ್ಥಿಗಳನ್ನು ಪಾಸ್ ಮಾಡೋದಾಗಿ ತಿಳಿಸಿದೆ.
ಆದರೆ ಶೇ.35ರಷ್ಟು ಅಂಕಗಳನ್ನು ನೀಡುವ ಮೂಲಕ, ದ್ವಿತೀಯ ಪಿಯು ರಿಪೀಟರ್ಸ್ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತದೆ ಎಂದು ಕಂಡೀಷನ್ ಆಗಿದೆ. ಕೆಲವು ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ನಿರ್ಧಾರ ಅನುಕೂಲ ಮಾಡಿಕೊಡಲಿದೆ. ಆದರೆ ಒಂದು ವಿಷಯದಲ್ಲಿ ಒಂದೆರೆಡು ಅಂಕದಲ್ಲಿ ಫೇಲ್ ಆದವರಿಗೆ ಇದರಿಂದ ಅನ್ಯಾಯವಾಗಲಿದೆ.
Discussion about this post