Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

karnataka high court ACB : ಎಸಿಬಿ ಕಾರ್ಯವೈಖರಿಗೆ ಮತ್ತೆ ಹೈಕೋರ್ಟ್ ಗರಂ : ಅಪೂರ್ಣ ಬಿ ರಿಪೋರ್ಟ್ ಕಂಡು ನ್ಯಾ. ಹೆಚ್.ಪಿ. ಸಂದೇಶ್ ಕೆಂಡಾಮಂಡಲ

Radhakrishna Anegundi by Radhakrishna Anegundi
08-07-22, 6 : 28 am
in ರಾಜ್ಯ
karnataka-high-court-acb karnataka-hc-judge-Justice Sandesh remarks-on-state-Anti Corruption Bureau
Share on FacebookShare on TwitterWhatsAppTelegram

ಎಸಿಬಿಯ ( anti corruption bureau bangalore ) ಕಾರ್ಯವೈಖರಿ ಬಗ್ಗೆ ಜನರಿಗೆ ಸಾಕಷ್ಟು ಅನುಮಾನಗಳಿತ್ತು. ಇದೀಗ ಹೈಕೋರ್ಟ್ ( karnataka high court ACB) ಈ ಬಗ್ಗೆ ಗಮನ ಹರಿಸಿದ್ದು,  ಹಲವು ಪ್ರಶ್ನೆಗಳನ್ನು ಎತ್ತಿದೆ

ಬೆಂಗಳೂರು : ಎಸಿಬಿ ಕಾರ್ಯವೈಖರಿಗೆ ಸಂಬಂಧಿಸಿದಂತೆ (karnataka high court ACB) ಹೈಕೋರ್ಟ್ ಮತ್ತೆ ಚಾಟಿ ಬೀಸಿದೆ. ಕಳೆದ ಕೆಲವು ದಿನಗಳಿಂದ ಈ ಸಂಬಂಧ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ( HP Sandesh ) ಇವತ್ತು ಕೂಡಾ ಕೆಂಡಮಂಡಲರಾಗಿದ್ದಾರೆ.

ಎಸಿಬಿ ಈ ತನಕ ಹಾಕಿರುವ ಬಿ ರಿಪೋರ್ಟ್ ಗಳ ಬಗ್ಗೆ ವಕೀಲರು ನೀಡಿದ ವರದಿಯನ್ನು  ಪರಿಶೀಲಿಸಿದ ನ್ಯಾಯಾಧೀಶರು ಸಹಿ ಇಲ್ಲದ ಅಪೂರ್ಣ ಮಾಹಿತಿಯನ್ನು ನೋಡಿ ಎಸಿಬಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮೊದಲು ಎಸಿಬಿ ಪರ ವಕೀಲರು 99 ಬಿ ರಿಪೋರ್ಟ್ ಗಳ ಮಾಹಿತಿ ಕೊಟ್ಟಿದ್ದಾರೆ. ಬಳಿಕ ಆ ಸಂಖ್ಯೆ 105ಕ್ಕೆ ಏರಿತು.

ಆಗ ಅಸಮಾಧಾನಗೊಂಡ ನ್ಯಾಯಾಧೀಶರು, ನಾನು ಪದೇ ಪದೇ ಎಸಿಬಿಗೆ ಹೇಳಬೇಕಾ, ಸರಿಯಾಗಿ ಮಾಹಿತಿಯನ್ನು ಯಾಕೆ ಕೊಡುತ್ತಿಲ್ಲ. ನನಗೆ ಆಟ ಆಡುತ್ತಿರುವ ಬಗ್ಗೆ ಎಲ್ಲವೂ ಗೊತ್ತಿದೆ. 2022ರ ಬಿ ರಿಪೋರ್ಟ್ ಗಳು ಎಲ್ಲಿದೆ. ADGP ರಕ್ಷಿಸಲು ಬಿ ರಿಪೋರ್ಟ್ ಮಾಹಿತಿ ನೀಡಿಲ್ಲ. ಮಾರ್ಚ್ ಜೂನ್ ತಿಂಗಳಲ್ಲಿ ಬಿ ರಿಪೋಟ್ ಸಲ್ಲಿಸಲಾಗಿದೆ. ನೀವು ಹೀಗೆ ಆಟವಾಡುತ್ತಿರುವುದು ಗೊತ್ತಿದ್ದು ಈ ಮಾಹಿತಿಗಳನ್ನು ಕೇಳಲಾಗಿದೆ.ಲಂಚದ ಹಣದೊಂದಿಗೆ ಸಿಕ್ಕಿ ಬಿದ್ದ ಸಂದರ್ಭದಲ್ಲೂ ಬಿ ರಿಪೋರ್ಟ್ ಸಲ್ಲಿಸಲಾಗಿದೆ. ನಿಜವಾದ ಮಾಹಿತಿಯನ್ನೇ ಎಸಿಬಿ ಹೈಕೋರ್ಟ್ ಗೆ ನೀಡುತ್ತಿಲ್ಲ ಎಂದು ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ( HP Sandesh ) ಗರಂ ಆಗಿದ್ದಾರೆ.

ಈ ನಡುವೆ ಎಫ್ ಐ ಆರ್ ರದ್ದು ಕೋರಿ ಐಎಎಸ್ ಅಧಿಕಾರಿ ಮಂಜುನಾಥ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದ್ದು, ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಿದೆ. ಪೊಲೀಸ್ ನೇಮಕಾತಿ ಹಗರಣದ ಪ್ರಕರಣದ ವಿಚಾರಣೆಯನ್ನು ಜುಲೈ 14ಕ್ಕೆ ಮುಂದೂಡಲಾಗಿದೆ.

ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ಬೈಕ್ ತರುವಂತಿಲ್ಲ :  ರವಿಕಾಂತೇಗೌಡ ಸೂಚನೆ

ಬೆಂಗಳೂರು ಟ್ರಾಫಿಕ್ ಪೊಲೀಸರ ( bengaluru traffic police) ಲಂಚಾವತಾರ ಪ್ರಕರಣ ಸುದ್ದಿ ವಾಹಿನಿಗಳ ಸ್ಟಿಂಗ್ ಆಪರೇಷನ್ ನಲ್ಲಿ ಬೆತ್ತಲಾಗಿದೆ. ಈ ನಡುವೆ ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ( ( Ravikanthe gowda ips ) ಪಿಯುಸಿ ಮಕ್ಕಳಿಗೆ ಕಟ್ಟು ನಿಟ್ಟಿನ ಸೂಚನೆ ಕೊಟ್ಟಿದ್ದಾರೆ.

ಬೆಂಗಳೂರು :  ರಾಜಧಾನಿಯಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತ ಪ್ರಕರಣಗಳಿಗೆ ಬ್ರೇಕ್ ಹಾಕಲು ಟ್ರಾಫಿಕ್ ಪೊಲೀಸರು ಇನ್ನಿಲ್ಲದ ಶ್ರಮ ಹಾಕುತ್ತಿದ್ದಾರೆ. ಸುಗಮ ಸಂಚಾರಕ್ಕಾಗಿ ಶಿಸ್ತಿನಿಂದ ದುಡಿಯುವ ಅಧಿಕಾರಿಗಳು ಬೆಂಗಳೂರು ಟ್ರಾಫಿಕ್ ಪೊಲೀಸ್ ಟೀಂ ನಲ್ಲಿದ್ದಾರೆ. ಆದರೆ ಇವರ ಕೆಲಸವನ್ನು ಕೆಲ ಭ್ರಷ್ಟ ಟ್ರಾಫಿಕ್ ಇನ್ಸ್ ಪೆಕ್ಟರ್ ಗಳು, ಲಂಚಬಾಕ ಟ್ರಾಫಿಕ್ ವಿಭಾಗದ ಎಸಿಪಿಗಳು ಹಾಳು ಮಾಡುತ್ತಿದ್ದಾರೆ.

ಈ ನಡುವೆ ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ಬೈಕ್ ತರುವಂತಿಲ್ಲ ಎಂದು ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಸೂಚಿಸಿದ್ದಾರೆ. ಪಿಯು ವಿದ್ಯಾರ್ಥಿಗಳಿಗೆ ಡ್ರೈವಿಂಗ್ ಲೈಸೆನ್ಸ್ ( Driving licence ) ಪಡೆಯುವ ಪ್ರಾಯವೇ ಆಗಿರುವುದಿಲ್ಲ. ಹೀಗಾಗಿ ಪಿಯುಸಿ ವಿದ್ಯಾರ್ಥಿಗಳು ಬೈಕ್ ಅಥವಾ ಸ್ಕೂಟರ್, ಕಾರು ಚಲಾಯಿಸಿಕೊಂಡು ಬರೋ ಹಾಗಿಲ್ಲ ಅಂದಿದ್ದಾರೆ. ( ಡುಮ್ಕಿ ಸಾಧಕರಿದ್ರೆ ಅವರಿಗೆ ಲೈಸೆನ್ಸ್ ಆಗಿದ್ರೆ ಅವರು ವಾಹನ ಚಾಲನೆ ಮಾಡಲು ಅರ್ಹರಾಗಿರುತ್ತಾರೆ)

ಬೆಂಗಳೂರಿನಲ್ಲಿ ಮಾತನಾಡಿದ ರವಿಕಾಂತೇಗೌಡ, ವಿದ್ಯಾರ್ಥಿಗಳ ಸೇಫ್ ದೃಷ್ಟಿಯಿಂದ ಪೋಷಕರು ಕೂಡಾ ಈ ಬಗ್ಗೆ ಗಮನಹರಿಸಬೇಕು ಅಂದಿದ್ದಾರೆ.

ಇದೇ ವೇಳೆ ಡ್ರಿಂಕ್ ಅಂಡ್ ಡ್ರೈವ್ ಬಗ್ಗೆ ಮಾಹಿತಿ ನೀಡಿರುವ ಅವರು ಮೇ ತಿಂಗಳಿಗೆ ಹೋಲಿಸಿದರೆ ಜೂನ್ ತಿಂಗಳಲ್ಲಿ ಕುಡಿದು ವಾಹನ ಚಲಾಯಿಸಿ ವಾಹನ ಅಪಘಾತ ಮಾಡಿದ ಪ್ರಮಾಣ ಕಡಿಮೆಯಾಗಿದೆ. ಆದರೆ ಜೂನ್ ತಿಂಗಳಲ್ಲಿ ನಡೆದ ಅಫಘಾತಗಳಲ್ಲಿ ಪ್ರಾಣ ಕಳೆದುಕೊಂಡವರಲ್ಲಿ ಅತೀ ಹೆಚ್ಚು ಡ್ರಿಂಕ್ ಅಂಡ್ ಡ್ರೈವ್ ಮಾಡಿದವರೇ. ಹೀಗಾಗಿಯೇ ಕುಡಿದು ವಾಹನ ಚಲಾಯಿಸುವವರ ವಿರುದ್ಧ ಡ್ರೈವ್ ಮುಂದುವರಿಯಲಿದೆ ಅಂದಿದ್ದಾರೆ.

ಇನ್ನು ಡ್ರಿಂಕ್ ಅಂಡ್ ಡ್ರೈವ್ ಸಂದರ್ಭದಲ್ಲಿ ಪೊಲೀಸರಿಗೆ ದಂಡ ಸಂಗ್ರಹಿಸುವ ಅಧಿಕಾರವಿಲ್ಲ. ಅದನ್ನು ನ್ಯಾಯಾಲಯದಲ್ಲೇ ಕಟ್ಟಬೇಕು. ಜೊತೆಗೆ ಡ್ರಿಂಕ್ ಅಂಡ್ ಡ್ರೈವ್ ಸಂದರ್ಭದಲ್ಲಿ ಸಿಕ್ಕಿ ಹಾಕಿಕೊಂಡ್ರೆ ಜೊತೆಗಿದ್ದವರು ಕುಡಿಯದೇ ಇದ್ದು, ಅವರು ವಾಹನ ಚಲಾವಣೆಗೆ ಅರ್ಹತೆ ಹೊಂದಿದ್ದರೆ, ವಾಹನವನ್ನು ಪೊಲೀಸರು ವಶಪಡಿಸಿಕೊಳ್ಳುವುದಿಲ್ಲ. ವಾಹನ ಸವಾರ ಅಥವಾ ಚಾಲಕ ಒಬ್ಬನೇ ಇದ್ದ ಸಂದರ್ಭದಲ್ಲಿ ಪೊಲೀಸರು ವಾಹನ ವಶಪಡಿಸಿಕೊಳ್ಳುತ್ತಾರೆ ಎಂದು ಇದೇ ಸಂದರ್ಭದಲ್ಲಿ ರವಿಕಾಂತೇಗೌಡ ಸ್ಪಷ್ಟಪಡಿಸಿದ್ದಾರೆ.

Tags: MAIN
ShareTweetSendShare

Discussion about this post

Related News

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಖಾಸಗಿ ಬಸ್ ಮಾಲೀಕರಿಗೆ ಶರಣಾದ ಸಿದ್ದರಾಮಯ್ಯ ಸರ್ಕಾರ : Deepavali ಬರೆ

ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ( D. B. Chandregowda ) ಇನ್ನಿಲ್ಲ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

yakshagana ರಂಗದ ಸಾಧಕಿಗೆ Karnataka Rajyotsava ಪ್ರಶಸ್ತಿ

ಅರ್ಜಿ ಸಲ್ಲಿಸದವರಿಗೂ ಈ ಬಾರಿ ಕನ್ನಡ ರಾಜ್ಯೋತ್ಸವ (Karnataka Rajyotsava) ಪ್ರಶಸ್ತಿ

Bigg Boss ಮನೆಗೆ ವರ್ತೂರು ಸಂತೋಷ್ : ಕಿಚ್ಚ ಕೊಟ್ಟೆ ಬಿಟ್ರು ಸುಳಿವು – varthur santhosh

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್