ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಅಬ್ಬರ ತಗ್ಗಿರುವ ಹಿನ್ನಲೆಯಲ್ಲಿ ಪದವಿ ಪೂರ್ವ ಹಾಗೂ ಮೇಲ್ಮಟ್ಟದ ಕಾಲೇಜುಗಳನ್ನು ತೆರೆಯಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿರುವ ಉನ್ನತ ಶಿಕ್ಷಣ ಸಚಿವ ಡಾ. ಸಿಎನ್ ಅಶ್ವಥ್ ನಾರಾಯಣ, ಜುಲೈ 26 ರಿಂದ ಭೌತಿಕ ತರಗತಿಗಳು ಪ್ರಾರಂಭವಾಗಲಿದೆ ಅಂದಿದ್ದಾರೆ.
ಈಗಾಗಲೇ ಶೇ 75ರಷ್ಟು ಮಕ್ಕಳಿಗೆ ಕೊರೋನಾ ಲಸಿಕೆ ನೀಡಲಾಗಿದೆ. ಕೇವಲ ವಿದ್ಯಾರ್ಥಿಗಳು ಮಾತ್ರವಲ್ಲದೆ ಉಪನ್ಯಾಸಕರು, ಶಾಲಾ ಸಿಬ್ಬಂದಿಗೂ ಲಸಿಕೆ ನೀಡಲಾಗಿದೆ. ಹೀಗಾಗಿ ಒಂದು ಹಂತದ ಹರ್ಡ್ ಇಮ್ಯೂನಿಟಿ ಸೃಷ್ಟಿಯಾದಂತಾಗುತ್ತದೆ.
ಲಸಿಕೆ ಪಡೆಯಲು ಬಾಕಿ ಉಳಿದಿರುವ ವಿದ್ಯಾರ್ಥಿಗಳಿಗೂ ಲಸಿಕೆ ನೀಡುವ ಕೆಲಸ ನಡೆಯುತ್ತಿದ್ದು, ಜುಲೈ 26 ರಿಂದ ಕಾಲೇಜುಗಳನ್ನು ತೆರಯಲು ನಿರ್ಧರಿಸಲಾಗಿದೆ. ಆದರೆ ಭೌತಿಕವಾಗಿ ತರಗತಿಗೆ ಹಾಜರಾಗಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮೊದಲ ಡೋಸ್ ಲಸಿಕೆಯನ್ನು ಪಡೆದಿರಬೇಕು. ಹಾಗಂತ ಕಾಲೇಜು ಪ್ರಾರಂಭವಾದರೂ ಹಾಜರಾತಿ ಕಡ್ಡಾಯವಲ್ಲ. ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಆತಂಕವಿದ್ದಲಿ ಆನ್ ಲೈನ್ ಮೂಲಕವೇ ತರಗತಿ ಮುಂದುವರಿಸಬಹುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
Discussion about this post