ಮಂಗಳೂರು : ಯೋಗ ಮಾಡುವ ವೇಳೆ ಆಯತಪ್ಪಿ ಬಿದ್ದು, ತಲೆಗೆ ಪೆಟ್ಟು ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಆಸ್ಕರ್ ಫರ್ನಾಂಡಿಸ್ ನಿಧನರಾಗಿದ್ದಾರೆ. 80 ವರ್ಷದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಯೋಗ ಮಾಡುವ ವೇಳೆ ಆಯತಪ್ಪಿ ಬಿದ್ದು, ತಲೆಗೆ ಪೆಟ್ಟಾದ ಕಾರಣ ಆಸ್ಕರ್ ಅವರನ್ನು ಮಂಗಳೂರಿನ ಯೆನಪೋಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಒಂದು ತಿಂಗಳಿಗೂ ಅಧಿಕ ಕಾಲದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.ಆಸ್ಕರ್ ಫರ್ನಾಂಡಿಸ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಮಾರ್ಚ್ 27, 1941ರಲ್ಲಿ ಉಡುಪಿಯಲ್ಲಿ ಜನಿಸಿದ್ದ ಆಸ್ಕರ್ ಜನವರಿ 18, 1980 ರಲ್ಲಿ ಉಡುಪಿ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಮೊದಲ ಬಾರಿಗೆ ಆಯ್ಕೆಯಾಗಿದ್ದರು. ಬಳಿಕ 17 ಜೂನ್ 2013ರಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾಗಿದ್ದರು. ಒಟ್ಟು ಐದು ಬಾರಿ ಉಡುಪಿಯಿಂದ ಸಂಸದರಾಗಿ ಆಯ್ಕೆಯಾದ ಹೆಗ್ಗಳಿಗೆ ಇವರದ್ದು 2004 ರಲ್ಲಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.
ಕಾಂಗ್ರೆಸ್ ಪಕ್ಷದ ಹಿರಿಯ ಸದಸ್ಯರಾಗಿರುವ ಇವರು ಕಾಂಗ್ರೆಸ್ ಕುಟುಂಬಕ್ಕೆ ಅನೇಕ ತಲೆಮಾರುಗಳಿಂದ ಆಪ್ತರಾಗಿದ್ದಾರೆ. ಅಧಿಕಾರಿಕ್ಕಾಗಿ ಎಂದಿಗೂ ಆಸೆ ಪಡದ ಆಸ್ಕರ್, ಪಕ್ಷಕ್ಕೆ ನಿಷ್ಟೆಯಿಂದ ಸೇವೆ ಸಲ್ಲಿಸಿದ್ದರು.
Discussion about this post