ಜೂನ್ 30 ಹಾಗೂ ಜುಲೈ 1 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ ಹೀಗಾಗಿ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಆಲರ್ಟ್ ನೀಡಲಾಗಿದೆ
ಬೆಂಗಳೂರು : ರಾಜ್ಯದಲ್ಲಿ ಮಳೆಯ ಅಬ್ಬರ ತೀವ್ರಗೊಂಡಿದ್ದು, ಜುಲೈ 1 ರ ತನಕ ವರ್ಷಧಾರೆ ಅಬ್ಬರಿಸಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕೃಷಿಕರಲ್ಲಿ ಆತಂಕ ಎದುರಾಗಿತ್ತು.
ಈ ನಡುವೆ ಹವಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರೀ ಮಳೆಯ ಎಚ್ಚರಿಕೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತಗೊಂಡಿರುವ ಕಾರಣ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡದಲ್ಲಿ ಗುಡುಗು ಮಿಂಚು ಸಹಿತ ಮಳೆ ನಿರೀಕ್ಷಿಸಲಾಗಿದೆ. ಹೀಗಾಗಿ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಆಲರ್ಟ್ ನೀಡಲಾಗಿದೆ.
![rain](https://torrentspree.com/wp-content/uploads/2022/06/rain.jpeg)
ಶಿವಮೊಗ್ಗ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಹಾವೇರಿ, ಧಾರವಾಡ ಮತ್ತು ಹುಬ್ಬಳ್ಳಿ ಜಿಲ್ಲೆಗಳಿಗೆ ಯಲ್ಲೋ ಆಲರ್ಟ್ ನೀಡಲಾಗಿದೆ.
Discussion about this post