ಮಕ್ಕಳನ್ನು ಶಾಲಾ ಬಸ್ ನಿಂದ ಇಳಿಸುವಾಗ ಮೈ ಎಲ್ಲಾ ಕಣ್ಣಾಗಿರಬೇಕು
ಕಾಸರಗೋಡು : ಶಾಲಾ ವಾಹನದಡಿಗೆ ಬಿದ್ದು ನರ್ಸರಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಗುರುವಾರ ಮಧ್ಯಾಹ್ನ ಕಂಬಾರು ಸಿರಿಬಾಗಿಲು ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಸಿರಿ ಬಾಗಿಲಿನ ಮುಹಮ್ಮದ್ ಸುಬೈರ್ ಎಂಬವರ ಪುತ್ರಿ ಆಯಿಷಾ ಸೆಯಾ (4) ಎಂದು ಗುರುತಿಸಲಾಗಿದೆ.
ಮನೆ ಸಮೀಪ ಈ ದುರ್ಘಟನೆ ನಡೆದಿದ್ದು, ಶಾಲೆ ಬಿಟ್ಟು ಮನೆ ಬಳಿ ಬಾಲಕಿಯನ್ನು ಇಳಿಸಿ ಬಸ್ ರಿವರ್ಸ್ ತೆಗೆಯುತ್ತಿದ್ದ ವೇಳೆ ಬಾಲಕಿ ಬಸ್ಸಿನಡಿ ಸಿಲುಕಿದ್ದಾಳೆ.
ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿನಿಯನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ತಲುಪಿಸಿದರು. ಆದರೆ ಮಾರ್ಗ ಮಧ್ಯೆಯೇ ಬಾಲಕಿ ಮೃತಪಟ್ಟಿದ್ದಳು.
ಈ ಸಂಬಂಧ ಕಾಸರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Discussion about this post