ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಚುನಾವಣೆ ಪ್ರಚಾರ ಮುಗಿದ ಬಳಿಕ ಕೇದಾರಾನಾಥ ದೇವಾಲಯದ ಬಳಿ ಗುಹೆಯೊಂದರಲ್ಲಿ ಕುಳಿತು ಧ್ಯಾನ ಮಾಡಿದ ಬಳಿಕ ಆ ಗುಹೆಗೆ ಈಗ ಭಾರಿ ಡಿಮಾಂಡ್ ಬಂದಿದೆ. ಅಲ್ಲಿ ಕುಳಿತು ಧ್ಯಾನ ಮಾಡುವವರ ಸಂಖ್ಯೆ ಸಿಕ್ಕಾಪಟ್ಟೆ ಹೆಚ್ಚಾಗಿದೆ.
ಈ ಗುಹೆಯನ್ನು ಗರ್ವಾಲ್ ಮಂಡಲ್ ವಿಕಾಸ್ ನಿಗಮ ಲಿಮಿಟೆಡ್(gmvn) ನಿರ್ವಹಿಸುತ್ತಿದ್ದು, ವೆಬ್ ಸೈಟ್ ನಲ್ಲಿ ಆನ್ ಲೈನ್ ಮೂಲಕ ಬುಕ್ ಮಾಡಬಹುದಾಗಿದೆ.
ಇನ್ನು ನಿಮಗೂ ಮೋದಿಯವರು ಧ್ಯಾನ ಮಾಡಿದ ಗುಹೆಯಲ್ಲಿ ಧ್ಯಾನ ಮಾಡಬೇಕು ಎಂದು ಅನ್ನಿಸಿದರೆ ನಿಮಗೂ ಅವಕಾಶ ಲಭ್ಯ. ಆದ್ರೆ 1500 ರೂಪಾಯಿ ಬಾಡಿಗೆ ನಿಗದಿಗೊಳಿಸಲಾಗಿದೆ.
ಪ್ರಧಾನಿ ಮೋದಿ ಧ್ಯಾನಕ್ಕೆ ಕುಳಿತ ಗುಹೆಗೆ ಒಂದು ದಿನಕ್ಕೆ 1500 ರೂ. ಬಾಡಿಗೆ ನಿಗದಿಪಡಿಸಲಾಗಿದ್ದು, ಈಗಾಗಲೇ ಜುಲೈ ತಿಂಗಳ ಪೂರ್ತಿ ಧ್ಯಾನಗುಹೆ ಬುಕ್ ಆಗಿದೆ. ಹೀಗಾಗಿ ಜುಲೈ ನಲ್ಲಿ ಧ್ಯಾನದ ಆಸೆ ಬಿಟ್ಟು ಬಿಡಿ.
ಇನ್ನು ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ನಲ್ಲಿ ಕೆಲ ದಿನಾಂಕಗಳು ಮಾತ್ರ ಮುಂಗಡ ಬುಕ್ ಆಗಿವೆ ಹೀಗಾಗಿ ಟ್ರೈ ಮಾಡಬಹುದು.
ವಿಶೇಷ ಅಂದ್ರೆ ಕಳೆದ ಮೇ ತಿಂಗಳಲ್ಲಿ ಪ್ರಧಾನಿ ಮೋದಿ ಅವರು ಈ ಗುಹೆಯಲ್ಲಿ ಧ್ಯಾನ ಮಾಡಿದ ಬಳಿಕ ಒಂದು ದಿನವೂ ಈ ಗುಹೆ ಖಾಲಿ ಉಳಿದಿಲ್ಲವಂತೆ.
ಗುಹೆಯಲ್ಲಿ ಧ್ಯಾನ ಮಾಡುವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಎಂವಿಎನ್, ಸುಮಾರು 12,500 ಅಡಿ ಎತ್ತರದಲ್ಲಿ ಇನ್ನೂ ಮೂರು ಗುಹೆಯಗಳನ್ನು ನಿರ್ಮಿಸಲು ನಿರ್ಧರಿಸಿದೆ.
Discussion about this post